AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೇಗ ಕೋಪ ಬರುತ್ತಾ? ಈ ಎಲ್ಲಾ ಕಾಯಿಲೆಯೂ ಬರುತ್ತೆ ಎಚ್ಚರ

ನೀವು ಕೂಡ ತಕ್ಷಣಕ್ಕೆ ಕೋಪ ಮಾಡಿಕೊಳ್ಳುತ್ತೀರಾ? ಹಾಗಾದರೆ ನೀವು ಹಲವಾರು ರೀತಿಯ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲಿಯೂ ಕೋಪ ಮಾಡಿಕೊಳ್ಳುವುದರಿಂದ ಬೇರೆಯವರಗಿಂತ ನಮಗೇ ಹೆಚ್ಚು ಹಾನಿ ಎಂಬುದನ್ನು ಮೊದಲು ಅರಿತುಕೊಳ್ಳಬೇಕು. ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಅರ್ಧ ಕೋಪವನ್ನು ಕಡಿಮೆ ಮಾಡಬಹುದು

Health Tips: ಬೇಗ ಕೋಪ ಬರುತ್ತಾ? ಈ ಎಲ್ಲಾ ಕಾಯಿಲೆಯೂ ಬರುತ್ತೆ ಎಚ್ಚರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 28, 2024 | 2:21 PM

Share

ಕೋಪದಿಂದ ಕೊಯ್ದ ಕೊಂಡ ಮೂಗು ಮತ್ತೆ ಬರುವುದಿಲ್ಲ ಎಂಬ ಮಾತಿದೆ. ಇದು ಅಕ್ಷರಶಃ ಸತ್ಯ. ಕೋಪಗೊಂಡ ಆವೇಶದಲ್ಲಿ ನಾವು ನಿಯಂತ್ರಣ ಕಳೆದುಕೊಳ್ಳುತ್ತೇವೆ. ಕೋಪಗೊಳ್ಳುವ ವಿಷಯಕ್ಕೆ ಕೋಪ ಮಾಡಿಕೊಳ್ಳುವುದು ಸಹಜ ಹಾಗಂತ ಚಿಕ್ಕ, ಪುಟ್ಟ ವಿಷಯಗಳಿಗೆ ರೇಗುತ್ತಿದ್ದರೆ ಅದು ಒಳ್ಳೆಯದಲ್ಲ. ಆಗ ನಿಮ್ಮ ಕೋಪವನ್ನು ನಿಯಂತ್ರಣದಲ್ಲಿಡಬೇಕು. ಅದಕ್ಕಾಗಿ ನೀವು ಧ್ಯಾನ, ಪ್ರಾಣಯಾಮ, ಯೋಗ, ದೀರ್ಘ ಉಸಿರಾಟ ಮತ್ತಿತರ ವಿಧಾನಗಳಿಂದ ಕೋಪ ಕಡಿಮೆ ಮಾಡಿಕೊಳ್ಳಬಹುದು. ಇಲ್ಲವಾದಲ್ಲಿ ಕೋಪ ಮಾಡಿಕೊಂಡು ವ್ಯಕ್ತಿತ್ವ ಮಾತ್ರವಲ್ಲ, ಆರೋಗ್ಯಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ.

ನೀವು ಕೂಡ ತಕ್ಷಣಕ್ಕೆ ಕೋಪ ಮಾಡಿಕೊಳ್ಳುತ್ತೀರಾ? ಹಾಗಾದರೆ ನೀವು ಹಲವಾರು ರೀತಿಯ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ. ಅದರಲ್ಲಿಯೂ ಕೋಪ ಮಾಡಿಕೊಳ್ಳುವುದರಿಂದ ಬೇರೆಯವರಗಿಂತ ನಮಗೇ ಹೆಚ್ಚು ಹಾನಿ ಎಂಬುದನ್ನು ಮೊದಲು ಅರಿತುಕೊಳ್ಳಬೇಕು. ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಅರ್ಧ ಕೋಪವನ್ನು ಕಡಿಮೆ ಮಾಡಬಹುದು.

ಕೋಪ ಮಾಡಿಕೊಂಡರೆ ಏನೆಲ್ಲಾ ತೊಂದರೆಯಾಗುತ್ತೆ?

*ಕೋಪ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಖಿನ್ನತೆ ಕಾಣಿಸಿಕೊಳ್ಳುತ್ತದೆ.

*ಬೇಗನೆ ಕೋಪ ಬರುವವರಿಗೆ ಬಿಪಿ ಜಾಸ್ತಿ ಎನ್ನುತ್ತಾರೆ. ಈ ಮಾತು ನಿಜ. ಕೋಪ ಮಾಡಿಕೊಳ್ಳುವುದರಿಂದ ರಕ್ತ ಸಂಚಾರದಲ್ಲಿ ಏರಳಿತ ಉಂಟಾಗುತ್ತದೆ ಜೊತೆಗೆ ರಕ್ತದೊತ್ತಡ ಅಧಿಕವಾಗುತ್ತದೆ ಇದರಿಂದ ಹೃದಯಾಘಾತ, ಪಾರ್ಶ್ವವಾಯು ಮುಂತಾದ ಸಮಸ್ಯೆಗಳು ಬರಬಹುದು.

*ಕೆಲವರಿಗೆ ಕೋಪ ಬಂದರೆ ತಲೆನೋವು ಕೂಡ ಬರುತ್ತದೆ. ಜೊತೆಗೆ ದೇಹದಲ್ಲಿ ನಿಶಕ್ತಿಯಾಗಿ ತಲೆತಿರುಗಬಹುದು.

*ಕೋಪಗೊಂಡು ಮಲಗಿದರೆ ತುಂಬಾ ಹೊತ್ತು ನಿದ್ದೆ ಬರುವುದಿಲ್ಲ, ಮನಸ್ಸಿನಲ್ಲಿ ಒಳ್ಳೆ ಆಲೋಚನೆ ಬರುವುದಿಲ್ಲ. ಸಾಮಾನ್ಯವಾಗಿ ನಿದ್ದೆ ಸರಿಯಾಗಿ ಬರದಿದ್ದರೆ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯವನ್ನು ಕಳೆದುಕೊಳ್ಳಬೇಕಾಗುತ್ತದೆ.

*ಅಧಿಕ ಕೋಪಗೊಂಡಾಗ ಕೆಲವರಿಗೆ ಮೆದುಳಿಗೆ ರಕ್ತ ಸಂಚಾರ ಮಾಡುವ ರಕ್ತನಾಳಗಳು ಒಡೆಯುತ್ತದೆ. ಇದರಿಂದ ಮೆದುಳಿಗೆ ಸರಿಯಾದ ರಕ್ತ ಹಾಗೂ ಆಮ್ಲಜನಕ ಪೂರೈಕೆಯಾಗದೆ ಪಾರ್ಶ್ವವಾಯು ಉಂಟಾಗಬಹುದು.

ಇದನ್ನೂದ ಓದಿ: ಬುದ್ಧಿವಂತಿಕೆ, ಮೆದುಳಿನ ಶಕ್ತಿಯನ್ನು ಹೆಚ್ಚಿಸುವ 5 ಆರೋಗ್ಯಕರ ಅಭ್ಯಾಸಗಳನ್ನು ಪಾಲನೆ ಮಾಡಿ

ಹಾಗಾಗಿ ಕೋಪಗೊಳ್ಳುವಾಗ ನೂರು ಬಾರಿ ಯೋಚಿಸಿ. ನಿಮ್ಮ ಆರೋಗ್ಯಕ್ಕೆ ಹಾನಿಯಾಗುವ ಕೆಲಸವನ್ನು ಎಂದಿಗೂ ಮಾಡಬೇಡಿ. ಒಳ್ಳೆಯದಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ