AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ

ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Health Tips: ಯಾರೆಲ್ಲಾ ಕಾಲೇಜಿಗೆ ಹೋಗುವ ಮೊದಲು ತಿಂಡಿ ಮಾಡಲ್ಲಾ? ಒಮ್ಮೆ ಇಲ್ಲಿ ಗಮನಿಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 18, 2024 | 9:47 AM

Share

ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕ. ಆದರೆ ಕೆಲವರು ಮಧ್ಯಾಹ್ನ ಒಂದೇ ಸರಿ ಊಟ ಮಾಡಿದರಾಯಿತು ಎಂದುಕೊಳ್ಳುತ್ತಾರೆ. ಅದರಲ್ಲಿಯೂ ಶಾಲೆ- ಕಾಲೇಜುಗಳಿಗೆ ಹೋಗುವ ಮಕ್ಕಳು ಬೆಳಗಿನ ಉಪಹಾರ ಮಾಡುವುದಿಲ್ಲ. ಇದರ ಪರಿಣಾಮ ಹೇಗಿರಬಹುದು ಎಂಬುದು ಅವರಿಗೆ ತಿಳಿದಿರುವುದಿಲ್ಲ. ಬಿಸಿ ರಕ್ತ, ಬೇಕಾದಷ್ಟು ಶಕ್ತಿ ಇರುತ್ತದೆ. ತಿಂಡಿ ಮಿಸ್ ಆದರೆ ಏನ್ ತೊಂದರೆ ಎಂದು ಕೊಳ್ಳುತ್ತಾರೆ. ನೀವು ಕೂಡ ಇಂತಹ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಾದರೆ ಇದರಿಂದ ಎಷ್ಟೆಲ್ಲಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ? ಆರೋಗ್ಯಕ್ಕೆ ಯಾವ ರೀತಿಯಲ್ಲಿ ಹಾನಿ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ನಮಗೆ ಸುಲಭವಾಗಿ ಸಿಗುತ್ತವೆ. ಆದರೆ ಬೆಳಗ್ಗೆ ತಿಂಡಿ ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಸಿಗುವುದಿಲ್ಲ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಇದು ಹೃದಯದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ದೇಹಕ್ಕೆ ಯಾವುದೇ ರೀತಿಯ ವಿಟಮಿನ್ ಮತ್ತು ಖನಿಜಾಂಶಗಳು ಸರಿಯಾಗಿ ಸಿಗುವುದಿಲ್ಲ.

ಇದನ್ನೂ ಓದಿ: ಮೊಳಕೆಯೊಡೆದ ಗೋಧಿಯಿಂದ ಇದೆ ಹತ್ತಾರು ಆರೋಗ್ಯ ಲಾಭಗಳು! ಅದನ್ನ ತಯಾರಿಸುವುದು ಹೇಗೆ?

ಪರಿಣಾಮವೇನು?

ಬೆಳಿಗ್ಗೆ ತಿಂಡಿ ಮಾಡದಿದ್ದರೆ ಅಂತವರ ಮೆದುಳು ನಿಧಾನವಾಗಿ ಹಾನಿಯಾಗುತ್ತದೆ. ಈ ರೀತಿ ಅಭ್ಯಾಸವನ್ನು ದೀರ್ಘ ಕಾಲದವರೆಗೆ ಮುಂದುವರೆಸಿಕೊಂಡು ಹೋದರೆ ಮೆದುಳು ಕೆಲಸ ಮಾಡುವ ವೇಗ ಮತ್ತು ಸಾಮರ್ಥ್ಯ ಕಡಿಮೆ ಆಗುತ್ತದೆ. ಇದರಿಂದ ಮೆಮೊರಿ ಲಾಸ್ ನಂತಹ ಗಂಭೀರ ಸಮಸ್ಯೆ ಕೂಡ ಬರುತ್ತದೆ.

ತೂಕ ಕಡಿಮೆ ಮಾಡಿಕೊಳ್ಳಲು ನೀವು ಬೆಳಗ್ಗಿನ ಉಪಹಾರ ಸೇವನೆ ಮಾಡುತ್ತಿಲ್ಲವಾದರೆ ಅದನ್ನು ಇಂದೇ ಬಿಟ್ಟು ಬಿಡಿ. ತೂಕ ಕಡಿಮೆ ಮಾಡಬೇಕಾದರೆ ಆರೋಗ್ಯಕರವಾದ ಆಹಾರ ಸೇವನೆ ಮಾಡಿ. ಇದರಿಂದ ಮೆಟಬಾಲಿಸಂ ಚೆನ್ನಾಗಿ ನಡೆಯುತ್ತದೆ. ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಿ ತೂಕ ಕಡಿಮೆಯಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ