AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟಕ್ಕೂ ಮೊದಲು ಮತ್ತು ನಂತರ ಚಹಾ, ಕಾಫಿ ಕುಡಿಯುವುದು ಒಳ್ಳೆಯದಲ್ಲ!

ಊಟ ಮಾಡುವುದಕ್ಕೂ ಮೊದಲು ಅಥವಾ ಊಟವಾದ ನಂತರ ಚಹಾ ಮತ್ತು ಕಾಫಿಯ ಸೇವನೆಯನ್ನು ತಪ್ಪಿಸಲು ವೈದ್ಯಕೀಯ ಸಮಿತಿ ICMR ಹೇಳಿದೆ. ಇದಕ್ಕೆ ಕಾರಣವೇನು? ಎಂಬುದರ ಮಾಹಿತಿ ಇಲ್ಲಿದೆ.

ಊಟಕ್ಕೂ ಮೊದಲು ಮತ್ತು ನಂತರ ಚಹಾ, ಕಾಫಿ ಕುಡಿಯುವುದು ಒಳ್ಳೆಯದಲ್ಲ!
ಚಹಾ, ಕಾಫಿImage Credit source: istock
ಸುಷ್ಮಾ ಚಕ್ರೆ
|

Updated on: May 14, 2024 | 9:10 PM

Share

“ಟೀ (Tea) ಮತ್ತು ಕಾಫಿಗಳಲ್ಲಿ (Coffee) ಕೆಫೀನ್ ಇರುತ್ತದೆ. ಇದು ಕೇಂದ್ರ ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಶಾರೀರಿಕ ಅವಲಂಬನೆಯನ್ನು ಪ್ರೇರೇಪಿಸುತ್ತದೆ” ಎಂದು ICMR ಸಂಶೋಧಕರು ತಿಳಿಸಿದ್ದಾರೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಇತ್ತೀಚೆಗೆ ಭಾರತೀಯರಿಗೆ 17 ಆಹಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತು. ಆರೋಗ್ಯಕರ ಜೀವನದೊಂದಿಗೆ ಸಮತೋಲಿತ ಮತ್ತು ವೈವಿಧ್ಯಮಯ ಆಹಾರಕ್ಕಾಗಿ ಒತ್ತಾಯಿಸುತ್ತದೆ.

ಮಾರ್ಗಸೂಚಿಗಳಲ್ಲಿ ಒಂದರಲ್ಲಿ ರಾಷ್ಟ್ರೀಯ ಪೋಷಣೆಯ ಸಂಸ್ಥೆ (NIN) ಅದರ ಸಂಶೋಧನಾ ವಿಭಾಗದೊಂದಿಗೆ ವೈದ್ಯಕೀಯ ಸಮಿತಿಯು ಚಹಾ ಮತ್ತು ಕಾಫಿಯ ಸೇವನೆ ಮಿತವಾಗಿರಬೇಕು ಎಂದು ವಿವರಿಸಿದೆ. ಭಾರತದ ಬಹುತೇಕ ಜನರು ಚಹಾ ಅಥವಾ ಕಾಫಿಯನ್ನು ತಮ್ಮ ಆದ್ಯತೆಯ ಬಿಸಿ ಪಾನೀಯಗಳಾಗಿ ಸೇವಿಸುವುದರಿಂದ ICMR ಊಟದ ಮೊದಲು ಅಥವಾ ನಂತರ ಅವುಗಳನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ಜನರನ್ನು ಎಚ್ಚರಿಸಿದೆ.

ಚಹಾ ಅಥವಾ ಕಾಫಿಯನ್ನು ಸಂಪೂರ್ಣವಾಗಿ ತ್ಯಜಿಸಲು ಐಸಿಎಂಆರ್ ಜನರಿಗೆ ಸೂಚಿಸಿಲ್ಲವಾದರೂ, ಈ ಪಾನೀಯಗಳಲ್ಲಿನ ಕೆಫೀನ್ ಅಂಶದ ಬಗ್ಗೆ ಎಚ್ಚರದಿಂದಿರಿ ಎಂದು ಭಾರತೀಯರಿಗೆ ಎಚ್ಚರಿಕೆ ನೀಡಿದೆ. ಒಂದು ಕಪ್ (150ml) ಕುದಿಸಿದ ಕಾಫಿಯು 80-120mg ಕೆಫೀನ್ ಅನ್ನು ಹೊಂದಿರುತ್ತದೆ. ಇನ್​ಸ್ಟಂಟ್ ಕಾಫಿ 50-65mg ಅನ್ನು ಹೊಂದಿರುತ್ತದೆ. ಚಹಾವು 30-65mg ಕೆಫೀನ್ ಅನ್ನು ಹೊಂದಿರುತ್ತದೆ.

ಇದನ್ನೂ ಓದಿ: Coffee: ದಿನಕ್ಕೆ 3 ಲೋಟಕ್ಕಿಂತ ಹೆಚ್ಚು ಕಾಫಿ, ಟೀ ಕುಡಿದರೆ ಏನಾಗುತ್ತದೆ?

“ಚಹಾ ಮತ್ತು ಕಾಫಿ ಸೇವನೆಯಲ್ಲಿ ಮಿತವಾಗಿರುವಂತೆ ಸಲಹೆ ನೀಡಲಾಗುತ್ತದೆ. ಆದ್ದರಿಂದ ಕೆಫೀನ್ ಸೇವನೆಯು ಸಹಿಸಬಹುದಾದ ಮಿತಿಗಳನ್ನು (300mg/day) ಮೀರುವಂತಿಲ್ಲ” ಎಂದು ಸೂಚಿಸಲಾಗಿದೆ. ಒಬ್ಬ ವ್ಯಕ್ತಿಯು ಹೊಂದಬಹುದಾದ ಕೆಫೀನ್‌ನ ದೈನಂದಿನ ಮಿತಿಯನ್ನು ತಿಳಿಸುತ್ತಾರೆ. ಊಟಕ್ಕೆ ಕನಿಷ್ಠ 1 ಗಂಟೆ ಮೊದಲು ಮತ್ತು ನಂತರ ಕಾಫಿ ಮತ್ತು ಚಹಾವನ್ನು ಸೇವಿಸುವುದನ್ನು ತಪ್ಪಿಸುವಂತೆ ಅವರು ಜನರ ಬಳಿ ಮನವಿ ಮಾಡಿದ್ದಾರೆ.

ಈ ಪಾನೀಯಗಳು ಟ್ಯಾನಿನ್ ಎಂಬ ಸಂಯುಕ್ತವನ್ನು ಹೊಂದಿರುತ್ತವೆ. ಇದನ್ನು ಸೇವಿಸಿದಾಗ, ಟ್ಯಾನಿನ್‌ಗಳು ದೇಹದಲ್ಲಿ ಕಬ್ಬಿಣದ ಹೀರಿಕೊಳ್ಳುವಿಕೆಯನ್ನು ಅಡ್ಡಿಪಡಿಸಬಹುದು. ಇದರರ್ಥ ಟ್ಯಾನಿನ್ ನಿಮ್ಮ ದೇಹವು ಆಹಾರದಿಂದ ಹೀರಿಕೊಳ್ಳುವ ಕಬ್ಬಿಣದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮ ದೇಹದಲ್ಲಿ ಕಬ್ಬಿಣದ ಲಭ್ಯತೆ ಕಡಿಮೆಯಾಗಲು ಕಾರಣವಾಗುತ್ತದೆ. ದೇಹದಾದ್ಯಂತ ಆಮ್ಲಜನಕವನ್ನು ಸಾಗಿಸುವ ಕೆಂಪು ರಕ್ತ ಕಣಗಳಲ್ಲಿನ ಪ್ರೋಟೀನ್ ಹಿಮೋಗ್ಲೋಬಿನ್ ಅನ್ನು ತಯಾರಿಸಲು ಕಬ್ಬಿಣವು ಅವಶ್ಯಕವಾಗಿದೆ.

ಇದನ್ನೂ ಓದಿ: ಚಹಾದ ಜೊತೆ ರಸ್ಕ್ ತಿನ್ನುತ್ತೀರಾ? ಅದರ ತೊಂದರೆ ಬಗ್ಗೆಯೂ ತಿಳಿದಿರಲಿ

ಶಕ್ತಿ ಉತ್ಪಾದನೆ ಮತ್ತು ಒಟ್ಟಾರೆ ಜೀವಕೋಶದ ಕಾರ್ಯಕ್ಕೆ ಇದು ಮುಖ್ಯವಾಗಿದೆ. ಕಡಿಮೆ ಕಬ್ಬಿಣದ ಮಟ್ಟವು ಕಬ್ಬಿಣದ ಕೊರತೆ ಮತ್ತು ರಕ್ತಹೀನತೆಯಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹದಲ್ಲಿ ಕಬ್ಬಿಣದ ಕೊರತೆಯ ಸಾಮಾನ್ಯ ಲಕ್ಷಣಗಳೆಂದರೆ, ವಿಪರೀತ ದಣಿವು ಅಥವಾ ಶಕ್ತಿಯ ಕೊರತೆ, ಉಸಿರಾಟದ ತೊಂದರೆ, ಪದೇಪದೆ ತಲೆನೋವು, ಅತಿಯಾದ ವೀಕ್​ನೆಸ್, ತ್ವರಿತ ಹೃದಯ ಬಡಿತ, ಸುಲಭವಾಗಿ ಉಗುರುಗಳು ಮುರಿಯುವುದು ಅಥವಾ ಕೂದಲು ಉದುರುವಿಕೆ.

ಹೆಚ್ಚಿನ ಮಟ್ಟದ ಕಾಫಿ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯ ಬಡಿತದಲ್ಲಿನ ಅಸಹಜತೆಗಳಿಗೆ ಸಂಬಂಧಿಸಿದೆ. ಕಡಿಮೆ ಎಣ್ಣೆಯ ಪದಾರ್ಥಗಳನ್ನು ಸೇವಿಸುವುದು, ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ನೇರ ಮಾಂಸ, ಸಮುದ್ರಾಹಾರಗಳನ್ನು ಸೇವಿಸುವುದು ಉತ್ತಮ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ