Malaria: ನಿಮ್ಮ ಅಡುಗೆ ಮನೆಯಲ್ಲೇ ಇದೆ ಮಲೇರಿಯಾ ಗುಣಪಡಿಸುವ ಔಷಧಿಗಳು

ಭಾರತದಲ್ಲಿ ಮಲೇರಿಯಾ ರೋಗವು ಹೆಚ್ಚಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ರೋಗಿಯು ಸಾಯುವ ಅಪಾಯವಿದೆ. ಇಂತಹ ಪರಿಸ್ಥಿತಿಯಲ್ಲಿ ಮಲೇರಿಯಾ ಮತ್ತು ಅದಕ್ಕೆ ಪರಿಹಾರಾರ್ಥವಾಗಿ ಬಳಕೆ ಮಾಡಬಹುದಾದ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.

Malaria: ನಿಮ್ಮ ಅಡುಗೆ ಮನೆಯಲ್ಲೇ ಇದೆ ಮಲೇರಿಯಾ ಗುಣಪಡಿಸುವ ಔಷಧಿಗಳು
ಸಾಂಕೇತಿಕ ಚಿತ್ರ
Follow us
| Updated By: Rakesh Nayak Manchi

Updated on: Aug 22, 2022 | 7:00 AM

ಮಳೆ ಶುರುವಾಗಿದೆ, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ, ಈ ಮಳೆ ನಿಲ್ಲುವವರೆಗೆ ಮಲೇರಿಯಾದಂತಹ ರೋಗ ಹರಡುವ ಮಹಾಮಾರಿ ಸೊಳ್ಳೆಗಳ ಕಾಟ ತಪ್ಪಿದ್ದಲ್ಲ. ಈಗಾಗಲೇ ಮಲೇರಿಯಾ ಹರಡುವ ಹೆಣ್ಣು ಅನಾಫಿಲಿಸ್ ಸೊಳ್ಳೆಯ ಕಡಿತಕ್ಕೆ ಒಳಗಾಗಿ ಒಂದಷ್ಟು ಜನರು ಹಾಸಿಗೆ ಹಿಡಿದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಮಲೇರಿಯಾ ಪ್ರಕರಣಗಳಿವೆ. ಎಲ್ಲಾ ಮಲೇರಿಯಾ ಪ್ರಕರಣಗಳಲ್ಲಿ 3 ಪ್ರತಿಶತವು ಭಾರತದಲ್ಲಿವೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ರೋಗಿಯು ಸಾಯುವ ಅಪಾಯವಿದೆ. ಇಂತಹ ಪರಿಸ್ಥಿತಿಯಲ್ಲಿ ಮಲೇರಿಯಾ ಮತ್ತು ಅದಕ್ಕೆ ಪರಿಹಾರಾರ್ಥವಾಗಿ ಬಳಕೆ ಮಾಡಬಹುದಾದ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಮಲೇರಿಯಾವನ್ನು ಮನೆಯಲ್ಲಿಯೇ ಗುಣಪಡಿಸಲು ಕೆಲವು ಮನೆಮದ್ದುಗಳು ಇಲ್ಲಿವೆ:

ಶುಂಠಿ:  NCBIಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಮಲೇರಿಯಾದ ನಂತರ ಶುಂಠಿಯ ಸೇವನೆಯು ಪ್ರಯೋಜನಕಾರಿಯಾಗಿದೆ. ಇದು ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಮಲೇರಿಯಾದಿಂದ ಉಂಟಾಗುವ ವಾಕರಿಕೆ ಮತ್ತು ವಾಂತಿಯನ್ನು ತಡೆಯಲು ಸಹಾಯ ಮಾಡುತ್ತದೆ.

ಮಾಡುವ ವಿಧಾನ:  ಒಂದು ಇಂಚಿನ ಶುಂಠಿಯನ್ನು ಒಂದು ಅಥವಾ ಒಂದೂವರೆ ಕಪ್ ನೀರಿನಲ್ಲಿ ಕುದಿಸಿ. ನಂತರ ರುಚಿಗೆ ತಕ್ಕಂತೆ ಜೇನುತುಪ್ಪ ಸೇರಿಸಿ. ಪ್ರತಿದಿನ ಒಂದರಿಂದ ಎರಡು ಕಪ್ ಈ ಮಿಶ್ರಣವನ್ನು ಸೇವಿಸಿ.

ಅರಿಶಿನ: ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಾರ, ಅರಿಶಿನದಲ್ಲಿರುವ ಕರ್ಕ್ಯುಮಿನ್ ಮಲೇರಿಯಾ ವಿರುದ್ಧ ಪರಿಣಾಮಕಾರಿಯಾಗಿದೆ. ಅರಿಶಿನವು ಉತ್ಕರ್ಷಣ ನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಮಸಾಲೆಯಾಗಿದೆ. ಇದು ಪ್ಲಾಸ್ಮೋಡಿಯಂ ಸೋಂಕಿನಿಂದ ಉತ್ಪತ್ತಿಯಾಗುವ ವಿಷವನ್ನು ದೇಹದಿಂದ ತೆಗೆದುಹಾಕುತ್ತದೆ. ಮಲೇರಿಯಾದಿಂದ ಉಂಟಾಗುವ ಸ್ನಾಯು ಮತ್ತು ಕೀಲು ನೋವುಗಳನ್ನು ಕಡಿಮೆ ಮಾಡಲು ಇದು ಉರಿಯೂತದ ಕ್ರಿಯೆಯನ್ನು ಹೊಂದಿದೆ.

ಸೇವನೆ ಹೇಗೆ?:  ಒಂದು ಲೋಟ ಹಾಲಿನಲ್ಲಿ ಒಂದು ಚಮಚ ಅರಿಶಿನವನ್ನು ಬೆರೆಸಬೇಕು. ಪ್ರತಿದಿನ ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿದರೆ ಉತ್ತಮ.

ಮೆಂತ್ಯ: ಪ್ಲಾಸ್ಮೋಡಿಯಲ್ ವಿರೋಧಿ ಗುಣಗಳಿಂದಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಮಲೇರಿಯಾ ಪರಾವಲಂಬಿಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಮೆಂತ್ಯ ಹೊಂದಿದೆ. ಅದಕ್ಕಾಗಿಯೇ ವೈದ್ಯರು ಮಲೇರಿಯಾ ರೋಗಿಗಳಿಗೆ ಮೆಂತ್ಯ ಬೀಜಗಳನ್ನು ತಿನ್ನಲು ಸಲಹೆ ನೀಡುತ್ತಾರೆ.

ಸೇವನೆ ಹೇಗೆ? : ಅರ್ಧ ಚಮಚ ಮೆಂತ್ಯ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಸೋಸಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಮಲೇರಿಯಾ ಗುಣವಾಗುವವರೆಗೆ ಇದನ್ನು ಸೇವಿಸಬೇಕು.

ದಾಲ್ಚಿನ್ನಿ:  ದಾಲ್ಚಿನ್ನಿ ಮಲೇರಿಯಾಕ್ಕೆ ಪರಿಣಾಮಕಾರಿಯಾಗಿದೆ. ಇದು ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ, ಆಂಟಿಬ್ಯಾಕ್ಟೀರಿಯಲ್, ನಂಜುನಿರೋಧಕ, ಆಂಟಿವೈರಲ್, ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಮಲೇರಿಯಾದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸೇವನೆ ವಿಧಾನ: ಒಂದು ಲೋಟ ನೀರಿಗೆ ಒಂದು ಚಮಚ ದಾಲ್ಚಿನ್ನಿ ಪುಡಿ ಮತ್ತು ಒಂದು ಚಿಟಿಕೆ ಕರಿಮೆಣಸು ಸೇರಿಸಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ. ಹೀಗೆ ಸಿದ್ಧಪಡಿಸಿದ ಮಿಶ್ರಣವನ್ನು ನೀವು ದಿನಕ್ಕೆ ಒಂದು ಅಥವಾ ಎರಡು ಬಾರಿ ಕುಡಿಯಬಹುದು.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ಅದಾಗ್ಯೂ ಮಲೇರಿಯಾದಂತಹ ರೋಗ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ.)

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ