AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mustard: ಸಾಸಿವೆ ಸೇವನೆಯಿಂದಾಗುವ ಆರೋಗ್ಯದ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು ಇಲ್ಲಿವೆ

ಅತಿಯಾದರೆ ಅಮೃತವೂ ವಿಷ ಎಂಬಂತೆ ಒಗ್ಗರಣೆಗೆ ಬಳಸುವ ಸಾಸಿವೆ ಅತಿಯಾಗಿ ಸೇವಿಸಿದರೆ ಹೃದಯ ಸ್ನಾಯುಗಳಿಗೆ ಹಾನಿಯಾಗಲಿದೆ. ಹೃದಯ ವೈಫಲ್ಯಕ್ಕೂ ಕಾರಣವಾಗುತ್ತದೆ. ಸಾಸಿವೆ ಎಣ್ಣೆಯ ನಿರಂತರ ಬಳಕೆಯು ಮಯೋಕಾರ್ಡಿಯಲ್ ಪಾಲಿಡೋಸಿಸ್ ಸಮಸ್ಯೆಗೆ ಕಾರಣವಾಗುತ್ತದೆ.

Mustard: ಸಾಸಿವೆ ಸೇವನೆಯಿಂದಾಗುವ ಆರೋಗ್ಯದ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು ಇಲ್ಲಿವೆ
ಸಾಸಿವೆಯ ಪ್ರಯೋಜನಗಳು ಮತ್ತು ದುಷ್ಪರಿಣಾಮಗಳು
Follow us
Rakesh Nayak Manchi
|

Updated on: Apr 02, 2023 | 7:10 AM

ಪಾಕಪದ್ಧತಿಯಲ್ಲಿ ಸಾಸಿವೆಗೆ ಬಹಳ ಮಹತ್ವದ ಸ್ಥಾನವಿದೆ. ರುಚಿ, ಪೋಷಣೆ ಮತ್ತು ಆರೋಗ್ಯ ಗುಣಗಳಿಗೆ ಅದು ಹೆಸರುವಾಸಿಯಾಗಿದೆ. ಯಾವುದೇ ಪದಾರ್ಥಕ್ಕೆ ಸಾಸಿವೆಯ ಒಗ್ಗರಣೆ ಬಿದ್ದರೆ ಸಾಕು ಅದರ ಟೇಸ್ಟ್ ಬದಲಾಗುತ್ತದೆ. ಸಾಸಿವೆ ಮತ್ತು ಸಾಸಿವೆ ಎಣ್ಣೆಯನ್ನು ವಿವಿಧ ರೀತಿಯಲ್ಲಿ ಬಳಸಲಾಗುತ್ತದೆ. ಅದರಲ್ಲೂ ಸೊಪ್ಪಿನಲ್ಲಿ ಸಾಸಿವೆ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಸಾಸಿವೆ ಆರೋಗ್ಯಕರ ಖನಿಜಗಳಿಂದ ಸಮೃದ್ಧವಾಗಿದೆ. ಒಮೆಗಾ 3 ಸಮೃದ್ಧವಾಗಿರುವ ಸಾಸಿವೆ ಕಾಳುಗಳು (Mustard Seeds) ಉತ್ಕರ್ಷಣ ನಿರೋಧಕ ಗುಣಗಳನ್ನು ಸಹ ಹೊಂದಿವೆ. ಇಷ್ಟೆಲ್ಲ ಆರೋಗ್ಯಕರ ಅಂಶಗಳಿರುವ ಸಾಸಿವೆಯನ್ನು ಅತಿಯಾಗಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಹಾನಿಕರ. ಕೆಲವೊಮ್ಮೆ ಇದು ಮಾರಣಾಂತಿಕವಾಗಬಹುದು. ಹಾಗಾಗಿ ಸಾಸಿವೆ ಅಥವಾ ಸಾಸಿವೆ ಎಣ್ಣೆಯನ್ನು ದೀರ್ಘಕಾಲದವರೆಗೆ ಬಳಸುವವರು ಅದರ ದುಷ್ಪರಿಣಾಮಗಳ (Side Effects of Mustard) ಬಗ್ಗೆ ತಿಳಿದಿರಬೇಕು.

ಶ್ವಾಸಕೋಶದ ಕ್ಯಾನ್ಸರ್: ಸಾಸಿವೆ ಎಣ್ಣೆಯಲ್ಲಿರುವ ಎರುಸಿಕ್ ಆಮ್ಲವು ಶ್ವಾಸಕೋಶವನ್ನು ಹಾನಿಗೊಳಿಸುತ್ತದೆ. ಎರುಸಿಕ್ ಆಮ್ಲವು ಸಸ್ಯಜನ್ಯ ಎಣ್ಣೆಗಳಲ್ಲಿ ಕಂಡುಬರುವ ಕೊಬ್ಬಿನಾಮ್ಲವಾಗಿದೆ. ಇದು ಉಸಿರಾಟದ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಉಸಿರಾಟದ ವ್ಯವಸ್ಥೆಗೆ ಹಾನಿ ಮಾಡುತ್ತದೆ. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಸಾಸಿವೆ ಎಣ್ಣೆಯ ದೀರ್ಘಾವಧಿಯ ಸೇವನೆಯು ಶ್ವಾಸಕೋಶದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದು.

ಡ್ರಾಪ್ಸಿ ಟ್ರಬಲ್: ಡ್ರಾಪ್ಸಿ ಅಥವಾ ಎಡಿಮಾ ಒಂದು ಭಯಾನಕ ಕಾಯಿಲೆಯಾಗಿದೆ. ಇದು ದೇಹದ ವಿವಿಧ ಭಾಗಗಳಲ್ಲಿ ದೊಡ್ಡ ಪ್ರಮಾಣದ ದ್ರವದ ಶೇಖರಣೆಯಂತಹ ಊತವನ್ನು ಉಂಟುಮಾಡುತ್ತದೆ. ಕೆಲವರು ಪೂರಿ, ಕಚೋರಿ ಮುಂತಾದ ಖಾದ್ಯಗಳನ್ನು ತಯಾರಿಸಲು ಸಾಸಿವೆ ಎಣ್ಣೆಯನ್ನು ಬಳಸುತ್ತಾರೆ. ಸಾಸಿವೆ ಎಣ್ಣೆಯನ್ನು ಅತಿಯಾಗಿ ಸೇವಿಸುವುದರಿಂದ ಮೂತ್ರಪಿಂಡ ಮತ್ತು ಹೃದಯದಂತಹ ಅಂಗಗಳು ದುರ್ಬಲಗೊಳ್ಳುತ್ತವೆ. ಹೊಟ್ಟೆ ಉಬ್ಬರ, ಕೈಕಾಲು ಊತ ಮುಂತಾದ ಸಮಸ್ಯೆಗಳು ಎದುರಾಗುತ್ತವೆ.

ಅಲರ್ಜಿ ಸಮಸ್ಯೆ: ಸಾಸಿವೆ ಎಣ್ಣೆಯನ್ನು ಹೆಚ್ಚು ಸೇವಿಸುವುದರಿಂದ ಅಲರ್ಜಿ ಸಮಸ್ಯೆ ಉಂಟಾಗುತ್ತದೆ. ಸಾಸಿವೆ ಎಣ್ಣೆಯು ಹಿಸ್ಟಮೈನ್, ಅನಾಫಿಲ್ಯಾಕ್ಟಿಕ್ ಆಘಾತದ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದಲ್ಲದೆ, ಚರ್ಮದ ದದ್ದುಗಳು, ಉಸಿರಾಟದ ತೊಂದರೆ, ತಲೆತಿರುಗುವಿಕೆ, ವಾಂತಿ, ಮುಖ, ಗಂಟಲು ಮತ್ತು ಕಣ್ಣುಗಳ ಊತವು ಕಂಡುಬರುತ್ತದೆ.

ಹೃದ್ರೋಗ ಸಮಸ್ಯೆ: ಇಂದಿಗೂ ಅನೇಕ ಮನೆಗಳಲ್ಲಿ ಸಾಸಿವೆ ಎಣ್ಣೆಯನ್ನು ಅಡುಗೆಗೆ ಬಳಸುತ್ತಾರೆ. ಸಾಸಿವೆ ಎಣ್ಣೆಯನ್ನು ಅಡುಗೆಯಲ್ಲಿ ಪ್ರತಿದಿನ ಬಳಸುವುದರಿಂದ ಹೃದಯದ ತೊಂದರೆಗಳು ಉಂಟಾಗಬಹುದು. ಸಾಸಿವೆ ಕಾಳುಗಳಲ್ಲಿ ಹೆಚ್ಚಿನ ಎರುಸಿಕ್ ಆಮ್ಲವು ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು, ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು. ಸಾಸಿವೆ ಎಣ್ಣೆಯ ನಿರಂತರ ಬಳಕೆಯು ಮಯೋಕಾರ್ಡಿಯಲ್ ಪಾಲಿಡೋಸಿಸ್ ಸಮಸ್ಯೆಗೆ ಕಾರಣವಾಗುತ್ತದೆ.

ಗರ್ಭಪಾತ: ಗರ್ಭಿಣಿಯರು ಸಾಸಿವೆ ಎಣ್ಣೆ ಸೇವೆನೆ ಮಾಡಬಾರದು. ಸಾಸಿವೆ ಎಣ್ಣೆಯಲ್ಲಿರುವ ರಾಸಾಯನಿಕ ಸಂಯುಕ್ತಗಳು ಗರ್ಭದಲ್ಲಿರುವ ಭ್ರೂಣಕ್ಕೆ ಹಾನಿಕಾರಕ. ಅದಕ್ಕಾಗಿಯೇ ಗರ್ಭಿಣಿಯರು ಈ ಆಯಿಲ್ ಅನ್ನು ಬಳಸಬಾರದು ಎಂದು ವೈದ್ಯರು ಸೂಚಿಸುತ್ತಾರೆ. ಹಲವಾರು ಅಧ್ಯಯನಗಳು ಸಹ ಇದನ್ನು ಬೆಂಬಲಿಸಿವೆ.

ಅತಿಸಾರ: ಸಾಸಿವೆಯನ್ನು ಅತಿಯಾಗಿ ಸೇವಿಸುವುದರಿಂದ ಅತಿಸಾರ ಮತ್ತು ಹೊಟ್ಟೆನೋವು ಉಂಟಾಗುತ್ತದೆ. ಸಾಸಿವೆಯನ್ನು ಮಧುಮೇಹಿಗಳು ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾದವರು ಸೇವಿಸುವುದನ್ನು ಸೀಮಿತಗೊಳಿಸಬೇಕು. ಸಾಸಿವೆ ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೆ ಒಳ್ಳೆಯದಲ್ಲ.

ಸಾಸಿವೆ ಸೇವನೆಯ ಪ್ರಯೋಜನಗಳು (Benefits of Mustard)

ಮೈಗ್ರೇನ್‌: ತಲೆನೋವು ಮತ್ತು ಮೈಗ್ರೇನ್‌ನಿಂದ ಬಳಲುತ್ತಿರುವವರಿಗೆ ಸಾಸಿವೆ ಪರಿಣಾಮಕಾರಿ. ಬೀಜಗಳಲ್ಲಿ ಮೆಗ್ನೀಸಿಯಮ್ ತುಂಬಿದ್ದು ಅದು ನರಮಂಡಲವನ್ನು ಶಮನಗೊಳಿಸುತ್ತದೆ ಮತ್ತು ದೇಹದ ಯಾವುದೇ ಭಾಗಗಳಲ್ಲಿನ ನೋವು ಮತ್ತು ಒತ್ತಡವನ್ನು ನಿವಾರಿಸುತ್ತದೆ.

ಜೀರ್ಣಾಂಗ ವ್ಯವಸ್ಥೆ: ಸಾಸಿವೆ ಬೀಜಗಳು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಸಹ ಅತ್ಯುತ್ತಮವಾಗಿವೆ. ನೀವು ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿದ್ದರೆ ಸಾಸಿವೆ ಅದನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಸಾಸಿವೆ ಫೈಬರ್‌ನಿಂದ ತುಂಬಿರುತ್ತದೆ, ಇದು ಕರುಳಿನ ಚಲನೆಯನ್ನು ಸುಲಭಗೊಳಿಸಲು ಸಹಾಯ ಮಾಡುತ್ತದೆ ಮತ್ತು ದೇಹದ ಜೀರ್ಣಕಾರಿ ಶಕ್ತಿಯನ್ನು ಹೆಚ್ಚಿಸುತ್ತದೆ.

ಕೊಲೆಸ್ಟ್ರಾಲ್ ನಿರ್ವಹಣೆ: ಹೃದಯರಕ್ತನಾಳದ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಇದು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಇದು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಆ ಮೂಲಕ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಮೂಳೆ, ಉಗುರು, ಕೂದಲು, ಹಲ್ಲಿನ ಬಲಪಡಿಸುವಿಕೆ: ಸಾಸಿವೆ ಬೀಜಗಳು ನಿಮ್ಮ ಮೂಳೆಗಳಿಗೆ ಒಳ್ಳೆಯದು. ಸಾಸಿವೆ ಸೆಲೆನಿಯಮ್ ಎಂಬ ಖನಿಜದಿಂದ ತುಂಬಿರುತ್ತವೆ. ಇದು ನಿಮ್ಮ ಮೂಳೆಗಳನ್ನು, ಉಗುರುಗಳನ್ನು, ಕೂದಲು ಮತ್ತು ಹಲ್ಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತಾರೆ. ಸಾಸಿವೆ ಕಾಳುಗಳಲ್ಲಿ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿವೆ, ಇದು ಒಸಡುಗಳು, ಮೂಳೆಗಳು ಮತ್ತು ಹಲ್ಲುಗಳಲ್ಲಿನ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ