AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಹೆಚ್ಚು ಟೊಮೆಟೊ ತಿನ್ನಬೇಡಿ; ದುಷ್ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಅತಿಯಾದರೆ ಅಮೃತವು ವಿಷವೆಂಬಂತೆ ಟೊಮೆಟೊದ ಅತಿಯಾದ ಸೇವನೆ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮವನ್ನುಂಟು ಮಾಡಬಹುದು. ಇದಲ್ಲದೇ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಟೊಮೆಟೊ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

Health Tips: ಹೆಚ್ಚು ಟೊಮೆಟೊ ತಿನ್ನಬೇಡಿ; ದುಷ್ಪರಿಣಾಮಗಳ ಬಗ್ಗೆ ಇಲ್ಲಿದೆ ಮಾಹಿತಿ
ಅಕ್ಷತಾ ವರ್ಕಾಡಿ
|

Updated on: Aug 02, 2024 | 8:30 PM

Share

ಟೊಮೆಟೊಗಳನ್ನು ತಿನ್ನುವುದರಿಂದ ದೇಹಕ್ಕೆ ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಲೈಕೋಪೀನ್ ನಂತಹ ಪೋಷಕಾಂಶಗಳು ಲಭಿಸುತ್ತದೆ. ದೇಹಕ್ಕೆ ಇದು ಪ್ರಯೋಜನಕಾರಿಯಾಗಿರುವುದರಿಂದ, ದಿನಕ್ಕೆ ಒಮ್ಮೆಯಾದರೂ ಟೊಮೆಟೊವನ್ನು ಆಹಾರದಲ್ಲಿ ಬಳಸಬೇಕೆಂದು ವೈದ್ಯರು ಶಿಫಾರಸು ಮಾಡುತ್ತಾರೆ. ಆದರೆ ಅತಿಯಾದರೆ ಅಮೃತವು ವಿಷವೆಂಬಂತೆ ಟೊಮೆಟೊದ ಅತಿಯಾದ ಸೇವನೆ ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮವನ್ನುಂಟು ಮಾಡಬಹುದು. ಕೆಲವು ಆರೋಗ್ಯ ಸಮಸ್ಯೆಗಳಿರುವವರು ಟೊಮೆಟೊ ಸೇವನೆಯಿಂದ ದೂರವಿರಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ಆಮ್ಲೀಯತೆ:

ಟೊಮ್ಯಾಟೋ ನೈಸರ್ಗಿಕವಾಗಿ ಹೆಚ್ಚಿನ ಆಮ್ಲವನ್ನು ಹೊಂದಿರುತ್ತದೆ. ಈ ಕಾರಣದಿಂದಾಗಿ, ಇದು ಅಡುಗೆಯಲ್ಲಿ ಹುಳಿ ರುಚಿಯನ್ನು ನೀಡುತ್ತದೆ. ಹೆಚ್ಚು ಟೊಮೆಟೊ ತಿನ್ನುವುದರಿಂದ ಹೊಟ್ಟೆಯಲ್ಲಿ ಆಮ್ಲದ ಪ್ರಮಾಣವನ್ನು ಹೆಚ್ಚಿಸಬಹುದು ಮತ್ತು ಎದೆಯುರಿ, ವಾಯು ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ನೀವು ಈಗಾಗಲೇ ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿದ್ದರೆ, ಟೊಮೆಟೊವನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸುವುದು ಉತ್ತಮ.

ಮೂತ್ರಪಿಂಡದ ಕಲ್ಲುಗಳು:

ಕಿಡ್ನಿ ಸಮಸ್ಯೆ ಇರುವವರು ಟೊಮೆಟೊ ತಿನ್ನುವುದನ್ನು ತಪ್ಪಿಸಬೇಕು. ಕಾರಣ ಟೊಮೆಟೊದಲ್ಲಿ ಆಕ್ಸಲೇಟ್ ಅಧಿಕವಾಗಿರುತ್ತದೆ. ದೇಹದಲ್ಲಿ ಹೆಚ್ಚುವರಿ ಶೇಖರಣೆ ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ಕಿಡ್ನಿ ಮತ್ತು ಪಿತ್ತಕೋಶದ ಸಮಸ್ಯೆ ಇರುವವರು ವೈದ್ಯರ ಸಲಹೆಯಂತೆ ಟೊಮೆಟೊ ಸೇವಿಸಬೇಕು.

ಕೀಲು ನೋವು:

ಸಂಧಿವಾತದಂತಹ ಗಂಭೀರ ಸಮಸ್ಯೆ ಇರುವವರು ಟೊಮೆಟೊ ತಿನ್ನುವುದನ್ನು ತಪ್ಪಿಸಬೇಕು. ಇದರಲ್ಲಿರುವ ಹುಳಿಯು ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಉರಿಯೂತವನ್ನು ಉಂಟುಮಾಡುತ್ತದೆ. ಆದ್ದರಿಂದ, ನೀವು ಸಂಧಿವಾತ ಹೊಂದಿದ್ದರೆ ಟೊಮೆಟೊ ಸೇವನೆಯಿಂದ ದೂರವಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ