AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Obesity: ಬೊಜ್ಜಿನಿಂದ ಮೆದುಳಿನ ಆರೋಗ್ಯಕ್ಕೆ ಹಾನಿ, ವೀರ್ಯಾಣು ಕುಸಿತ; ಆಘಾತಕಾರಿ ಸಂಗತಿ ಬಯಲು

ಇತ್ತೀಚೆಗೆ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿದೆ. ಬೊಜ್ಜು ಮನುಷ್ಯರ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕಡಿಮೆ ವೀರ್ಯಾಣು ಸಂಖ್ಯೆಗೆ ಕಾರಣವಾಗುತ್ತದೆ. ಸ್ಥೂಲಕಾಯತೆಯು ಸಂತಾನೋತ್ಪತ್ತಿಯನ್ನು ನಿಯಂತ್ರಿಸುವ ಮೆದುಳಿನ ಕೇಂದ್ರದ ಮೇಲೆ ಪರಿಣಾಮ ಬೀರುವ ಮೂಲಕ ವೀರ್ಯದ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನವು ಕಂಡುಹಿಡಿದಿದೆ.

Obesity: ಬೊಜ್ಜಿನಿಂದ ಮೆದುಳಿನ ಆರೋಗ್ಯಕ್ಕೆ ಹಾನಿ, ವೀರ್ಯಾಣು ಕುಸಿತ; ಆಘಾತಕಾರಿ ಸಂಗತಿ ಬಯಲು
ಸ್ಥೂಲಕಾಯತೆ
Follow us
ಸುಷ್ಮಾ ಚಕ್ರೆ
|

Updated on: Jul 20, 2024 | 11:54 AM

ಒಂದು ಅಧ್ಯಯನದ ಪ್ರಕಾರ, ಸ್ಥೂಲಕಾಯತೆಯು ಹೈಪೋಥಾಲಮಸ್‌ನ ಮೇಲೆ ಪರಿಣಾಮ ಬೀರುವ ಮೂಲಕ ವೀರ್ಯದ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಇದು ಸಂತಾನೋತ್ಪತ್ತಿಗೆ ಕಾರಣವಾಗುವ ಮೆದುಳಿನ ಕೇಂದ್ರವಾಗಿದೆ ಮತ್ತು ನಾವು ಯಾವಾಗ ತಿನ್ನುವುದನ್ನು ನಿಲ್ಲಿಸಬೇಕು ಎಂಬುದನ್ನು ಸಂಕೇತಿಸುತ್ತದೆ. ಹೈಪೋಥಾಲಮಸ್‌ನಲ್ಲಿನ ಬದಲಾವಣೆಗಳು ಟೆಸ್ಟೋಸ್ಟೆರಾನ್ ಮತ್ತು ವೀರ್ಯವನ್ನು ರಚಿಸಲು ಅಗತ್ಯವಾದ ಹಾರ್ಮೋನುಗಳ ಉತ್ಪಾದನೆಗೆ ಅಡ್ಡಿಯಾಗಬಹುದು ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಈ ಅಧ್ಯಯನವನ್ನು ಇಲಿಗಳ ಮೇಲೆ ನಡೆಸಲಾಯಿತು.

ಅಮೆರಿಕಾದ ಕ್ಯಾಲಿಫೋರ್ನಿಯಾ ರಿವರ್‌ಸೈಡ್ ವಿಶ್ವವಿದ್ಯಾನಿಲಯದ ಸಂಶೋಧಕರು, ಇಲಿಗಳಿಗೆ ಹೆಚ್ಚಿನ ಕೊಬ್ಬಿನ ಆಹಾರವನ್ನು ನೀಡುವುದರಿಂದ ಅವುಗಳ ಮೆದುಳಿನಲ್ಲಿ ಶಾಶ್ವತ ಬದಲಾವಣೆಗಳಿಗೆ ಕಾರಣವಾಯಿತು. ಇದು ಸಾಕಷ್ಟು ಶಕ್ತಿಯ ಸೇವನೆಯನ್ನು ಸೂಚಿಸುವ ಸಂಕೇತಗಳೊಂದಿಗೆ ಮಧ್ಯಪ್ರವೇಶಿಸುತ್ತದೆ. ಇದರಿಂದಾಗಿ ತಿನ್ನುವುದನ್ನು ನಿಲ್ಲಿಸುವ ಪ್ರಚೋದನೆಯನ್ನು ತಡೆಯುತ್ತದೆ. ಜರ್ನಲ್ ಆಫ್ ನ್ಯೂರೋಸೈನ್ಸ್‌ನಲ್ಲಿ ಪ್ರಕಟವಾದ ಅಧ್ಯಯನವು ಈ ಇಲಿಗಳು ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡಿದೆ ಮತ್ತು ಕಡಿಮೆ ವೀರ್ಯಾಣು ಸಂಖ್ಯೆಯನ್ನು ಹೊಂದಿದೆ ಎಂದು ಬಹಿರಂಗಪಡಿಸಿದೆ.

ಇದನ್ನೂ ಓದಿ: Brain Stroke: ಯುವಜನತೆ ಮೆದುಳಿನ ಪಾರ್ಶ್ವವಾಯುವಿಗೆ ಬಲಿಯಾಗುತ್ತಿರುವುದೇಕೆ? ಇದನ್ನು ತಡೆಯುವುದು ಹೇಗೆ?

ಸಂತಾನೋತ್ಪತ್ತಿ ಅಂಗಗಳಲ್ಲಿನ ಗೊನಾಡ್‌ಗಳ ಜೊತೆಗೆ ಮೆದುಳಿನಲ್ಲಿರುವ ಹೈಪೋಥಾಲಮಸ್ ಮತ್ತು ಪಿಟ್ಯುಟರಿ ಗ್ರಂಥಿಯನ್ನು ಒಳಗೊಂಡಿರುವ ಪ್ರತಿಕ್ರಿಯೆಯ ಲೂಪ್‌ನಿಂದ ಸಂತಾನೋತ್ಪತ್ತಿ ನಿಯಂತ್ರಿಸಲ್ಪಡುತ್ತದೆ ಎಂದು ಪ್ರಮುಖ ಲೇಖಕ ಜುರ್ಡ್‌ಜಿಕಾ ಕಾಸ್ ವಿವರಿಸಿದ್ದಾರೆ. ಹೈಪೋಥಾಲಮಸ್ ಉಳಿವಿಗೆ ಅಗತ್ಯವಾದ ನಡವಳಿಕೆಗಳನ್ನು ನಿಯಂತ್ರಿಸಲು ಕಾರಣವಾಗಿದೆ. ಉದಾಹರಣೆಗೆ ತಿನ್ನುವುದು ಮತ್ತು ಸಂತಾನೋತ್ಪತ್ತಿ ಮಾಡುವುದು. ಹಾಗೇ, ಪಿಟ್ಯುಟರಿ ಗ್ರಂಥಿಯು ಪುರುಷರಲ್ಲಿ ಟೆಸ್ಟೋಸ್ಟೆರಾನ್ ಮತ್ತು ವೀರ್ಯ ಮತ್ತು ಮಹಿಳೆಯರಲ್ಲಿ ಈಸ್ಟ್ರೊಜೆನ್ ಮತ್ತು ಅಂಡಾಣುಗಳ ಉತ್ಪಾದನೆಯನ್ನು ನಿರ್ವಹಿಸುತ್ತದೆ.

ಟೆಸ್ಟೋಸ್ಟೆರಾನ್ ಅಥವಾ ಈಸ್ಟ್ರೊಜೆನ್ ಮಟ್ಟವನ್ನು ನಿಯಂತ್ರಿಸುವ ಹಾರ್ಮೋನುಗಳ ಉತ್ಪಾದನೆಯನ್ನು ನಿಯಂತ್ರಿಸಲು ಹೈಪೋಥಾಲಮಸ್ ಪಿಟ್ಯುಟರಿ ಗ್ರಂಥಿಯೊಂದಿಗೆ ಸಂವಹನ ನಡೆಸುತ್ತದೆ. ಸ್ಥೂಲಕಾಯದ ಇಲಿಗಳಲ್ಲಿ ಈ ಕ್ರಿಯೆ ದುರ್ಬಲಗೊಂಡಿರುವುದು ಕಂಡುಬಂದಿದೆ. ಇದು ಪಿಟ್ಯುಟರಿ ಗ್ರಂಥಿಯಿಂದ ಹಾರ್ಮೋನ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ ಮತ್ತು ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Obesity: ಅತಿಯಾದ ಬೊಜ್ಜು ಸ್ತನ ಕ್ಯಾನ್ಸರ್​​​ಗೆ ಕಾರಣವಾಗಬಹುದು!

“ಹೈಪೋಥಾಲಮಸ್‌ನಲ್ಲಿರುವ ಈ ನ್ಯೂರಾನ್‌ಗಳು ಸರಿಯಾಗಿ ಕಾರ್ಯ ನಿರ್ವಹಿಸದಿದ್ದಾಗ ಸ್ಥೂಲಕಾಯತೆಯಂತೆ, ಇದು ಪಿಟ್ಯುಟರಿ ಗ್ರಂಥಿಯಿಂದ ಕಡಿಮೆ ಹಾರ್ಮೋನ್ ಮಟ್ಟವನ್ನು ಉಂಟುಮಾಡುತ್ತದೆ. ಟೆಸ್ಟೋಸ್ಟೆರಾನ್ ಮತ್ತು ವೀರ್ಯ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ” ಎಂದು ಅಧ್ಯಯನಕಾರರು ಹೇಳಿದ್ದಾರೆ.

ಇತ್ತೀಚಿನ ಫಲಿತಾಂಶಗಳನ್ನು ಅರ್ಥಮಾಡಿಕೊಳ್ಳಲು ಹೆಚ್ಚಿನ ಅಧ್ಯಯನಗಳು ಬೇಕಾಗುತ್ತವೆ ಎಂದು ಸಂಶೋಧಕರು ಹೇಳಿದ್ದಾರೆ. ಸ್ಥೂಲಕಾಯತೆಯು ಕಡಿಮೆ ವೀರ್ಯಾಣುಗಳನ್ನು ಉತ್ಪಾದಿಸುತ್ತದೆ ಮತ್ತು ಕಾಮಾಸಕ್ತಿಯನ್ನು ಕಡಿಮೆ ಮಾಡುತ್ತದೆ ಎಂಬುದು ನಿಜವಾದರೂ ಈ ಬಗ್ಗೆ ಹೆಚ್ಚಿನ ಸಂಶೋಧನೆಗಳು ನಡೆಯಬೇಕಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ