AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk: ಅತಿಯಾದರೆ ಹಾಲು ಕೂಡ ಅಪಾಯಕಾರಿ; ದಿನಕ್ಕೆ ಎಷ್ಟು ಲೋಟ ಹಾಲು ಅಗತ್ಯ?

ಹಾಲು ಕುಡಿಯುವುದು ಒಳ್ಳೆಯದು ಎಂಬುದು ನಮ್ಮ ತಾತ- ಮುತ್ತಜ್ಜಿ ಕಾಲದಿಂದಲೂ ಹೇಳಿಕೊಂಡು ಬಂದಿರುವ ವಿಚಾರ. ಹಾಲಿನಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುವುದರಿಂದ ಇದು ಮೂಳೆಗಳ ಆರೋಗ್ಯಕ್ಕೆ ಸಹಕಾರಿ. ಹೀಗಾಗಿ, ಮಕ್ಕಳಿಗೆ ಬೆಳಗ್ಗೆ ಮತ್ತು ಸಂಜೆ ದೊಡ್ಡ ಲೋಟದಲ್ಲಿ ಹಾಲು ಕೊಡುವ ಅಭ್ಯಾಸ ಹಲವು ಮನೆಗಳಲ್ಲಿದೆ. ಆದರೆ, ಹಾಲನ್ನು ಅತಿಯಾಗಿ ಸೇವಿಸುವುದು ಕೂಡ ಒಳ್ಳೆಯದಲ್ಲ ಎಂಬುದು ನಿಮಗೆ ಗೊತ್ತಾ?

Milk: ಅತಿಯಾದರೆ ಹಾಲು ಕೂಡ ಅಪಾಯಕಾರಿ; ದಿನಕ್ಕೆ ಎಷ್ಟು ಲೋಟ ಹಾಲು ಅಗತ್ಯ?
ಹಾಲು ಕುಡಿಯುವುದು
ಸುಷ್ಮಾ ಚಕ್ರೆ
|

Updated on: May 05, 2024 | 4:30 PM

Share

ಹಾಲು (Cow Milk) ಕುಡಿಯುವುದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಶತಮಾನಗಳಿಂದಲೂ ಇದನ್ನು ಪೌಷ್ಟಿಕ ಆಹಾರವೆಂದು ಪರಿಗಣಿಸಲಾಗಿದೆ. ಹಾಲು ಕುಡಿಯುವುದರಿಂದ ನಾವು ವಿಟಮಿನ್ ಡಿ, ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಅನ್ನು ಪಡೆಯುತ್ತೇವೆ. ಅದು ನಮ್ಮ ದೇಹ ಮತ್ತು ಮೂಳೆಗಳನ್ನು (Strong Bone) ಬಲಪಡಿಸುತ್ತದೆ. ವೈದ್ಯರು ಕೂಡ ಎಲ್ಲರಿಗೂ ಹಾಲು ಕುಡಿಯಲು ಸಲಹೆ ನೀಡುತ್ತಾರೆ. ಆದರೆ ಹೆಚ್ಚು ಹಾಲು ಸೇವಿಸುವುದು ನಿಮಗೆ ಹಾನಿಕಾರಕ ಎಂದು ತಿಳಿದಿದೆಯೇ?

ಹಾಲನ್ನು ಅತಿಯಾಗಿ ಕುಡಿಯುವುದರಿಂದ ಆಗುವ ಅನನುಕೂಲಗಳೇನು? ಮತ್ತು ದಿನಕ್ಕೆ ಎಷ್ಟು ಹಾಲನ್ನು ಕುಡಿಯಬೇಕು? ಎನ್ನುವುದರ ಮಾಹಿತಿ ಇಲ್ಲಿದೆ.

ಪ್ರತಿದಿನ ಹೆಚ್ಚು ಹಾಲು ಕುಡಿಯುವುದರಿಂದ ನಿಮ್ಮ ದೇಹದಲ್ಲಿ ಹಾರ್ಮೋನ್ ಅಸಮತೋಲನ ಉಂಟಾಗುತ್ತದೆ. ಹಾಲಿನಲ್ಲಿ ಬಹಳಷ್ಟು ಕೊಬ್ಬು ಮತ್ತು ಕ್ಯಾಲೋರಿಗಳು ಕಂಡುಬರುತ್ತವೆ. ಇದು ನಿಮ್ಮ ತೂಕವನ್ನು ವೇಗವಾಗಿ ಹೆಚ್ಚಿಸುತ್ತದೆ. 1 ಕಪ್ ಹಾಲು 5 ಗ್ರಾಂ ಕೊಬ್ಬು ಮತ್ತು 152 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ನೈಸರ್ಗಿಕ ಸಕ್ಕರೆಯಾದ ದೊಡ್ಡ ಪ್ರಮಾಣದಲ್ಲಿ ಲ್ಯಾಕ್ಟೋಸ್ ಅನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ, ನಿಮ್ಮ ತೂಕ ಹೆಚ್ಚಾಗುವುದು ಮಾತ್ರವಲ್ಲದೆ ನೀವು ಇತರ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಇದನ್ನೂ ಓದಿ: ನಿಮ್ಮ ಮಗುವಿಗೆ ಹಸುವಿನ ಹಾಲು ನೀಡುವ ಮುನ್ನ ಈ ಅಪಾಯದ ಬಗ್ಗೆಯೂ ತಿಳಿದಿರಲಿ

ಹೆಚ್ಚು ಹಾಲು ಕುಡಿಯುವುದರಿಂದ ಆಗುವ ದುಷ್ಪರಿಣಾಮಗಳನ್ನು ತಿಳಿದುಕೊಳ್ಳುವ ಮೊದಲು ನಾವು ದಿನಕ್ಕೆ ಎಷ್ಟು ಹಾಲನ್ನು ಸೇವಿಸಬೇಕು? ಎಂಬುದನ್ನು ತಿಳಿಯುವುದು ಉತ್ತಮ.

ವ್ಯಕ್ತಿಯ ದೈಹಿಕ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಹಾಲು ಕುಡಿಯುವ ಸಾಮರ್ಥ್ಯವು ಬದಲಾಗಬಹುದು. ಕೆಳಗಿನ ಚಾರ್ಟ್ ಪ್ರಕಾರ ಜನರು ಹಾಲು ಕುಡಿಯಬೇಕು.

3 ವರ್ಷದೊಳಗಿನ ಮಕ್ಕಳು – 300 ರಿಂದ 500 ಮಿಲಿ ಹಾಲು

4 ರಿಂದ 10 ವರ್ಷ ವಯಸ್ಸಿನವರು – 400 ರಿಂದ 600 ಮಿಲಿ ಹಾಲು

11 ವರ್ಷದಿಂದ 18 ವರ್ಷಗಳವರೆಗೆ – 500 ಮಿಲಿಯಿಂದ 700 ಮಿಲಿ ಹಾಲು

18 ವರ್ಷಕ್ಕಿಂತ ಮೇಲ್ಪಟ್ಟವರು – 1 ರಿಂದ 2 ಗ್ಲಾಸ್ ಹಾಲು

ಹೆಚ್ಚು ಹಾಲು ಕುಡಿಯುವುದರಿಂದ ಉಂಟಾಗುವ ದುಷ್ಪರಿಣಾಮಗಳೇನು?:

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು:

ಜನರು ಪ್ರತಿದಿನ ಹಾಲು ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಉದಾಹರಣೆಗೆ, ಗ್ಯಾಸ್ಟ್ರಿಕ್, ಅತಿಸಾರ ಅಥವಾ ಮಲಬದ್ಧತೆ. ಹೆಚ್ಚು ಹಾಲು ಕುಡಿಯುವುದರಿಂದ ಒಳ್ಳೆಯ ಮತ್ತು ಕೆಟ್ಟ ಬ್ಯಾಕ್ಟೀರಿಯಾಗಳ ನಡುವೆ ಅಸಮತೋಲನ ಉಂಟಾಗುತ್ತದೆ, ಇದು ಈ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: Nutmeg Milk: ರಾತ್ರಿ ಮಲಗುವ ಮುನ್ನ ಜಾಯಿಕಾಯಿ ಹಾಲು ಕುಡಿದರೆ ಏನಾಗುತ್ತದೆ?

ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆಗಳು:

ಹಾಲಿನ ಅತಿಯಾದ ಸೇವನೆಯಿಂದ ಜನರು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಾರೆ. ಇದರಲ್ಲಿರುವ ಲ್ಯಾಕ್ಟೋಸ್‌ನಿಂದಾಗಿ ಜನರ ಜೀರ್ಣಕ್ರಿಯೆಯು ಹಾಳಾಗುತ್ತದೆ. ಕಳಪೆ ಜೀರ್ಣಕ್ರಿಯೆಯು ವಾಂತಿ ಮತ್ತು ಚಡಪಡಿಕೆಯಂತಹ ಸಮಸ್ಯೆಗಳನ್ನು ಉಂಟುಮಾಡಬಹುದು.

ಚರ್ಮದ ಸಮಸ್ಯೆಗಳು:

ನೀವು ಮೊಡವೆ ಮತ್ತು ಪಿಗ್ಮೆಂಟೇಶನ್‌ನಂತಹ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿದ್ದರೆ ನೀವು ಹೆಚ್ಚು ಹಾಲನ್ನು ಸೇವಿಸಬಾರದು. ಅಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಲು ಕುಡಿಯಬೇಡಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಹಾಲಿನ ಅತಿಯಾದ ಸೇವನೆಯು ಚರ್ಮದ ಅಲರ್ಜಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದಾಗಿ ದೇಹದ ವಿವಿಧ ಸ್ಥಳಗಳಲ್ಲಿ ಮೊಡವೆಗಳು ಮತ್ತು ದದ್ದುಗಳು ಕಾಣಿಸಿಕೊಳ್ಳುತ್ತವೆ.

ಯಕೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು:

ನಿಮಗೆ ಯಾವುದೇ ಯಕೃತ್ತು ಸಂಬಂಧಿತ ಸಮಸ್ಯೆಗಳು ಅಥವಾ ಕಾಯಿಲೆಗಳಿದ್ದರೆ ನೀವು ಹಾಲು ಸೇವಿಸಬಾರದು. ಹಾಲು ಕೊಬ್ಬಿನಿಂದ ಸಮೃದ್ಧವಾಗಿರುತ್ತದೆ. ಇದರಿಂದ ಯಕೃತ್ತು ಹಾಲನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಯಕೃತ್ತು ಊದಿಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು