AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ

Winter Health Care: ಚಳಿಗಾಲದ ತಿಂಗಳುಗಳಲ್ಲಿ ಕೀಲು ನೋವು ಹೆಚ್ಚಾಗಲು ಮುಖ್ಯ ಕಾರಣವೆಂದರೆ ಜಡವಾದ ಜೀವನಶೈಲಿ. ವಾಕಿಂಗ್ ಮಾಡುವುದನ್ನು ತಪ್ಪಿಸಬೇಡಿ.

Health Tips: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ
ಕೀಲು ನೋವು
ಸುಷ್ಮಾ ಚಕ್ರೆ
|

Updated on: Feb 02, 2023 | 12:16 PM

Share

ಚಳಿಗಾಲದಲ್ಲಿ (Winter Health) ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಿನ ಸಂಗತಿ. ಅದರಲ್ಲೂ ಶೀತದ ದೇಹ ಇರುವವರಿಗೆ, ಸಂಧಿವಾತದ ಸಮಸ್ಯೆ (Arthritis Problem) ಇರುವವರಿಗೆ ಚಳಿಗಾಲದಲ್ಲಿ ಕೀಲು ನೋವು (Joint Pain), ಮೂಳೆ ನೋವು ಮುಂತಾದ ಸಮಸ್ಯೆಗಳು ಉಂಟಾಗುತ್ತದೆ. ಸಂಧಿವಾತದ ರೋಗಲಕ್ಷಣಗಳಿಗೆ ಸಹಾಯ ಮಾಡಲು ಹಲವಾರು ಔಷಧಿಗಳಿದ್ದರೂ ಇಂದು ನಾವು ಕೆಲವು ನೈಸರ್ಗಿಕ ಪರಿಹಾರಗಳ ಬಗ್ಗೆ ತಿಳಿಸಿಕೊಡುತ್ತೇವೆ. ಇದರಿಂದ ಮನೆಯಲ್ಲಿಯೇ ಸಂಧಿವಾತವನ್ನು ನಿಯಂತ್ರಿಸಲು ಸಹಾಯವಾಗುತ್ತದೆ.

ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ: ನಿಮ್ಮ ದೇಹದ ತೂಕವು ನಿಮ್ಮ ಮೊಣಕಾಲುಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ಆದ್ದರಿಂದ, ದೇಹದಿಂದ ಹೆಚ್ಚಿನ ತೂಕವನ್ನು ಕಳೆದುಕೊಳ್ಳುವುದರಿಂದ ಸಂಧಿವಾತದ ನೋವನ್ನು ನಿಯಂತ್ರಿಸಬಹುದು.

ನಿಮ್ಮ ವಿಟಮಿನ್ ಡಿ ಪರಿಶೀಲಿಸಿ: ಚಳಿಗಾಲದ ತಿಂಗಳುಗಳಲ್ಲಿ ವಯಸ್ಸಾದವರು ಮನೆಯಲ್ಲಿಯೇ ಇರುತ್ತಾರೆ. ಆದ್ದರಿಂದ ಸೂರ್ಯನ ಬೆಳಕು ಅವರ ಮೈಮೇಲೆ ಬೀಳದೆ ವಿಟಮಿನ್ ಡಿ ಕೊರತೆಯ ಅಪಾಯವನ್ನು ಹೆಚ್ಚಿಸುತ್ತದೆ. ಇದರಿಂದ ಕೀಲುಗಳು ಮತ್ತು ಸ್ನಾಯುಗಳಲ್ಲಿ ನೋವು ಹೆಚ್ಚಾಗುತ್ತದೆ. ಹೀಗಾಗಿ, ದಿನಕ್ಕೆ 15 ನಿಮಿಷವಾದರೂ ಬಿಸಿಲಿಗೆ ಮೈಯೊಡ್ಡಿ.

ಇದನ್ನೂ ಓದಿ: Green Tea: ಗ್ರೀನ್ ಟೀ ಕುಡಿಯುವುದರಿಂದ ಕೊರೊನಾ ಸೋಂಕು ದೂರವಾಗುವುದೇ?

ವಾಕಿಂಗ್ ಮಾಡಿ: ಚಳಿಗಾಲದ ತಿಂಗಳುಗಳಲ್ಲಿ ಕೀಲು ನೋವು ಹೆಚ್ಚಾಗಲು ಮುಖ್ಯ ಕಾರಣವೆಂದರೆ ಜಡವಾದ ಜೀವನಶೈಲಿ. ವಾಕಿಂಗ್ ಮಾಡುವುದನ್ನು ತಪ್ಪಿಸಬೇಡಿ. ನಿಮ್ಮ ಕೀಲುಗಳನ್ನು ಆರೋಗ್ಯಕರವಾಗಿಡಲು ವ್ಯಾಯಾಮ ಮಾಡಿ.

ಸ್ಮಾರ್ಟ್ ಆಹಾರವನ್ನು ಆಯ್ಕೆ ಮಾಡಿ: ಸಂಧಿವಾತವನ್ನು ನಿರ್ವಹಿಸುವಲ್ಲಿ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ. ಬುದ್ಧಿವಂತ ಆಹಾರದ ಆಯ್ಕೆಗಳನ್ನು ಮಾಡಿ ಮತ್ತು ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಚೆರ್ರಿಗಳು, ಹಣ್ಣುಗಳು, ದ್ರಾಕ್ಷಿಗಳು, ಎಲೆಕೋಸು, ಕೇಲ್, ಪಾಲಕ್ ಮತ್ತು ಪ್ಲಮ್​ಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಸಂಸ್ಕರಿಸಿದ, ಜಂಕ್ ಫುಡ್ ಮತ್ತು ಸಕ್ಕರೆಯ ಉಪಹಾರಗಳನ್ನು ತಿನ್ನುವುದನ್ನು ತಪ್ಪಿಸಿ.

ಇದನ್ನೂ ಓದಿ: Green Tea Side Effects: ನಿಮಗೂ ನಿತ್ಯ ಗ್ರೀನ್ ಟೀ ಕುಡಿಯುವ ಅಭ್ಯಾಸವಿದೆಯೇ? ಹಾಗಾದ್ರೆ ಈಗಲೇ ಎಚ್ಚೆತ್ತುಕೊಳ್ಳಿ

ವಿಟಮಿನ್ ಸಿ ಬಳಸಿ: ವಿಟಮಿನ್ ಸಿ ಅಧಿಕವಾಗಿರುವ ಆಹಾರಗಳು ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ ಎಂದು ಸಂಶೋಧನೆ ಸೂಚಿಸುತ್ತದೆ. ಅದು ನಿಮ್ಮ ಸಂಧಿವಾತವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ನಿಮ್ಮ ಆಹಾರದಲ್ಲಿ ಸಿಟ್ರಸ್ ಹಣ್ಣುಗಳು, ಹೂಕೋಸು, ಚೆರ್ರಿಗಳು ಮತ್ತು ಸ್ಟ್ರಾಬೆರಿಗಳಂತಹ ಆಹಾರಗಳನ್ನು ಸೇರಿಸಿ.

ಗ್ರೀನ್ ಟೀ ಸೇವಿಸಿ: ಗ್ರೀನ್ ಟೀಯಿಂದ ಅನೇಕ ಪ್ರಯೋಜನಗಳಿವೆ. ಇದರ ಪ್ರಾಥಮಿಕ ಪ್ರಯೋಜನವೆಂದರೆ ಅದು ಉರಿಯೂತವನ್ನು ಉಂಟುಮಾಡುವ ದೇಹದಲ್ಲಿನ ರಾಸಾಯನಿಕಗಳನ್ನು ನಿಲ್ಲಿಸಲು ಸಹಾಯ ಮಾಡುತ್ತದೆ. ಸಂಧಿವಾತದಿಂದ ಉಂಟಾಗುವ ಹಾನಿಯಿಂದ ಕಾರ್ಟಿಲೆಜ್ ಅನ್ನು ತಡೆಯಲು ಹಸಿರು ಚಹಾ ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ