AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹಠಾತ್ತಾಗಿ ತೂಕ ಕಳೆದುಕೊಳ್ಳುತ್ತಿದ್ದೀರಾ?; ಈ ಕಾರಣಗಳ ಕುರಿತು ಗಮನವಿರಲಿ

ಯಾವುದೇ ಕಾರಣವಿಲ್ಲದೆ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ, ಅದು ಆತಂಕಪಡುವ ವಿಷಯವಾಗಿದೆ. ಸಾಮಾನ್ಯವಾಗಿ ಯಾವೆಲ್ಲಾ ಕಾರಣಗಳಿಂದ ತೂಕದಲ್ಲಿ ಹಠಾತ್ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದನ್ನು ಇಲ್ಲಿ ನೀಡಲಾಗಿದೆ.

Health Tips: ಹಠಾತ್ತಾಗಿ ತೂಕ ಕಳೆದುಕೊಳ್ಳುತ್ತಿದ್ದೀರಾ?; ಈ ಕಾರಣಗಳ ಕುರಿತು ಗಮನವಿರಲಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 10, 2021 | 8:48 AM

Share

ಹೆಚ್ಚಿನ ಜನರು ಅಧಿಕ ತೂಕದ ಸಮಸ್ಯೆಯಿಂದ ತೊಂದರೆಗೊಳಗಾಗುತ್ತಾರೆ ಮತ್ತು ದೇಹದಲ್ಲಿ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡಲು ವಿವಿಧ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾರೆ. ಉತ್ತಮ ಆಹಾರ ಸೇವನೆ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಬೊಜ್ಜು ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಯಾವುದೇ ಕಾರಣವಿಲ್ಲದೆ ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದರೆ, ಅದು ಆತಂಕಪಡುವ ವಿಷಯವಾಗಿದೆ. ಒಂದು ವೇಳೆ ಅಂತಹ ಸಂದರ್ಭ ನಿಮಗೆದುರಾದಲ್ಲಿ, ಅದಕ್ಕೆ ಆದಷ್ಟು ಬೇಗ ಕಾರಣವನ್ನು ಕಂಡುಕೊಳ್ಳುವುದು ಬಹು ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ತಕ್ಷಣ ವೈದ್ಯರನ್ನು ಕಂಡು ಅದರ ಹಿಂದಿನ ಕಾರಣವನ್ನು ತಿಳಿಯಲು ಪ್ರಯತ್ನಿಸಿ. ತ್ವರಿತ ತೂಕ ನಷ್ಟಕ್ಕೆ ಕಾರಣವಾಗುವ ಕೆಲವು ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಮಧುಮೇಹ: ದೇಹದಲ್ಲಿ ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದ ಮಧುಮೇಹ ಉಂಟಾಗುತ್ತದೆ. ಈ ರೋಗದಲ್ಲಿ ಸಕ್ಕರೆಯ ನಿಯಂತ್ರಣವಿಲ್ಲದಿದ್ದರೆ, ನಿಮ್ಮ ತೂಕವು ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ. ಆದ್ದರಿಂದ, ರಕ್ತದಲ್ಲಿನ ಸಕ್ಕರೆಯನ್ನು ಕಾಲ ಕಾಲಕ್ಕೆ ಪರೀಕ್ಷಿಸಬೇಕು.

ಗಂಭೀರ ರೋಗ: ಒಬ್ಬ ವ್ಯಕ್ತಿಯು ದೀರ್ಘಕಾಲದ ಕಾಯಿಲೆಯಿಂದ ಅಥವಾ ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವಾಗ ಯಾವುದೇ ಕಾರಣವಿಲ್ಲದೆ ಹಠಾತ್ ತೂಕ ನಷ್ಟ ಸಂಭವಿಸುತ್ತದೆ. ಒಬ್ಬ ವ್ಯಕ್ತಿಯು ಯಾವುದೇ ಕಾಯಿಲೆಯಿಂದ ಬಳಲುತ್ತಿರುವಾಗ, ಆತನ ದೇಹವು ಹದಗೆಡಬಹುದು, ಇದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕಾಗುತ್ತದೆ.

ದುರ್ಬಲ ಜೀರ್ಣಾಂಗ ವ್ಯವಸ್ಥೆ: ನಿಮ್ಮ ಜೀರ್ಣಾಂಗ ವ್ಯವಸ್ಥೆಯು ದುರ್ಬಲವಾಗಿದ್ದರೆ ಅಥವಾ ಸರಿಯಾಗಿ ಕೆಲಸ ಮಾಡದಿದ್ದರೆ ಆಹಾರವು ದೇಹದಲ್ಲಿ ಜೀರ್ಣವಾಗುವುದಿಲ್ಲ. ಅದಕ್ಕಾಗಿಯೇ ನಿಮ್ಮ ತೂಕ ವೇಗವಾಗಿ ಕಡಿಮೆಯಾಗಲು ಆರಂಭವಾಗುತ್ತದೆ. ಆಹಾರ ಜೀರ್ಣವಾಗದ ಕಾರಣ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಸಿಗುವುದಿಲ್ಲ, ಇದರಿಂದಾಗಿ ಇತರ ರೋಗಗಳ ಅಪಾಯ ಹೆಚ್ಚಾಗುತ್ತದೆ.

ಥೈರಾಯ್ಡ್: ಥೈರಾಯ್ಡ್ ಗ್ರಂಥಿಯು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ, ತೂಕ ನಷ್ಟವು ತ್ವರಿತವಾಗಿ ಸಂಭವಿಸುತ್ತದೆ. ಇದರ ಹೊರತಾಗಿ, ಥೈರಾಯ್ಡ್ ಗ್ರಂಥಿಯು ದುರ್ಬಲವಾದಾಗ, ಆರೋಗ್ಯವು ಹದಗೆಡುತ್ತದೆ ಮತ್ತು ಚಯಾಪಚಯ ಕ್ರಿಯೆ ಕೂಡ ನಿಧಾನವಾಗುತ್ತದೆ.

ಒತ್ತಡ: ಒತ್ತಡವು ತೂಕ ನಷ್ಟಕ್ಕೂ ಕಾರಣವಾಗುತ್ತದೆ. ಇದು ವ್ಯಕ್ತಿಯ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನೀವು ಮಾನಸಿಕವಾಗಿ ಆರೋಗ್ಯವಾಗಿರದಿದ್ದರೆ, ಹಸಿವಾಗದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಮಾನಸಿಕ ಆರೋಗ್ಯವೂ ಆರೋಗ್ಯಕರ ದೇಹಕ್ಕೆ ಅತ್ಯಗತ್ಯವಾಗಿದೆ.

ಸ್ನಾಯು ದೌರ್ಬಲ್ಯ: ದುರ್ಬಲ ಸ್ನಾಯುಗಳು ಅಥವಾ ಸ್ನಾಯುವಿನ ದ್ರವ್ಯರಾಶಿಯ ಕೊರತೆಯು ತ್ವರಿತ ತೂಕ ಇಳಿಕೆಗೆ ಕಾರಣವಾಗುತ್ತದೆ. ಸ್ನಾಯುಗಳು ದುರ್ಬಲಗೊಳ್ಳುವುದರ ಹಿಂದೆ ಹಲವು ಕಾರಣಗಳಿರಬಹುದು. ಇದರ ಹಿಂದಿನ ನಿಖರವಾದ ಕಾರಣ ತಿಳಿಯಲು ವೈದ್ಯಕೀಯ ಪರೀಕ್ಷೆ ಅನಿವಾರ್ಯವಾಗಿದೆ.

ಇದನ್ನೂ ಓದಿ:

Tomato Benefits: ಟೊಮೆಟೊ ಈ ನಾಲ್ಕು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ

ನಿಮಗೆ ಕೆಂಪು ಬೆಂಡೆ ಗೊತ್ತಾ?-ಆರೋಗ್ಯಕ್ಕೆ ತುಂಬ ಒಳ್ಳೆಯದಾದ ಈ ತರಕಾರಿ ಬೆಲೆ ಕಡಿಮೆ ಅಲ್ಲ !

(Health Tips: Reason for abrupt weight loss)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ