AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ಸಮಸ್ಯೆ ಇರುವವರಿಗೆ ಎಳನೀರು ವಿಷಕ್ಕೆ ಸಮಾನ

ಎಳನೀರಿನಲ್ಲಿ ಸಾಕಷ್ಟು ರೀತಿಯ ಪೋಷಕಾಂಶಗಳಿವೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದರಲ್ಲಿ ಸಂದೇಹವಿಲ್ಲ. ಎಳನೀರು ದೇಹದ ನಿರ್ಜಲೀಕರಣದಿಂದ ನಮ್ಮನ್ನು ರಕ್ಷಿಸುತ್ತದೆ. ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುತ್ತದೆ. ಆದರೆ ಎಳನೀರು ಕುಡಿಯುವ ಮೊದಲು, ಅದು ನಿಮ್ಮ ದೇಹಕ್ಕೆ ಆರೋಗ್ಯಕರವೇ ಅಥವಾ ಅಲ್ಲವೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಳನೀರು ಕುಡಿಯುವುದರಿಂದ ಎಲ್ಲರಿಗೂ ಒಳ್ಳೆಯ ಫಲಿತಾಂಶವೇ ಸಿಗಬೇಕು ಎಂಬುದಿಲ್ಲ. ನೀವು ಕೂಡ ಇಲ್ಲಿ ಕೆಳಗೆ ತಿಳಿಸಿರುವ 5 ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ. ಎಳನೀರು ಕುಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ, ನಿಮ್ಮ ಆರೋಗ್ಯವೂ ಹದಗೆಡಬಹುದು ಎಂದು ತಜ್ಞರು ಹೇಳುತ್ತಾರೆ.

Health Tips: ಈ ಸಮಸ್ಯೆ ಇರುವವರಿಗೆ ಎಳನೀರು ವಿಷಕ್ಕೆ ಸಮಾನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 08, 2024 | 4:39 PM

Share

ಎಳನೀರು ಅಮೃತಕ್ಕೆ ಸಮಾನ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಎಳನೀರು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ ಇಷ್ಟೆಲ್ಲಾ ಒಳ್ಳೆಯ ಗುಣಗಳನ್ನು ಹೊಂದಿರುವ ಈ ಎಳನೀರು, ಕೆಲವು ಆರೋಗ್ಯ ಸಮಸ್ಯೆಗಳಿರುವವರು ಕುಡಿಯುವುದರಿಂದ ಅವು ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ತಜ್ಞರು ಹೇಳುತ್ತಾರೆ. ವಾಸ್ತವದಲ್ಲಿ, ಎಳನೀರಿನಲ್ಲಿ ಸಾಕಷ್ಟು ರೀತಿಯ ಪೋಷಕಾಂಶಗಳಿವೆ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದರಲ್ಲಿ ಸಂದೇಹವಿಲ್ಲ. ಎಳನೀರು ದೇಹದ ನಿರ್ಜಲೀಕರಣದಿಂದ ನಮ್ಮನ್ನು ರಕ್ಷಿಸುತ್ತದೆ. ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುತ್ತದೆ. ಆದರೆ ಎಳನೀರು ಕುಡಿಯುವ ಮೊದಲು, ಅದು ನಿಮ್ಮ ದೇಹಕ್ಕೆ ಆರೋಗ್ಯಕರವೇ ಅಥವಾ ಅಲ್ಲವೇ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಳನೀರು ಕುಡಿಯುವುದರಿಂದ ಎಲ್ಲರಿಗೂ ಒಳ್ಳೆಯ ಫಲಿತಾಂಶವೇ ಸಿಗಬೇಕು ಎಂಬುದಿಲ್ಲ. ನೀವು ಕೂಡ ಇಲ್ಲಿ ಕೆಳಗೆ ತಿಳಿಸಿರುವ 5 ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ. ಎಳನೀರು ಕುಡಿಯುವುದನ್ನು ತಪ್ಪಿಸಿ. ಇಲ್ಲದಿದ್ದರೆ, ನಿಮ್ಮ ಆರೋಗ್ಯವೂ ಹದಗೆಡಬಹುದು ಎಂದು ತಜ್ಞರು ಹೇಳುತ್ತಾರೆ.

ಯಾವ ಸಮಸ್ಯೆ ಇರುವವರು ಎಳನೀರನ್ನು ಕುಡಿಯಬಾರದು;

ಮೂತ್ರಪಿಂಡದ ಕಾಯಿಲೆ: ಎಳನೀರಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಸಾಮಾನ್ಯವಾಗಿ ಮೂತ್ರಪಿಂಡದ ಸಮಸ್ಯೆ ಇರುವವರು ಇದನ್ನು ಕುಡಿಯಬಾರದು ಜೊತೆಗೆ ಪೊಟ್ಯಾಸಿಯಮ್ ಕಡಿಮೆ ಮಾಡುವ ಔಷಧಿಗಳನ್ನು ಬಳಸುವವರಿಗೆ ಇದು ಹಾನಿಕಾರಕವಾಗಿದೆ.

ರಕ್ತದೊತ್ತಡ: ಬಿಪಿ ಇದ್ದವರು ವೈದ್ಯರನ್ನು ಸಂಪರ್ಕಿಸದೆ ಎಳನೀರನ್ನು ಕುಡಿಯಬೇಡಿ. ವಾಸ್ತವವದಲ್ಲಿ ಇದು ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ಹದಗೆಡಿಸಿ ನಿಮ್ಮ ಆರೋಗ್ಯವನ್ನು ಹಾಳು ಮಾಡಬಹುದು.

ಮಧುಮೇಹ: ಎಳನೀರಿನಲ್ಲಿ ನೈಸರ್ಗಿಕ ಸಕ್ಕರೆ ಅಂಶವಿರುತ್ತದೆ. ಮಧುಮೇಹ ರೋಗಿಗಳು ಈ ಕಾರಣದಿಂದಾಗಿ ಬಹಳ ಸೀಮಿತ ಪ್ರಮಾಣದ ಎಳನೀರನ್ನು ಕುಡಿಯಬೇಕು ಎಂದು ತಜ್ಞರು ಸೂಚಿಸುತ್ತಾರೆ. ಇಲ್ಲದಿದ್ದರೆ, ರಕ್ತದಲ್ಲಿನ ಸಕ್ಕರೆ ಹೆಚ್ಚಾಗುವ ಅಪಾಯವಿದೆ.

ಜೀರ್ಣಕಾರಿ ಸಮಸ್ಯೆಗಳು: ಎಳನೀರು ಕುಡಿದ ನಂತರ ಅನೇಕರು ಹೊಟ್ಟೆ ನೋವು ಅಥವಾ ಅತಿಸಾರದಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಜೀರ್ಣಾಂಗ ವ್ಯವಸ್ಥೆಯಲ್ಲಿ ನಿಮಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ನೀವು ಎಳನೀರನ್ನು ಸೀಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಿ.

ತೂಕ ಹೆಚ್ಚಾಗುವ ಅಪಾಯ: ಎಳನೀರು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದ್ದರೂ, ಕೆಲವು ಸಂದರ್ಭಗಳಲ್ಲಿ ಅದರಲ್ಲಿ ಕ್ಯಾಲೊರಿ ಅಂಶ ಹೆಚ್ಚಾಗಿರುವುದರಿಂದ ತೂಕ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಇದನ್ನು ನಿಯಮಿತವಾಗಿ ಕುಡಿಯುವುದನ್ನು ತಪ್ಪಿಸಿ. ಇದು ನಿಮ್ಮ ತೂಕ ಇಳಿಕೆಗೆ ಅಡ್ಡಿ ಪಡಿಸಬಹುದು.

(ಸೂಚನೆ: ಇಲ್ಲಿ ನೀಡಿರುವ ವಿಷಯಗಳು ಕೇವಲ ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದರೂ ಕೂಡ ತಜ್ಞರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!