AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹಿಗಳಿಗೆ ಬೇಲದ ಹಣ್ಣಿನ ಶರಬತ್ ಕುಡಿಯುವುದರಿಂದ ಏನು ಉಪಯೋಗ?

ಬೇಲದ ಹಣ್ಣಿನ ಶರಬತ್ ಸಾಂಪ್ರದಾಯಿಕ ಪಾಕವಿಧಾನವಾಗಿದ್ದು, ಬೇಸಿಗೆಯಲ್ಲಿ ಇದನ್ನು ಹೆಚ್ಚಾಗಿ ಮಾಡಲಾಗುತ್ತದೆ. ಇದರ ನೈಸರ್ಗಿಕ ಶೀತ ಅಂಶವು ನಿಮ್ಮ ಬಾಯಾರಿಕೆಯನ್ನು ನೀಗಿಸುವುದು ಮಾತ್ರವಲ್ಲದೆ ತಕ್ಷಣ ಶಕ್ತಿಯನ್ನು ಕೂಡ ನೀಡುತ್ತದೆ.

ಮಧುಮೇಹಿಗಳಿಗೆ ಬೇಲದ ಹಣ್ಣಿನ ಶರಬತ್ ಕುಡಿಯುವುದರಿಂದ ಏನು ಉಪಯೋಗ?
ಬೇಲದ ಹಣ್ಣಿನ ಜ್ಯೂಸ್
ಸುಷ್ಮಾ ಚಕ್ರೆ
|

Updated on: Oct 25, 2023 | 5:25 PM

Share

ಬೇಲದ ಹಣ್ಣು ರಕ್ತದಲ್ಲಿನ ಸಕ್ಕರೆ ಅಂಶವನ್ನು ಸಮತೋಲನಗೊಳಿಸುತ್ತದೆ. ಬೇಲದ ಎಲೆಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುವ ಫ್ಲೇವನಾಯ್ಡ್‌ಗಳು ಮತ್ತು ಪಾಲಿಫಿನಾಲ್‌ಗಳನ್ನು ಹೊಂದಿವೆ. ಇದು ಟೈಪ್ 2 ಡಯಾಬಿಟಿಸ್ ಹೊಂದಿರುವ ಜನರ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಬೇಲದ ಹಣ್ಣಿನ ಶರಬತ್ ಸಾಂಪ್ರದಾಯಿಕ ಪಾಕವಿಧಾನವಾಗಿದ್ದು, ಬೇಸಿಗೆಯಲ್ಲಿ ಇದನ್ನು ಹೆಚ್ಚಾಗಿ ಮಾಡಲಾಗುತ್ತದೆ. ಇದರ ನೈಸರ್ಗಿಕ ಶೀತ ಅಂಶವು ನಿಮ್ಮ ಬಾಯಾರಿಕೆಯನ್ನು ನೀಗಿಸುವುದು ಮಾತ್ರವಲ್ಲದೆ ತಕ್ಷಣ ಶಕ್ತಿಯನ್ನು ಕೂಡ ನೀಡುತ್ತದೆ. ಬೇಲದ ಹಣ್ಣಿನ ಜ್ಯೂಸ್ ಮಾಡಲು ಬೇಕಾದ ಪದಾರ್ಥಗಳು ಹೀಗಿವೆ:

3-4 ಮಧ್ಯಮ ಗಾತ್ರದ ಮಾಗಿದ ಬೇಲದ ಹಣ್ಣು

4 ಕಪ್ ತಣ್ಣನೆಯ ಹಾಲು

1 ಕಪ್ ನೀರು

12 ಸ್ಪೂನ್ ಬೆಲ್ಲದ ಪುಡಿ

2 ಚಮಚ ಏಲಕ್ಕಿ ಪುಡಿ

1 ಟೀಸ್ಪೂನ್ ಉಪ್ಪು

ಬೇಲದ ಜ್ಯೂಸ್ ಮಾಡುವ ವಿಧಾನ:

ಬೇಲದ ಹಣ್ಣುಗಳನ್ನು ತೊಳೆಯಿರಿ. ಅದರ ಸುತ್ತಲಿನ ಗಟ್ಟಿಯಾದ ಶೆಲ್ ಅನ್ನು ಒಡೆಯಿರಿ. ಒಡೆದ ನಂತರ ಅದರೊಳಗಿನ ತಿರುಳನ್ನು ಹೊರತೆಗೆಯಿರಿ. ಒಂದು ಪಾತ್ರೆಯಲ್ಲಿ ಬೇಲದ ತಿರುಳನ್ನು ತೆಗೆದುಕೊಂಡು ಅದಕ್ಕೆ ನೀರು ಸೇರಿಸಿ. ಆ ತಿರುಳು ಮೃದುವಾಗುವವರೆಗೆ ಮ್ಯಾಶ್ ಮಾಡಿ. ಅದರಲ್ಲಿರುವ ಗಟ್ಟಿ ಅಂಶಗಳು ಅಥವಾ ಕಲ್ಮಶಗಳನ್ನು ತೆಗೆದುಹಾಕಲು ಮಿಶ್ರಣವನ್ನು ಸೋಸಿಕೊಳ್ಳಿ. ಅದಕ್ಕೆ ತಣ್ಣಗಾದ ಹಾಲು, ಏಲಕ್ಕಿ ಪುಡಿ, ಬೆಲ್ಲ ಮತ್ತು ಉಪ್ಪನ್ನು ಸೇರಿಸಿ, ಮಿಕ್ಸ್ ಮಾಡಿ.

ಬೇಲದ ಹಣ್ಣಿನ ಜ್ಯೂಸ್​ ಅತ್ಯಂತ ಪೌಷ್ಟಿಕಾಂಶದ ಪಾನೀಯವಾಗಿದೆ. ಏಕೆಂದರೆ ಇದು ವಿವಿಧ ಆರೋಗ್ಯಕರ ಪದಾರ್ಥಗಳಿಂದ ತುಂಬಿರುತ್ತದೆ.

ಈ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಗ್ಯಾಸ್ಟ್ರಿಕ್ ಅಲ್ಸರ್ ಅನ್ನು ಗುಣಪಡಿಸುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಧುಮೇಹಕ್ಕೆ ಚಿಕಿತ್ಸೆ ನೀಡುತ್ತದೆ. ವಿರೇಚಕ ಗುಣವು ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಆಂಟಿಫಂಗಲ್ ಘಟಕಗಳು ಸೋಂಕನ್ನು ಕಡಿಮೆ ಮಾಡುತ್ತದೆ. ಬೇಲದ ಹಣ್ಣಿನ ಜ್ಯೂಸ್​ಗೆ ಹಾಕುವ ಹಾಲು ಕ್ಯಾಲ್ಸಿಯಂನ ಶಕ್ತಿ ಕೇಂದ್ರವಾಗಿದ್ದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ರೋಗನಿರೋಧಕ ಶಕ್ತಿ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Spinach Juice: ತಂಪಾದ ಪಾಲಕ್ ಜ್ಯೂಸ್​ ಕುಡಿದರೆ ಹಲವು ರೋಗಗಳನ್ನು ದೂರವಿಡಬಹುದು

ಬೇಲದ ಹಣ್ಣಿನ ಜ್ಯೂಸ್​ಗೆ ಹಾಕುವ ಬೆಲ್ಲವು ಸಕ್ಕರೆಯ ಸಂಸ್ಕರಿಸದ ರೂಪವಾಗಿದೆ. ಇದರಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿರುತ್ತದೆ. ಇದು ದೇಹವನ್ನು ಶುದ್ಧೀಕರಿಸುತ್ತದೆ, ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ, ರಕ್ತಹೀನತೆಯನ್ನು ತಡೆಯುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಮಲಬದ್ಧತೆಯನ್ನು ತಡೆಯುತ್ತದೆ.

ಈ ಜ್ಯೂಸ್​ಗೆ ಹಾಕುವ ಏಲಕ್ಕಿ ಸುಗಂಧಭರಿತ ಭಾರತೀಯ ಮಸಾಲೆಯಾಗಿದ್ದು, ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಜಠರಗರುಳಿನ ಅಸ್ವಸ್ಥತೆಗಳಿಗೆ ಚಿಕಿತ್ಸೆ ನೀಡುತ್ತದೆ, ಸೋಂಕುಗಳನ್ನು ತಡೆಯುತ್ತದೆ, ಬಾಯಿಯ ದುರ್ವಾಸನೆಗೆ ಚಿಕಿತ್ಸೆ ನೀಡುತ್ತದೆ.

ಬೇಲ್ ವಿಟಮಿನ್ ಎ, ಬಿ1, ಬಿ2, ಸಿ ಮತ್ತು ಖನಿಜಗಳು ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣದ ಅಂಶವನ್ನು ಒಳಗೊಂಡಿರುವ ಅಸಂಖ್ಯಾತ ಪೋಷಕಾಂಶಗಳನ್ನು ಹೊಂದಿದೆ. ಕ್ಷಯರೋಗ, ಹೆಪಟೈಟಿಸ್, ಹುಣ್ಣು ಮತ್ತು ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಇದು ಸಹಕಾರಿ.

ಬೇಲದ ಹಣ್ಣಿನ ಪ್ರಯೋಜನಗಳು:

ಹೃದಯದ ಆರೋಗ್ಯಕ್ಕಾಗಿ ಬೇಲದ ಹಣ್ಣು ಬಳಸಿ ನೋಡಿ. ಬೇಲದ ಹಣ್ಣುಗಳಲ್ಲಿ ಪೊಟ್ಯಾಸಿಯಮ್ ಅಧಿಕವಾಗಿರುತ್ತದೆ. ಅಧಿಕ ರಕ್ತದೊತ್ತಡ ಹೊಂದಿರುವ ಜನರಿಗೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರಗಳು ಸೂಕ್ತವಾಗಿವೆ. ಇದು ಹೃದಯರಕ್ತನಾಳದ ಕಾರ್ಯಗಳನ್ನು ಸುಧಾರಿಸುತ್ತದೆ. ಬೇಲದ ಹಣ್ಣುಗಳು ಪ್ರೊಲ್ಯಾಕ್ಟಿನ್ ಉತ್ಪಾದನೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಇದು ಎದೆ ಹಾಲಿನ ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೇಲದ ಹಣ್ಣಿನ ರಸವನ್ನು ಬೆಲ್ಲ ಮತ್ತು ಒಣ ಶುಂಠಿಯೊಂದಿಗೆ ಬೆರೆಸಿ ಸೇವಿಸಿದರೆ, ಹಾಲಿನ ಉತ್ಪಾದನೆ ಹೆಚ್ಚಾಗುತ್ತದೆ. ಹೀಗಾಗಿ, ಬಾಣಂತನದಲ್ಲಿ ಇದನ್ನು ನೀಡಲಾಗುತ್ತದೆ.

ಬೇಲದ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಮೊಡವೆಗಳನ್ನು ಕಡಿಮೆ ಮಾಡಲು ಮತ್ತು ಗಾಯಗಳನ್ನು ತ್ವರಿತವಾಗಿ ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಚರ್ಮದ ಕಿರಿಕಿರಿಯನ್ನು ಶಮನಗೊಳಿಸುತ್ತದೆ ಮತ್ತು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ. ಬೇಲದ ಹಣ್ಣುಗಳಲ್ಲಿ ವಿಟಮಿನ್ ಸಿ ಹೆಚ್ಚಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ರಕ್ತವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ನೆನಪಿನ ಶಕ್ತಿ, ಮೆದುಳಿನ ಆರೋಗ್ಯಕ್ಕೆ ಮನೆಯಲ್ಲೇ ತಯಾರಿಸಿದ 5 ಜ್ಯೂಸ್​ಗಳು ಇಲ್ಲಿವೆ

ಬೇಲದ ಹಣ್ಣಿನಲ್ಲಿ ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ವಿಟಮಿನ್ ಎ ಕೂಡ ಸಮೃದ್ಧವಾಗಿದೆ. ಬೇಲದ ಹಣ್ಣುಗಳು ಮಾಗಿದ ನಂತರವೂ ಒಡೆಯುವುದಿಲ್ಲ. ತಿಳಿ ಹಳದಿ, ಸಿಹಿ ವಾಸನೆಯ ಈ ಹಣ್ಣನ್ನು ಆರಿಸಿಕೊಳ್ಳಿ. ಗಟ್ಟಿಯಾದ ವಸ್ತುವಿನಿಂದ ಬೇಲದ ಹಣ್ಣಿನ ಶೆಲ್ ಅನ್ನು ಒಡೆದು, ಅದರ ತಿರುಳನ್ನು ಸೇವಿಸಬಹುದು. ಬೇಲದ ಹಣ್ಣುಗಳಲ್ಲಿ ಕಾರ್ಬೋಹೈಡ್ರೇಟ್‌ ಅಧಿಕವಾಗಿರುವುದರಿಂದ ವಿವಿಧ ದೈಹಿಕ ಚಟುವಟಿಕೆಗಳನ್ನು ನಿರ್ವಹಿಸಲು ದೇಹಕ್ಕೆ ಸಾಕಷ್ಟು ಪ್ರಮಾಣದ ಶಕ್ತಿಯನ್ನು ಒದಗಿಸುತ್ತದೆ. ಇದನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ ಮೆದುಳಿನ ಕೋಶಗಳು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.

ಬೇಲದ ಹಣ್ಣು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ. ಬೇಲದ ಹಣ್ಣಿನಲ್ಲಿರುವ ಕ್ಯಾಲ್ಸಿಯಂ ಮೂಳೆಯ ಆರೋಗ್ಯಕ್ಕೆ ಅತ್ಯಗತ್ಯ. ಇದು ಹಲ್ಲುಗಳು, ಮೂಳೆಗಳನ್ನು ಬಲಪಡಿಸುತ್ತದೆ. ಬೇಲದ ಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿದೆ. ಇದು ನೈಸರ್ಗಿಕ ರಕ್ತ ಶುದ್ಧಿಕಾರಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ರಕ್ತದಲ್ಲಿನ ಕೆಂಪು ರಕ್ತ ಕಣ ಮತ್ತು ಹಿಮೋಗ್ಲೋಬಿನ್ ಸಂಖ್ಯೆಯನ್ನು ಹೆಚ್ಚಿಸುತ್ತದೆ. ರಕ್ತಹೀನತೆಯಿಂದ ಬಳಲುತ್ತಿರುವ ಜನರಿಗೆ ಇದು ಅತ್ಯಂತ ಪ್ರಯೋಜನಕಾರಿಯಾಗಿದೆ.

ಬೇಲದ ಹಣ್ಣಿನಲ್ಲಿರುವ ಬ್ಯಾಕ್ಟೀರಿಯಲ್ ಗುಣಲಕ್ಷಣಗಳು ಅತಿಸಾರವನ್ನು ಉಂಟುಮಾಡುವ ಮತ್ತು ಕಾಲರಾಗೆ ಚಿಕಿತ್ಸೆ ನೀಡುವ ಶಿಗೆಲ್ಲೋಸಿಸ್ ಎಂಬ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಮಾಗಿದ ಬೇಲದ ಹಣ್ಣನ್ನು ಜ್ಯೂಸ್ ರೂಪದಲ್ಲಿ ಸೇವಿಸುವ ಜನರು ಕಾಲರಾ ಮತ್ತು ಅತಿಸಾರದಿಂದ ಗುಣಮುಖರಾಗುತ್ತಾರೆ ಎಂದು ಅಧ್ಯಯನಗಳು ತಿಳಿಸಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು