AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malaria: ನಿಮ್ಮ ಅಡುಗೆ ಮನೆಯಲ್ಲೇ ಇದೆ ಮಲೇರಿಯಾ ಗುಣಪಡಿಸುವ ಔಷಧಿಗಳು

ಭಾರತದಲ್ಲಿ ಮಲೇರಿಯಾ ರೋಗವು ಹೆಚ್ಚಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ರೋಗಿಯು ಸಾಯುವ ಅಪಾಯವಿದೆ. ಇಂತಹ ಪರಿಸ್ಥಿತಿಯಲ್ಲಿ ಮಲೇರಿಯಾ ಮತ್ತು ಅದಕ್ಕೆ ಪರಿಹಾರಾರ್ಥವಾಗಿ ಬಳಕೆ ಮಾಡಬಹುದಾದ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.

Malaria: ನಿಮ್ಮ ಅಡುಗೆ ಮನೆಯಲ್ಲೇ ಇದೆ ಮಲೇರಿಯಾ ಗುಣಪಡಿಸುವ ಔಷಧಿಗಳು
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on: Aug 22, 2022 | 7:00 AM

Share

ಮಳೆ ಶುರುವಾಗಿದೆ, ಹಲವೆಡೆ ಪ್ರವಾಹ ಪರಿಸ್ಥಿತಿ ತಲೆದೋರಿದೆ, ಈ ಮಳೆ ನಿಲ್ಲುವವರೆಗೆ ಮಲೇರಿಯಾದಂತಹ ರೋಗ ಹರಡುವ ಮಹಾಮಾರಿ ಸೊಳ್ಳೆಗಳ ಕಾಟ ತಪ್ಪಿದ್ದಲ್ಲ. ಈಗಾಗಲೇ ಮಲೇರಿಯಾ ಹರಡುವ ಹೆಣ್ಣು ಅನಾಫಿಲಿಸ್ ಸೊಳ್ಳೆಯ ಕಡಿತಕ್ಕೆ ಒಳಗಾಗಿ ಒಂದಷ್ಟು ಜನರು ಹಾಸಿಗೆ ಹಿಡಿದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ (WHO) ವರದಿಯ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಮಲೇರಿಯಾ ಪ್ರಕರಣಗಳಿವೆ. ಎಲ್ಲಾ ಮಲೇರಿಯಾ ಪ್ರಕರಣಗಳಲ್ಲಿ 3 ಪ್ರತಿಶತವು ಭಾರತದಲ್ಲಿವೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ರೋಗಿಯು ಸಾಯುವ ಅಪಾಯವಿದೆ. ಇಂತಹ ಪರಿಸ್ಥಿತಿಯಲ್ಲಿ ಮಲೇರಿಯಾ ಮತ್ತು ಅದಕ್ಕೆ ಪರಿಹಾರಾರ್ಥವಾಗಿ ಬಳಕೆ ಮಾಡಬಹುದಾದ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಮಲೇರಿಯಾವನ್ನು ಮನೆಯಲ್ಲಿಯೇ ಗುಣಪಡಿಸಲು ಕೆಲವು ಮನೆಮದ್ದುಗಳು ಇಲ್ಲಿವೆ:

ಶುಂಠಿ:  NCBIಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಮಲೇರಿಯಾದ ನಂತರ ಶುಂಠಿಯ ಸೇವನೆಯು ಪ್ರಯೋಜನಕಾರಿಯಾಗಿದೆ. ಇದು ಆಂಟಿಮೈಕ್ರೊಬಿಯಲ್ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಮಲೇರಿಯಾದಿಂದ ಉಂಟಾಗುವ ವಾಕರಿಕೆ ಮತ್ತು ವಾಂತಿಯನ್ನು ತಡೆಯಲು ಸಹಾಯ ಮಾಡುತ್ತದೆ.

ಮಾಡುವ ವಿಧಾನ:  ಒಂದು ಇಂಚಿನ ಶುಂಠಿಯನ್ನು ಒಂದು ಅಥವಾ ಒಂದೂವರೆ ಕಪ್ ನೀರಿನಲ್ಲಿ ಕುದಿಸಿ. ನಂತರ ರುಚಿಗೆ ತಕ್ಕಂತೆ ಜೇನುತುಪ್ಪ ಸೇರಿಸಿ. ಪ್ರತಿದಿನ ಒಂದರಿಂದ ಎರಡು ಕಪ್ ಈ ಮಿಶ್ರಣವನ್ನು ಸೇವಿಸಿ.

ಅರಿಶಿನ: ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಾರ, ಅರಿಶಿನದಲ್ಲಿರುವ ಕರ್ಕ್ಯುಮಿನ್ ಮಲೇರಿಯಾ ವಿರುದ್ಧ ಪರಿಣಾಮಕಾರಿಯಾಗಿದೆ. ಅರಿಶಿನವು ಉತ್ಕರ್ಷಣ ನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿರುವ ಮಸಾಲೆಯಾಗಿದೆ. ಇದು ಪ್ಲಾಸ್ಮೋಡಿಯಂ ಸೋಂಕಿನಿಂದ ಉತ್ಪತ್ತಿಯಾಗುವ ವಿಷವನ್ನು ದೇಹದಿಂದ ತೆಗೆದುಹಾಕುತ್ತದೆ. ಮಲೇರಿಯಾದಿಂದ ಉಂಟಾಗುವ ಸ್ನಾಯು ಮತ್ತು ಕೀಲು ನೋವುಗಳನ್ನು ಕಡಿಮೆ ಮಾಡಲು ಇದು ಉರಿಯೂತದ ಕ್ರಿಯೆಯನ್ನು ಹೊಂದಿದೆ.

ಸೇವನೆ ಹೇಗೆ?:  ಒಂದು ಲೋಟ ಹಾಲಿನಲ್ಲಿ ಒಂದು ಚಮಚ ಅರಿಶಿನವನ್ನು ಬೆರೆಸಬೇಕು. ಪ್ರತಿದಿನ ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿದರೆ ಉತ್ತಮ.

ಮೆಂತ್ಯ: ಪ್ಲಾಸ್ಮೋಡಿಯಲ್ ವಿರೋಧಿ ಗುಣಗಳಿಂದಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಮಲೇರಿಯಾ ಪರಾವಲಂಬಿಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಮೆಂತ್ಯ ಹೊಂದಿದೆ. ಅದಕ್ಕಾಗಿಯೇ ವೈದ್ಯರು ಮಲೇರಿಯಾ ರೋಗಿಗಳಿಗೆ ಮೆಂತ್ಯ ಬೀಜಗಳನ್ನು ತಿನ್ನಲು ಸಲಹೆ ನೀಡುತ್ತಾರೆ.

ಸೇವನೆ ಹೇಗೆ? : ಅರ್ಧ ಚಮಚ ಮೆಂತ್ಯ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಸೋಸಿಕೊಂಡು ಖಾಲಿ ಹೊಟ್ಟೆಯಲ್ಲಿ ಸೇವಿಸಿ. ಮಲೇರಿಯಾ ಗುಣವಾಗುವವರೆಗೆ ಇದನ್ನು ಸೇವಿಸಬೇಕು.

ದಾಲ್ಚಿನ್ನಿ:  ದಾಲ್ಚಿನ್ನಿ ಮಲೇರಿಯಾಕ್ಕೆ ಪರಿಣಾಮಕಾರಿಯಾಗಿದೆ. ಇದು ಉತ್ಕರ್ಷಣ ನಿರೋಧಕ, ಉರಿಯೂತ ನಿವಾರಕ, ಆಂಟಿಬ್ಯಾಕ್ಟೀರಿಯಲ್, ನಂಜುನಿರೋಧಕ, ಆಂಟಿವೈರಲ್, ಆಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಮಲೇರಿಯಾದಿಂದ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸೇವನೆ ವಿಧಾನ: ಒಂದು ಲೋಟ ನೀರಿಗೆ ಒಂದು ಚಮಚ ದಾಲ್ಚಿನ್ನಿ ಪುಡಿ ಮತ್ತು ಒಂದು ಚಿಟಿಕೆ ಕರಿಮೆಣಸು ಸೇರಿಸಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ. ಹೀಗೆ ಸಿದ್ಧಪಡಿಸಿದ ಮಿಶ್ರಣವನ್ನು ನೀವು ದಿನಕ್ಕೆ ಒಂದು ಅಥವಾ ಎರಡು ಬಾರಿ ಕುಡಿಯಬಹುದು.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ಅದಾಗ್ಯೂ ಮಲೇರಿಯಾದಂತಹ ರೋಗ ಲಕ್ಷಣಗಳು ಕಂಡುಬಂದಲ್ಲಿ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ.)

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ