AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಬಾಯಿಹುಣ್ಣು ವಿಪರೀತ ನೋವನ್ನು ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 26, 2024 | 10:58 AM

Share

ಬಾಯಿಹುಣ್ಣು, ಸಾಮಾನ್ಯವಾಗಿ ಎಲ್ಲರನ್ನೂ ಕಾಡಿರುತ್ತದೆ. ಆಹಾರ ಸೇವನೆಯಲ್ಲಿ ಬದಲಾವಣೆ, ಜೀವನಶೈಲಿಯಲ್ಲಿ ವ್ಯತ್ಯಾಸ, ದೇಹದಲ್ಲಿ ಉಷ್ಣತೆಯಾದರೆ ಬಾಯಿ, ತುಟಿಯ ಒಳಗೆ ಗುಳ್ಳೆಗಳಾಗುತ್ತವೆ. ಇದು ವಿಪರೀತ ನೋವು ಮತ್ತು ಹಿಂಸೆ ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

*ಬಾಯಿಯ ಹುಣ್ಣಿಗೆ ಪೇರಳೆ ಎಲೆ ರಾಮಬಾಣವಾಗಿದೆ. ಈ ಎಲೆಯ ಚಿಗುರನ್ನು ನೀರಿನಲ್ಲಿ ಕುದಿಸಿ, ಕಷಾಯದ ರೀತಿಯಲ್ಲಿ ಸೇವನೆ ಮಾಡಬಹುದು ಅಥವಾ ಆ ಚಿಗುರನ್ನು ಅಗೆದು ತಿನ್ನುವುದರಿಂದಲೂ ಬಾಯಿಹುಣ್ಣಿನಿಂದ ಒಂದೇ ದಿನದಲ್ಲಿ ಮುಕ್ತಿ ಸಿಗುತ್ತದೆ.

*ಬಾಯಿ ಹುಣ್ಣನ್ನು ನಿವಾರಿಸಲು ತುಪ್ಪ ಮತ್ತು ಉಪ್ಪಿನ ಸೇವನೆ ಒಳ್ಳೆಯದು. ಆಹಾರದಲ್ಲಿ ತುಪ್ಪವನ್ನು ಸೇವನೆ ಮಾಡುವುದಿರಬಹುದು ಅಥವಾ ಆ ಹುಣ್ಣಿನ ಮೇಲೆ ತುಪ್ಪವನ್ನು ಹಚ್ಚುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಇನ್ನು ಉಪ್ಪು ಮತ್ತು ತುಪ್ಪವನ್ನು ಸೇರಿಸಿ ಹುಣ್ಣಿನ ಮೇಲೆ ಇಡುವುದರಿಂದ ಒಂದೇ ದಿನದಲ್ಲಿ ನೋವಿನ ಜೊತೆಗೆ ಬಾಯಿಯ ಹುಣ್ಣು ಕೂಡ ಮಾಯವಾಗುತ್ತದೆ.

*ಉಪ್ಪು ನೀರಿನಿಂದ ಚೆನ್ನಾಗಿ ಬಾಯಿ ಮುಕ್ಕಳಿಸುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಆದರೆ ಇದು ವಾಸಿಯಾಗಲು ಸಮಯ ತೆಗೆದುಕೊಳ್ಳಬಹುದು.

*ಬಾಯಿ ಹುಣ್ಣಿಗೆ ಇನ್ನೊಂದು ಪರಿಣಾಮಕಾರಿ ಮನೆಮದ್ದು ಎಂದರೆ ಅದು ಲವಂಗ. ಪ್ರತಿದಿನ ಒಂದೆರಡು ಲವಂಗವನ್ನು ಜಗಿದು, ಅದರ ರಸವನ್ನು ಹುಣ್ಣುಗಳಿಗೆ ತಾಗುವಂತೆ ಮಾಡಬೇಕು. ಈ ರೀತಿ ಮಾಡುವುದರಿಂದ ಬಹಳ ಬೇಗ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಕುಳಿತಿರುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ; ಡಾ. ದೇವಿ ಪ್ರಸಾದ್ ಶೆಟ್ಟಿ

*ಬಾಯಿಹುಣ್ಣು ಅಥವಾ ಅಲ್ಸರ್‌‌ನಂತಹ ಸಮಸ್ಯೆ ಇರುವವರು ಪ್ರತಿದಿನ ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ