AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು?

ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ವ್ಯಾಯಾಮ ಮಾಡಲು ಜಿಮ್ ಗಳಿಗೆ ಹೋಗುವವರ ಎಣಿಕೆಯೂ ಹೆಚ್ಚುತ್ತಿದೆ. ಆದರೆ ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.

ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 12, 2024 | 12:48 PM

Share

ಹೃದಯದ ಆರೈಕೆ ಸರಿಯಾಗಿದ್ದರೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಕಾಡದು. ಇಂದಿನ ಆಧುನಿಕ ಯುಗದಲ್ಲಿ ಜನರಿಗೆ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಾಡುವುದು ಸಾಮಾನ್ಯವಾಗಿದೆ. ಇದಕ್ಕೆ ಹಲವಾರು ರೀತಿಯ ಕಾರಣಗಳು ಇರಬಹುದು. ಆದರೆ ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಹಾಗಾಗಿ ಪ್ರತಿನಿತ್ಯ ತಪ್ಪದೆ ವ್ಯಾಯಾಮ ಮಾಡುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಇದಕ್ಕೆ ಪೂರಕವೆಂಬಂತೆ ಇತ್ತೀಚಿನ ದಿನಗಳಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ವ್ಯಾಯಾಮ ಮಾಡಲು ಜಿಮ್ ಗಳಿಗೆ ಹೋಗುವವರ ಎಣಿಕೆಯೂ ಹೆಚ್ಚುತ್ತಿದೆ. ಆದರೆ ಹೃದಯದ ಆರೋಗ್ಯ ಕಾಪಾಡಲು ಎಷ್ಟು ಹೊತ್ತು ವ್ಯಾಯಾಮ ಮಾಡುವುದು ಒಳ್ಳೆಯದು? ಈ ಬಗ್ಗೆ ವೈದ್ಯರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.

ಊಟವಾದ ಮೇಲೆ ಸ್ನಾನ, ವ್ಯಾಯಾಮ ಮಾಡುವುದು ನಿಷಿದ್ಧವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ, ಯೋಗ ಅಥವಾ ಪ್ರಾಣಾಯಾಮ ಮಾಡುವುದು ಒಳ್ಳೆಯದು. ಬೇಕಾದರೆ ನೀವು ಸ್ವಲ್ಪ ನೀರು ಅಥವಾ ಹಾಲನ್ನು ಕುಡಿದು ವ್ಯಾಯಾಮ ಮಾಡಬಹುದು. ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಬಯಸುವವರು, ಪ್ರತಿದಿನ 40- 45 ನಿಮಿಷ ವ್ಯಾಯಾಮ ಮಾಡಿದರೆ ದೇಹಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಅದರಲ್ಲಿಯೂ ನಿಮ್ಮ ಹಣೆ ಮತ್ತು ಕಂಕುಳಲ್ಲಿ ಬೆವರು ಬಂದಾಗ ವ್ಯಾಯಾಮ ಮಾಡುವುದನ್ನು ನಿಲ್ಲಿಸಬೇಕು. ಇದನ್ನು ಆಯುರ್ವೇದದಲ್ಲಿಯೂ ಕೂಡ ಹೇಳಲಾಗಿದೆ.

ಇದನ್ನೂ ಓದಿ: ವಿಟಮಿನ್ ಬಿ ಕಾಂಪ್ಲೆಕ್ಸ್ ಎಂದರೇನು, ದೇಹಕ್ಕೆ ಏಕೆ ಮುಖ್ಯ?

ವೈದ್ಯರ ಸಲಹೆ ಪಡೆಯಿರಿ

ಅತಿಯಾದ ವ್ಯಾಯಾಮ ಒಳ್ಳೆಯದಲ್ಲ. ಅಥವಾ ಹೊಟ್ಟೆ ತುಂಬಾ ತಿಂದು ವ್ಯಾಯಾಮ ಮಾಡಬಾರದು ಇವೆಲ್ಲವೂ ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ. ಅದರಲ್ಲಿಯೂ ಅತಿಯಾಗಿ ವ್ಯಾಯಾಮ ಮಾಡುವವರು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಯಾವುದೇ ಆಗಲಿ ಹಿತ, ಮಿತದಲ್ಲಿರಬೇಕು. ಈ ಕಾರಣಗಳಿಂದ ವ್ಯಾಯಾಮ ಮಾಡುವ ಮೊದಲು ವೈದ್ಯರ ಸಲಹೆ ಪಡೆಯಿರಿ. ಬಳಿಕ ನಿಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ವ್ಯಾಯಾಮ ಮಾಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!