AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕೊರೊನಾ ಸೋಂಕಿನ ಮಧ್ಯೆ ಮತ್ತೆ ನೆನಪಾಯಿತು ಈ ಗಿಡ! ‘ನೆಲನೆಲ್ಲಿ’ ಸಸ್ಯದಲ್ಲಿ ಅಡಗಿದೆ ಔಷಧೀಯ ಗುಣ

ಸಾಮಾನ್ಯವಾಗಿ ಸರ್ಪಸುತ್ತು, ಏಡ್ಸ್​, ನ್ಯುಮೋನಿಯಾ, ಚಿಕನ್​ ಗುನ್ಯಾ ಕಾಯಿಲೆಗಳಿಗೆ ಕಾರಣವಾಗುವಂತಹ ವೈರಸ್​ ಅನ್ನು ನಾಶಪಡಿಸುವ ಗುಣ ನೆಲನೆಲ್ಲಿ ಸಸ್ಯದಲ್ಲಿದೆ. ದೇಹದಲ್ಲಿ ಉರಿಯೂತ, ಮೂತ್ರದ ಸಮಸ್ಯೆಗಳಿಗೆ ಕೂಡಾ ಪರಿಹಾರವಾಗಿ ಕೆಲಸ ಮಾಡುತ್ತದೆ.

Health Tips: ಕೊರೊನಾ ಸೋಂಕಿನ ಮಧ್ಯೆ ಮತ್ತೆ ನೆನಪಾಯಿತು ಈ ಗಿಡ! ‘ನೆಲನೆಲ್ಲಿ’ ಸಸ್ಯದಲ್ಲಿ ಅಡಗಿದೆ ಔಷಧೀಯ ಗುಣ
ನೆನನೆಲ್ಲಿ ಸಸ್ಯ
TV9 Web
| Edited By: |

Updated on: Jun 08, 2021 | 8:00 AM

Share

ಕೆಲವು ಗಿಡಗಳು ಚಿಕ್ಕದಾಗಿದ್ದರೂ ಕೂಡಾ ಅದರಿಂದ ಪ್ರಯೋಜನಗಳು ಹೆಚ್ಚು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆಯಂತೆ ನೆಲನೆಲ್ಲಿ ಸಸ್ಯವೂ ಕೂಡಾ ಆರೋಗ್ಯಕ್ಕೆ ಒಳ್ಳೆಯದು. ಮೊದಲೆಲ್ಲಾ ಜ್ವರ, ಶೀತ, ನೆಗಡಿಯಂತಹ ಲಕ್ಷಣಗಳು ಕಂಡು ಬಂದರೆ ನೆಲನೆಲ್ಲಿ ತಂಬುಳಿ ಅಥವಾ ಕಷಾಯವನ್ನು ಮಾಡಿ ಸೇವಿಸುತ್ತಿದ್ದರು. ದಿನನಿತ್ಯ ಒಂದು ಲೋಟ ಕಷಾಯ ಸೇವಿಸಿದರೆ ಜ್ವರ, ನೆಗಡಿ ತಲೆನೋವು ಎರಡೇ ದಿನಕ್ಕೆ ಮಾಯವಾಗಿ ಬಿಡುತ್ತದೆ. ಹೀಗಾಗಿ ನೆಲನೆಲ್ಲಿಗೆ ವಿಶೇಷ ಪ್ರಾಮುಖ್ಯತೆ ಅಂದಿನಿಂದಲೂ ಇದೆ.

ಆದರೆ ಇದೀಗ ಪರಿಸ್ಥಿತಿ ಬದಲಾಗಿದೆ. ಕೊರೊನಾ ಸೋಂಕು ತಗುಲದಿರಲು ರೋಗನಿರೋಧಕ ಶಕ್ತಿ ಹೆಚ್ಚಿರುವ ಪೌಷ್ಠಿಕಾಂಶಯುಕ್ತ ಆಹಾರ ನಮ್ಮದಾಗಿರಬೇಕು. ಹಾಗಿರುವಾಗ ಮನೆಯಲ್ಲಿಯೇ ಸಿಗುವ ಒಳ್ಳೆಯ ಸಸ್ಯಗಳಿಂದ ಪೌಷ್ಠಿಕಾಂಶವನ್ನು ಪಡೆದುಕೊಳ್ಳುವುದು ಉತ್ತಮ. ನೆಲನೆಲ್ಲಿಯಲ್ಲಿರುವ ರೋಗನಿರೋಧಕ ಶಕ್ತಿ ನಿಮ್ಮನ್ನು ಆರೋಗ್ಯವಾಗಿಡುವಂತೆ ನೋಡಿಕೊಳ್ಳುವುದರಿಂದ ಅದರ ಸದುಪಯೋಗ ಪಡೆದುಕೊಳ್ಳಬಹುದು.

ಸಾಮಾನ್ಯವಾಗಿ ಸರ್ಪಸುತ್ತು, ಏಡ್ಸ್​, ನ್ಯುಮೋನಿಯಾ, ಚಿಕನ್​ ಗುನ್ಯಾ ಕಾಯಿಲೆಗಳಿಗೆ ಕಾರಣವಾಗುವಂತಹ ವೈರಸ್​ ಅನ್ನು ನಾಶಪಡಿಸುವ ಗುಣ ನೆಲನೆಲ್ಲಿ ಸಸ್ಯದಲ್ಲಿದೆ. ದೇಹದಲ್ಲಿ ಉರಿಯೂತ, ಮೂತ್ರದ ಸಮಸ್ಯೆಗಳಿಗೆ ಕೂಡಾ ಪರಿಹಾರವಾಗಿ ಕೆಲಸ ಮಾಡುತ್ತದೆ. ಮನೆಯಲ್ಲಿಯಲ್ಲಿಯೇ ಅತಿ ಸುಲಭದಲ್ಲಿ ಸಿಗುವ ಈ ಸಸ್ಯದ ಪ್ರಯೋಜನ ಒಂದೆರಡಲ್ಲ.

ಪ್ರಸ್ತುತ ಸಮಯದಲ್ಲಂತೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಮುಖ್ಯ. ಜ್ವರ, ಶೀತದಂತಹ ಲಕ್ಷಣಗಳು ಕಂಡು ಬಂದರೆ ಕಡೆಗಣಿಸುವಂತಿಲ್ಲ. ಹೀಗಿರುವಾಗ ನಮ್ಮ ಆರೋಗ್ಯದ ಸುರಕ್ಷತೆಯನ್ನು ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕಾಗಿದೆ. ನೆಲನೆಲ್ಲಿಯ ಕಷಾಯ ಅಥವಾ ತಂಬುಳಿ ಮಾಡಿ ಸವಿಯುವ ಮೂಲಕ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ನೆಲನೆಲ್ಲಿ ಎಂಬ ಹೆಸರೇ ಸೂಚಿಸುವಂತೆ ನೆಲದ ಮೇಲೆ ಚಿಕ್ಕ ಗಿಡಗಳಾಗಿ ಬೆಳೆಯುತ್ತವೆ. ಚಿಕ್ಕ ಸಸ್ಯಕ್ಕೆ ಚಿಕ್ಕದಾದ ಕಾಯಿ ಬಿಡುತ್ತದೆ. ಹಾಗಾಗಿ ನೆಲನೆಲ್ಲಿ ಎಂಬ ಹೆಸರು ಬಂದಿದೆ. ಗಾಯ, ಕಜ್ಜಿ, ತುರಿಕೆ ಹಾಗೂ ಜಂತುಹುಳುಗಳ ನಿವಾರಣೆಗೆ ನೆಲನೆಲ್ಲಿಯನ್ನು ಹಳ್ಳಿಗಳಲ್ಲಿ ಹೆಚ್ಚು ಬಳಸುತ್ತಾರೆ. ಸಾಮಾನ್ಯವಾಗಿ ಚರ್ಮರೋಗದ ನಿವಾರಣೆಗೆ ಈ ಸಸ್ಯವನ್ನು ಬಳಸುವುದು ಹೆಚ್ಚು. ಮಹಿಳೆಯರಿಗೆ ಮಾಸಿಕ ಋತುಸ್ರಾವದಲ್ಲಿ ಅಧಿಕ ರಕ್ರಸ್ರಾವವಾಗುತ್ತದೆ. ಇಂತಹ ಸಮಯದಲ್ಲಿ ನೆಲನೆಲ್ಲಿಯನ್ನು ಸೇವಿಸುವುದರಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಇದನ್ನೂ ಓದಿ: Health Tips: ಕಿಡ್ನಿ ಸ್ಟೋನ್​ ಸಮಸ್ಯೆಯ ಲಕ್ಷಣಗಳೇನು? ಪರಿಹಾರಗಳಿವೆಯಾ?

Health Tips: ಆರೋಗ್ಯ ಕಾಪಾಡಿಕೊಳ್ಳಲು ಮಹಿಳೆಯರಿಗಾಗಿ ಕಿವಿಮಾತು; ನಿಮಗಾಗಿಯೇ ಒಂದಿಷ್ಟು ಸಮಯ ಮೀಸಲಿಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ