AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ರಾಹೀನತೆಯಿಂದ ಮಹಿಳೆಯರಲ್ಲಿ ಡಯಾಬಿಟಿಸ್ ಹೆಚ್ಚಳ; ಅಧ್ಯಯನದಲ್ಲಿ ಬಯಲು

ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ.

ನಿದ್ರಾಹೀನತೆಯಿಂದ ಮಹಿಳೆಯರಲ್ಲಿ ಡಯಾಬಿಟಿಸ್ ಹೆಚ್ಚಳ; ಅಧ್ಯಯನದಲ್ಲಿ ಬಯಲು
ಡಯಾಬಿಟಿಸ್Image Credit source: iStock
ಸುಷ್ಮಾ ಚಕ್ರೆ
|

Updated on: Nov 17, 2023 | 5:37 PM

Share

ನಿದ್ರಾಹೀನತೆಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ದೀರ್ಘಕಾಲದ ನಿದ್ರಾಹೀನತೆಯಿಂದ ಡಯಾಬಿಟಿಸ್ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. ಡಯಾಬಿಟಿಸ್ ಕೇರ್‌ನಲ್ಲಿ ಪ್ರಕಟವಾದ ಅಧ್ಯಯನವು ಟೈಪ್ 2 ಡಯಾಬಿಟಿಸ್ ಅಪಾಯವನ್ನು ತಗ್ಗಿಸುವಲ್ಲಿ ಸಾಕಷ್ಟು ನಿದ್ರೆಯ ಪ್ರಮುಖ ಪಾತ್ರವನ್ನು ಒತ್ತಿಹೇಳಿದೆ.

ನ್ಯಾಶನಲ್ ಹಾರ್ಟ್, ಲಂಗ್ ಮತ್ತು ಬ್ಲಡ್ ಇನ್​ಸ್ಟಿಟ್ಯೂಟ್ (ಎನ್‌ಎಚ್‌ಎಲ್‌ಬಿಐ)ನಲ್ಲಿರುವ ಸ್ಲೀಪ್ ಡಿಸಾರ್ಡರ್ ರಿಸರ್ಚ್‌ನ ರಾಷ್ಟ್ರೀಯ ಕೇಂದ್ರದ ನಿರ್ದೇಶಕ ಮರಿಷ್ಕಾ ಬ್ರೌನ್, ಮಹಿಳೆಯರು ಪುರುಷರಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ. ಆದ್ದರಿಂದ ನಿದ್ರಾಹೀನತೆ ಅವರ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ. ಅದರಲ್ಲೂ ವಿಶೇಷವಾಗಿ ಋತುಬಂಧಕ್ಕೊಳಗಾದ ಮಹಿಳೆಯರಿಗೆ ನಿದ್ರಾಹೀನತೆಯಿಂದ ಸಾಕಷ್ಟು ತೊಂದರೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡಯಾಬಿಟಿಸ್ ಇರುವವರು ದಿನಕ್ಕೆ ಎಷ್ಟು ಹೊತ್ತು ನಡೆಯಬೇಕು?

ಹಿಂದಿನ ಅಧ್ಯಯನಗಳು ನಿದ್ರೆಯ ಸಮಸ್ಯೆ, ಹೃದಯರಕ್ತನಾಳದ ಕಾಯಿಲೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ನಡುವಿನ ಸಂಪರ್ಕವನ್ನು ಪರಿಶೋಧಿಸಿದ್ದರೂ ಈ ಸಂಶೋಧನೆಯು ನಿರ್ದಿಷ್ಟವಾಗಿ ಮಹಿಳೆಯರ ಮೇಲೆ ಕೇಂದ್ರೀಕರಿಸುತ್ತದೆ. ಅಧಿಕ ತೂಕ, ಸ್ಥೂಲಕಾಯತೆ, ಕುಟುಂಬದಲ್ಲಿ ಯಾರಿಗಾದರೂ ಡಯಾಬಿಟಿಸ್ ಇದ್ದರೆ, ಹೆಚ್ಚಿದ ಲಿಪಿಡ್ ಮಟ್ಟಗಳು ಅಥವಾ ಹೃದಯರಕ್ತನಾಳದ ಕಾಯಿಲೆಯಂತಹ ಅಂಶಗಳಿಂದಾಗಿ ಕಾರ್ಡಿಯೋಮೆಟಬಾಲಿಕ್ ಕಾಯಿಲೆಗಳ ಅಪಾಯ ಮಹಿಳೆಯರಲ್ಲಿ ಹೆಚ್ಚಾಗುತ್ತಿದೆ ಎಂಬ ಅಂಶವನ್ನು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು