AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎದೆಹಾಲುಣಿಸುವುದರಿಂದ ತಾಯಂದಿರಲ್ಲಿ ಖಿನ್ನತೆ ಉಂಟಾಗುತ್ತಾ?; ಇಲ್ಲಿದೆ ಮಾಹಿತಿ

ಹಾಲುಣಿಸುವ ತಾಯಂದಿರು ಸಮತೋಲಿತ ಜೀವನಶೈಲಿಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅನಾರೋಗ್ಯಕರ ಆಹಾರ, ಮಗುವಿನ ಒತ್ತಡ ಮತ್ತು ನಿದ್ರೆಯ ಕೊರತೆಯಂತಹ ಅಂಶಗಳು ಅವರ ಖಿನ್ನತೆಗೆ ಕಾರಣವಾಗಬಹುದು.

ಎದೆಹಾಲುಣಿಸುವುದರಿಂದ ತಾಯಂದಿರಲ್ಲಿ ಖಿನ್ನತೆ ಉಂಟಾಗುತ್ತಾ?; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Sep 03, 2023 | 6:38 PM

ಮಗುವಿಗೆ ಆರೇಳು ತಿಂಗಳವರೆಗೆ ತಾಯಿಯ ಎದೆ ಹಾಲೊಂದೇ (Breast Milk) ಆಹಾರ. ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಎದೆ ಹಾಲು ಪ್ರಮುಖ ಪಾತ್ರ ವಹಿಸುವುದರಿಂದ ಇದನ್ನು ಮಕ್ಕಳ ಪಾಲಿನ ಅಮೃತವೆಂದೇ ಹೇಳಬಹುದು. ಆದರೆ, ಎದೆ ಹಾಲುಣಿಸುವ ತಾಯಿಯರಲ್ಲಿ ಕೆಲವರಲ್ಲಿ ಖಿನ್ನತೆ (Depression) ಉಂಟಾಗುತ್ತದೆ. ಈ ಖಿನ್ನತೆ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಸ್ತನ್ಯಪಾನ (Breastfeeding) ತಾಯಂದಿರ ಕರ್ತವ್ಯವಾದರೂ ಅದು ಕೆಲವು ಮಹಿಳೆಯರ ಮನಸಿನ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ ಎನ್ನಲಾಗಿದೆ.

ಸ್ತನ್ಯಪಾನ ಮಾಡುವಾಗ ನೀವು ಖಿನ್ನತೆಯನ್ನು ಅನುಭವಿಸುತ್ತಿದ್ದರೆ ಅಥವಾ ಅಗಾಧವಾದ ದುಃಖ ಅನುಭವಿಸುತ್ತಿದ್ದರೆ, ನೀವು D-MER ಅಥವಾ ಡೈಸ್ಫೋರಿಕ್ ಮಿಲ್ಕ್ ಎಜೆಕ್ಷನ್ ರಿಫ್ಲೆಕ್ಸ್ ಎಂದು ಕರೆಯಲ್ಪಡುವ ಸಮಸ್ಯೆಯನ್ನು ಎದುರಿಸುತ್ತಿರಬಹುದು. ಈ ರೀತಿ ಸ್ತನ್ಯಪಾನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವ ಅನೇಕ ಮಹಿಳೆಯರು ಇದ್ದಾರೆ. ಹೊಸ ತಾಯಂದಿರು ಕೆಲವೊಮ್ಮೆ ತನಗೆ ಮಗುವಿಗೆ ಸರಿಯಾಗಿ ಹಾಲುಣಿಸಲು ಸಾಧ್ಯವಾಗುತ್ತಿಲ್ಲ ಎಂಬ ಪಾಪಪ್ರಜ್ಞೆಯಿಂದ ಖಿನ್ನತೆಗೆ ಒಳಗಾಗಬಹುದು. ಇನ್ನು ಕೆಲವರು ದಿನಕ್ಕೆ 10-12 ಬಾರಿ ಹಾಲುಣಿಸಿ ಅದರಿಂದಲೇ ಖಿನ್ನತೆ ಅನುಭವಿಸಬಹುದು.

ಇದನ್ನೂ ಓದಿ: ಸ್ತನ್ಯಪಾನ, ವ್ಯಾಯಾಮ, ಎದೆಹಾಲಿನ ದಾನ: ಬಾಳಂತಿಯರು ತಿಳಿದುಕೊಳ್ಳಲೇಬೇಕಾದ ಸಂಗತಿಗಳು

ಸ್ತನ್ಯಪಾನ ತಾಯಿ ಮತ್ತು ಮಗುವಿನ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಕ್ರಿಯೆ. ಆದರೆ, ಇದು ತಾಯಿಯ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆಯೂ ಇದೆ. ಹಾಲುಣಿಸುವ ಸಮಯದಲ್ಲಿ ಹಾರ್ಮೋನುಗಳ ಬದಲಾವಣೆಗಳು ಖಿನ್ನತೆಯ ಲಕ್ಷಣಗಳನ್ನು ಪ್ರಚೋದಿಸುವ ಅಥವಾ ಉಲ್ಬಣಗೊಳಿಸುವಲ್ಲಿ ಪಾತ್ರವನ್ನು ವಹಿಸುತ್ತವೆ ಎಂದು ನಂಬಲಾಗಿದೆ. ಆದ್ದರಿಂದ, ಹಾಲುಣಿಸುವ ತೊಂದರೆಗಳನ್ನು ಅನುಭವಿಸಿದ ಮಹಿಳೆಯರು ಪ್ರಸವಾನಂತರದ ಖಿನ್ನತೆಯ ಲಕ್ಷಣಗಳನ್ನು ಹೊಂದುವ ಸಾಧ್ಯತೆಯಿದೆ.

ಹಾಲುಣಿಸುವ ತಾಯಂದಿರು ಸಮತೋಲಿತ ಜೀವನಶೈಲಿಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಅನಾರೋಗ್ಯಕರ ಆಹಾರ, ಮಗುವಿನ ಒತ್ತಡ ಮತ್ತು ನಿದ್ರೆಯ ಕೊರತೆಯಂತಹ ಅಂಶಗಳು ಅವರ ಖಿನ್ನತೆಗೆ ಕಾರಣವಾಗಬಹುದು. ಹೀಗಾಗಿ, ಹಾಲುಣಿಸುವ ಮಹಿಳೆಯರಿಗೆ ಅವರ ಗಂಡನ ಕಾಳಜಿ ಬಹಳ ಮುಖ್ಯ.

ಅನೇಕ ಮಹಿಳೆಯರು ತಮ್ಮ ಶಿಶುಗಳಿಗೆ ಹಾಲುಣಿಸಲು ಅಪಾರ ಒತ್ತಡವನ್ನು ಅನುಭವಿಸುತ್ತಾರೆ. ಹೀಗಾಗಿ, ಎದೆಹಾಲಿನ ಬದಲು ಫಾರ್ಮುಲಾ ಹಾಲನ್ನು ಕೂಡ ನೀಡುವ ಪದ್ಧತಿ ಈಗೀಗ ಹೆಚ್ಚಾಗುತ್ತಿದೆ. ಇನ್ನು ಕೆಲವು ಮಹಿಳೆಯರಿಗೆ ಎದೆ ಹಾಲುಣಿಸುವುದರಿಂದ ತಮ್ಮ ಆರೋಗ್ಯ ಹದಗೆಡುತ್ತಿದೆ ಎಂಬ ಯೋಚನೆಯೇ ಖಿನ್ನತೆಗೆ ಕಾರಣವಾಗಬಹುದು.

ಇದನ್ನೂ ಓದಿ: Breast feeding: ಮಗುವಿಗೆ ಎಷ್ಟು ಸಮಯಗಳವರೆಗೆ ಎದೆಹಾಲು ಉಣಿಸಬೇಕು? ತಾಯಿ ದೇಹದಲ್ಲಿರುವ ಗಾಯ ಮಾಯವಾಗಲು ಸ್ತನ್ಯಪಾನ ಉತ್ತಮ

ನಮ್ಮ ಜೀವನದಲ್ಲಿ ಬೇಸರವಾಗುವ ಘಟನೆಗಳು ನಡೆದಾಗ ನಮಗೆ ದುಃಖವಾಗುವುದು ಸಹಜ. ಆದರೆ ಈ ಭಾವನೆ ತುಂಬಾ ದಿನಗಳವರೆಗೆ ಇದ್ದರೆ ಅಥವಾ ಮತ್ತೆ ಮತ್ತೆ ಕಾಣಿಸಿಕೊಂಡರೆ ಎಚ್ಚರ ವಹಿಸುವುದು ಅಗತ್ಯ. ಖಿನ್ನತೆ ಉಂಟಾದರೆ ದಿನನಿತ್ಯದ ಚಟುವಟಿಕೆಗಳಲ್ಲಿ ಆಲೋಚಿಸುವ, ನಾವು ತೊಡಗಿಸಿಕೊಳ್ಳುವ ರೀತಿಯು ಬದಲಾಗುತ್ತದೆ. ಖಿನ್ನತೆಯು ವೃತ್ತಿ, ಶಿಕ್ಷಣ, ಊಟ, ನಿದ್ರೆ, ಭಾವನೆಗಳು, ವರ್ತನೆ, ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ತೀವ್ರವಾದ ಖಿನ್ನತೆ ಇರುವ ವ್ಯಕ್ತಿ ಆತ್ಮಹತ್ಯೆಯ ಪ್ರಯತ್ನ ಕೂಡ ಮಾಡಬಹುದು. ಖಿನ್ನತೆ ಕೂಡ ಒಂದು ರೋಗ. ಇದನ್ನು ನಮ್ಮ ಮನಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ ಬಗೆಹರಿಸಿಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ