AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೂಮಪಾನ ಮಾತ್ರವಲ್ಲ ಈ ಕೆಲವು ಅಂಶಗಳೂ ಶ್ವಾಸಕೋಶಕ್ಕೆ ಹಾನಿ ಉಂಟುಮಾಡಬಲ್ಲವು

ಧೂಮಪಾನವು ಶ್ವಾಸಕೋಶದ ಆರೋಗ್ಯಕ್ಕೆ ತುಂಬಾನೇ ಹಾನಿಕಾರಕವಾಗಿದ್ದು, ಅತಿಯಾದ ಧೂಮಪಾನದಿಂದ ಉಸಿರಾಟದ ತೊಂದರೆ, ಶ್ವಾಸಕೋಶದ ಕ್ಯಾನ್ಸರ್‌ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದು ನಿಮಗೆಲ್ಲರಿಗೂ ಗೊತ್ತೇ ಇದೆ ಅಲ್ವಾ. ಧೂಮಪಾನ ಮಾತ್ರವಲ್ಲ ಅತಿಯಾದ ಉಪ್ಪಿನಾಂಶವಿರುವ ಆಹಾರದ ಸೇವನೆಯ ಜೊತೆ ಜೊತೆಗೆ ಈ ಕೆಲವೊಂದು ಅಂಶಗಳೂ ಶ್ವಾಸಕೋಶಕ್ಕೆ ಹಾನಿಕಾರಕವಾಗಿದೆ. ಆ ಅಂಶಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಧೂಮಪಾನ ಮಾತ್ರವಲ್ಲ ಈ ಕೆಲವು ಅಂಶಗಳೂ ಶ್ವಾಸಕೋಶಕ್ಕೆ ಹಾನಿ ಉಂಟುಮಾಡಬಲ್ಲವು
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
|

Updated on: Aug 17, 2025 | 7:08 PM

Share

ಬೀಡಿ, ಸಿಗರೇಟ್‌ ಸೇದುವುದರಿಂದ (smoking)  ಶ್ವಾಸಕೋಶದ ಕ್ಯಾನ್ಸರ್‌ ಸೇರಿದಂತೆ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ ಎಂಬ ವಿಚಾರ ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಮುಖ್ಯವಾಗಿ ಧೂಮಪಾನ ಶ್ವಾಸಕೋಶದ ಕ್ಯಾನ್ಸರ್‌ಗೆ ಕಾರಣವಾಗುತ್ತದೆ. ಕೇವಲ ಧೂಮಪಾನ ಅಥವಾ ತಂಬಾಕು ಸೇವನೆ ಮಾತ್ರವಲ್ಲ ಇನ್ನೂ ಹತ್ತು ಹಲವು ಅಂಶಗಳು ನಮ್ಮ ಶ್ವಾಸಕೋಶಕ್ಕೆ ಹಾನಿಯನ್ನು (lung disease) ಉಂಟು ಮಾಡುತ್ತವೆ. ಅತಿಯಾದ ಉಪ್ಪಿನಾಂಶವಿರುವ ಆಹಾರ, ಮಾಲಿನ್ಯ ಸೇರಿದಂತೆ ಒಂದಷ್ಟು ಅಂಶಗಳು ಶ್ವಾಸಕೋಶದ ಆರೋಗ್ಯವನ್ನು ಹಾಳು ಮಾಡುತ್ತದಂತೆ. ಶ್ವಾಸಕೋಶಕ್ಕೆ ಹಾನಿಯನ್ನು ಉಂಟುಮಾಡುವ ಆ ಅಂಶಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಶ್ವಾಸಕೋಶಕ್ಕೆ ಹಾನಿಯುಂಟುಮಾಡುವ ಅಂಶಗಳು:

ಮಾಲಿನ್ಯ: ಮಾಲಿನ್ಯಯುಕ್ತವಾಗಿರುವಂತಹ ಗಾಳಿಯ ನಿರಂತರ ಸೇವನೆಯಿಂದಲೂ ನಮ್ಮ ಶ್ವಾಸಕೋಶಕ್ಕೆ ಹಾನಿಯಾಗುತ್ತದೆ. 2.5 ಪಿಪಿಎಮ್‌ ಗಿಂತ ಹೆಚ್ಚಿನ ಮಾಲಿನ್ಯ ಮಟ್ಟವಿರುವ ನಗರಗಳಲ್ಲಿ ವಾಸಿಸುವ ಜನರಿಗೆ ಶ್ವಾಸಕೋಶದ ಕ್ಯಾನ್ಸರ್‌ ಬರುವ ಅಪಾಯ ಹೆಚ್ಚಿದೆಯಂತೆ.

ಧೂಳು: ಅತಿಯಾದ ಧೂಳು ಕೂಡ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆ. ನಿರಂತರವಾಗಿ ಧೂಳಿಗೆ ಒಡ್ಡಿಕೊಳ್ಳುವುದರಿಂದ ಶ್ವಾಸಕೋಶದ ಅಂಗಾಂಶದಲ್ಲಿ ಧೂಳು ಮತ್ತು ಕಣಗಳನ್ನು ಸಂಗ್ರಹಿಸಬಹುದು, ಅದು ವಾಯುಮಾರ್ಗಗಳನ್ನು ಹಾನಿಗೊಳಿಸುತ್ತದೆ. ಹಾಗಾಗಿ ಹೊರಗಡೆ ಹೋಗುವಾಗ ಮಾಸ್ಕ್‌ ಹಾಕಲು ಮರೆಯದಿರಿ.

ಇದನ್ನೂ ಓದಿ
Image
ಸಂಧಿವಾತದಿಂದ ಮುಕ್ತಿ ಸಿಗಬೇಕು ಅಂದ್ರೆ ಈ ಅಭ್ಯಾಸವನ್ನು ತಪ್ಪದೆ ಪಾಲಿಸಿ
Image
ನಿಮಗೆ ಥೈರಾಯ್ಡ್ ಇದೆಯೇ? ಹಾಗಿದ್ರೆ ಈ ಆಹಾರಗಳ ಸೇವನೆ ವಿಷಕ್ಕೆ ಸಮಾನ
Image
ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿರುವುದನ್ನು ಹೇಗೆ ಪತ್ತೆ ಹಚ್ಚಬಹುದು?
Image
ಎದೆ ನೋವು ಮಾತ್ರವಲ್ಲ; ಪಾರ್ಶ್ವವಾಯು ಬರುವ ಮೊದಲು ದೇಹ ನೀಡುತ್ತೆ ಈ ಸೂಚನೆ

ರಾಸಾಯನಿಕಗಳು: ವಿಷಕಾರಿ ಅನಿಲಗಳು, ಕ್ಲೋರಿನ್, ಡೀಸೆಲ್‌ ಹೊಗೆ ಮತ್ತು ಬೆಂಜೀನ್‌ ಅನಿಗಳಿಗೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ಶ್ವಾಸಕೋಶದ ಕಾಯಿಲೆಗಳು ಉಂಟಾಗಬಹುದು. ಮುಖ್ಯವಾಗಿ ಇದು ಶ್ವಾಸಕೋಶದ ಕ್ಯಾನ್ಸರ್‌ಗೆ ಕಾರಣವಾಗುತ್ತದೆ.

ಕಳಪೆ ಜೀವನಶೈಲಿ ಮತ್ತು ಆರೋಗ್ಯ ಸ್ಥಿತಿ: ಕಳಪೆ ಗುಣಮಟ್ಟದ ಆಹಾರ ಸೇವನೆ, ವ್ಯಾಯಾಮದ ಕೊರತೆ,  ಕ್ಷಯ ಮತ್ತು ಆಸ್ತಮಾದಂತಹ ದೀರ್ಘಕಾಲದ  ಕಾಯಿಲೆಗಳು ಈ ಎಲ್ಲಾ ಅಂಶಗಳು ಕೂಡ ಶ್ವಾಸಕೋಶದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ.  ಮತ್ತು ಇದರಿಂದ ಶ್ವಾಸಕೋಶದ ಕ್ಯಾನ್ಸರ್‌ ಬರುವ ಸಾಧ್ಯತೆಯೂ ಇದೆ.

ಆನುವಂಶಿಕ ಅಂಶ: ಕೆಲವು ಜನರಿಗೆ  ಆನುವಂಶಿಕವಾಗಿ ಶ್ವಾಸಕೋಶಕ್ಕೆ ಸಂಬಂಧಪಟ್ಟ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಈ ಅಂಶ ಧೂಮಪಾನ ಮಾಡದಿದ್ದರೂ ಸಹ ಶ್ವಾಸಕೋಶದ ಕ್ಯಾನ್ಸರ್‌ಗೆ ಹೆಚ್ಚು ಒಳಗಾಗುವಂತೆ ಮಾಡುತ್ತದೆ. ಈ ರೋಗದಲ್ಲಿ ಕುಟುಂಬದ ಇತಿಹಾಸವು ಪ್ರಮುಖ ಪಾತ್ರ ವಹಿಸುತ್ತದೆ.

ಇದನ್ನೂ ಓದಿ: ಎದೆ ನೋವು ಮಾತ್ರವಲ್ಲ: ಪಾರ್ಶ್ವವಾಯು ಬರುವ ಮೊದಲು ದೇಹ ನೀಡುವ ಈ 4 ಸೂಚನೆಗಳನ್ನು ಕಡೆಗಣಿಸಬೇಡಿ

ಸೋಡಿಯಂ ಅಂಶವಿರುವ ಆಹಾರ ಸೇವನೆ: ಹೆಚ್ಚಿನ ಸೋಡಿಯಂ ಅಂಶವಿರುವ ಆಹಾರದ ಸೇವನೆಯೂ ಶ್ವಾಸಕೋಶದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೌದು ಹೆಚ್ಚಿನ ಉಪ್ಪಿನ ಅಂಶವಿರುವ ಆಹಾರವನ್ನು ಸೇವಿಸುವುದರಿಂದ ಶ್ವಾಸಕೋಶದ ಸಮಸ್ಯೆಗಳು ಹೆಚ್ಚಾಗುತ್ತವೆ. ಹಾಗಾಗಿ ದೇಹವನ್ನು ಆರೋಗ್ಯವಾಗಿಡಲು, ಪ್ರತಿದಿನ 2300 ಮಿಗ್ರಾಂಗಿಂತ ಹೆಚ್ಚು ಸೋಡಿಯಂ ಸೇವಿಸುವುದನ್ನು ತಪ್ಪಿಸಿ.

ಬೀಡಿ, ಸಿಗರೇಟ್ ಹೊಗೆ: ನೀವು ಧೂಮಪಾನ ಮಾಡದಿದ್ದರೂ, ನಿಮ್ಮ ಸುತ್ತಮುತ್ತಲಿನ ಯಾರಾದರೂ ಧೂಮಪಾನ ಮಾಡುತ್ತಿದ್ದರೆ, ಆ ಹೊಗೆ ನಿಮ್ಮ ದೇಹ ಸೇರಿದರೂ ಇದರಿಂದ ನಿಮ್ಮ ಶ್ವಾಸಕೋಶ ಹಾನಿಗೊಳಗಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ