AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆನ್ನು ನೋವನ್ನು ಕಡಿಮೆ ಮಾಡಲು ಸರಳ ವ್ಯಾಯಾಮ..!

ಸರಳವಾದ ವ್ಯಾಯಾಮದ ಮೂಲಕ ಬೆನ್ನು ನೋವನ್ನು ಸುಲಭವಾಗಿ ನಿವಾರಿಸಬಹುದು. ಪ್ರತಿದಿನ 30-45 ನಿಮಿಷಗಳ ಕಾಲ ನಡೆಯುವುದರಿಂದ ಬೆನ್ನು ನೋವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ. ನಡಿಗೆಯಿಂದಾಗುವ ಇನ್ನಷ್ಟು ಪ್ರಯೋಜನಗಳನ್ನು ಇಲ್ಲಿ ತಿಳಿದುಕೊಳ್ಳಿ.

Health Tips: ಬೆನ್ನು ನೋವನ್ನು ಕಡಿಮೆ ಮಾಡಲು ಸರಳ ವ್ಯಾಯಾಮ..!
ಅಕ್ಷತಾ ವರ್ಕಾಡಿ
|

Updated on: Jul 16, 2024 | 7:04 PM

Share

ಇಂದು ಹೆಚ್ಚಿನ ಜನರು ದೀರ್ಘಕಾಲದ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಇದಕ್ಕೆ ಕಾರಣಗಳೆಂದರೆ ದೀರ್ಘಕಾಲ ಕುಳಿತುಕೊಳ್ಳುವುದು ಮತ್ತು ಅಪೌಷ್ಟಿಕತೆ, ದುರ್ಬಲ ಬೆನ್ನುಮೂಳೆ, ಬೊಜ್ಜು, ಒತ್ತಡ ಮತ್ತು ಭಾರ ಎತ್ತುವುದು. ಇಂತಹ ಬೆನ್ನು ನೋವನ್ನು ನಿವಾರಿಸಲು ಕೆಲವರು ನೋವು ನಿವಾರಕಗಳನ್ನು ಸೇವಿಸುತ್ತಾರೆ. ಆದರೆ ಅವೆಲ್ಲವೂ ತಾತ್ಕಾಲಿಕ. ಆದಾಗ್ಯೂ, ಸರಳವಾದ ವ್ಯಾಯಾಮದ ಮೂಲಕ ಬೆನ್ನು ನೋವನ್ನು ಸುಲಭವಾಗಿ ನಿವಾರಿಸುತ್ತದೆ. ಅದುವೇ ವಾಕಿಂಗ್. ಪ್ರತಿದಿನ 30-45 ನಿಮಿಷಗಳ ಕಾಲ ನಡೆಯುವುದರಿಂದ ಬೆನ್ನು ನೋವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಸಲಹೆ ನೀಡುತ್ತಾರೆ.

ರಕ್ತದ ಹರಿವನ್ನು ಹೆಚ್ಚಿಸುತ್ತದೆ:

ಸಾಮಾನ್ಯವಾಗಿ, ಸಕ್ರಿಯವಾಗಿರುವುದು ರಕ್ತನಾಳಗಳು ಮತ್ತು ಸ್ನಾಯುಗಳನ್ನು ಒಳಗೊಂಡಂತೆ ದೇಹದಾದ್ಯಂತ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಹೀಗಾಗಿ, ಇದು ದೇಹದ ಇತರ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಒಯ್ಯುತ್ತದೆ. ಸ್ನಾಯು ಅಂಗಾಂಶದಲ್ಲಿನ ವಿಷಗಳು ಹೊರಹಾಕಲ್ಪಡುತ್ತವೆ.

ಸ್ನಾಯುಗಳನ್ನು ಬಲಪಡಿಸುತ್ತದೆ:

ವಾಕಿಂಗ್ ಬೆನ್ನುಮೂಳೆಯನ್ನು ಸ್ಥಿರಗೊಳಿಸುವ ಬೆನ್ನು ಮತ್ತು ಕಾಲಿನ ಸ್ನಾಯುಗಳನ್ನು ಬಲಗೊಳಿಸುತ್ತದೆ. ಆದ್ದರಿಂದ, ದಿನಕ್ಕೆ ಕನಿಷ್ಠ 30 ನಿಮಿಷಗಳ ಕಾಲ ನಡೆಯಿರಿ.

ಕ್ಯಾಲೊರಿಗಳನ್ನು ಸುಡುತ್ತದೆ:

ವಾಕಿಂಗ್ ದೇಹವು ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ. ಇದು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಮತ್ತು ಬೆನ್ನಿನ ಮೇಲೆ ಒತ್ತಡವನ್ನು ಉಂಟುಮಾಡುವ ಹೆಚ್ಚಿನ ತೂಕವನ್ನು ಕಳೆದುಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.

ಮತ್ತಷ್ಟು ಓದಿ: ಚರ್ಮದ ಆರೋಗ್ಯದಿಂದ ಹಿಡಿದು ಮಧುಮೇಹದವರೆಗೆ ಎಲ್ಲದಕ್ಕೂ ಕರಿಬೇವಿನ ಎಲೆ!

ಒತ್ತಡವನ್ನು ಕಡಿಮೆ ಮಾಡುತ್ತದೆ:

ದೀರ್ಘಕಾಲದ ಬೆನ್ನು ನೋವು ಒತ್ತಡ ಮತ್ತು ಆತಂಕವನ್ನು ಉಂಟುಮಾಡಬಹುದು, ಇದು ನೋವನ್ನು ಇನ್ನಷ್ಟು ಹದಗೆಡಿಸುತ್ತದೆ. ಆದಾಗ್ಯೂ, ವಾಕಿಂಗ್ ಒತ್ತಡವನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಬೆನ್ನುನೋವಿನ ಪರಿಹಾರಕ್ಕೆ ಪರೋಕ್ಷವಾಗಿ ಕೊಡುಗೆ ನೀಡಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ