Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹದಲ್ಲಿ ಈ ರೀತಿಯ ಲಕ್ಷಣಗಳು ಕಂಡು ಬರುತ್ತವೆ

ಮೂತ್ರಪಿಂಡದ ಕಾರ್ಯವು ಶೇ. 90 ರಷ್ಟು ಕಡಿಮೆಯಾಗುವವರೆಗೆ ದೇಹದಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬರುವುದಿಲ್ಲ. ಮೂತ್ರಪಿಂಡದ ಕಾರ್ಯವು ಗಮನಾರ್ಹವಾಗಿ ಕುಸಿದ ನಂತರ ರೋಗಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತವೆ. ಇದರಿಂದ ಕಿಡ್ನಿ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಕಿಡ್ನಿ ವೈಫಲ್ಯದ ಮುಖ್ಯ ಲಕ್ಷಣಗಳೇನು ಎಂಬುದರ ಬಗ್ಗೆ ಖ್ಯಾತ ಮೂತ್ರಪಿಂಡ ತಜ್ಞರಾದ ಪಿ.ಎಸ್.ವಾಲಿ ಅವರು ನೀಡಿರುವ ಮಾಹಿತಿ ಇಲ್ಲಿದೆ.

Health Tips: ಕಿಡ್ನಿ ವೈಫಲ್ಯಕ್ಕೂ ಮುನ್ನ ದೇಹದಲ್ಲಿ ಈ ರೀತಿಯ ಲಕ್ಷಣಗಳು ಕಂಡು ಬರುತ್ತವೆ
Kidney disease
Follow us
ಅಕ್ಷತಾ ವರ್ಕಾಡಿ
|

Updated on: Aug 01, 2024 | 6:56 PM

ನಮ್ಮ ದೇಹದಲ್ಲಿರುವ ಕಲ್ಮಶಗಳನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು ಮೂತ್ರಪಿಂಡಗಳ ಮುಖ್ಯ ಕಾರ್ಯ. ಮೂತ್ರಪಿಂಡದ ಕಾರ್ಯವು ಹದಗೆಟ್ಟಾಗ ಮತ್ತು ದೇಹದ ವಿಷವನ್ನು ತೆಗೆದುಹಾಕುವ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗದಿದ್ದಾಗ ಮಾತ್ರ ವಿವಿಧ ರೀತಿಯ ಮೂತ್ರಪಿಂಡದ ಕಾಯಿಲೆಗಳು ಆಕ್ರಮಣ ಮಾಡುವ ಸಾಧ್ಯತೆಯಿದೆ. ಆದಾಗ್ಯೂ, ಮೂತ್ರಪಿಂಡದ ಕಾರ್ಯವು ಶೇ. 90 ರಷ್ಟು ಕಡಿಮೆಯಾಗುವವರೆಗೆ ಯಾವುದೇ ರೋಗಲಕ್ಷಣಗಳು ಕಂಡುಬರುವುದಿಲ್ಲ. ಮೂತ್ರಪಿಂಡದ ಕಾರ್ಯವು ಗಮನಾರ್ಹವಾಗಿ ಕುಸಿದ ನಂತರ ರೋಗಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತವೆ. ಇದರಿಂದ ಕಿಡ್ನಿ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚುವುದು ಕಷ್ಟವಾಗುತ್ತದೆ. ಕಿಡ್ನಿ ವೈಫಲ್ಯದ ಮುಖ್ಯ ಲಕ್ಷಣಗಳೇನು ಎಂಬುದರ ಬಗ್ಗೆ ಖ್ಯಾತ ಮೂತ್ರಪಿಂಡ ತಜ್ಞರಾದ ಪಿ.ಎಸ್.ವಾಲಿ ಅವರು ನೀಡಿರುವ ಮಾಹಿತಿ ಇಲ್ಲಿದೆ.

ಕಾಲು, ಮುಖದ ಊತ:

ಮೂತ್ರಪಿಂಡಗಳು ದೇಹದಲ್ಲಿರುವ ಕಲ್ಮಶಗಳನ್ನು ಸರಿಯಾಗಿ ಶೋಧಿಸದಿದ್ದಾಗ, ದೇಹದಲ್ಲಿ ದ್ರವದ ಧಾರಣವು ಕಾಲುಗಳು, ಮುಖ ಮತ್ತು ದೇಹದ ಇತರ ಭಾಗಗಳ ಊತವನ್ನು ಉಂಟುಮಾಡಬಹುದು.

ಚಿಕ್ಕ ವಯಸ್ಸಿನಲ್ಲಿ ಅಧಿಕ ಬಿಪಿ:

ಚಿಕ್ಕ ವಯಸ್ಸಿನಲ್ಲಿ ಅಧಿಕ ರಕ್ತದೊತ್ತಡವು ಮೂತ್ರಪಿಂಡದ ಸಮಸ್ಯೆಗಳ ಸಂಕೇತವಾಗಿರಬಹುದು. ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಮೂತ್ರಪಿಂಡಗಳು ಪ್ರಮುಖ ಪಾತ್ರವಹಿಸುತ್ತವೆ.

ಮೂತ್ರ ವಿಸರ್ಜಿಸಲು ರಾತ್ರಿಯಲ್ಲಿ ಆಗಾಗ ಏಳುವುದು:

ಮೂತ್ರ ವಿಸರ್ಜಿಸಲು ರಾತ್ರಿಯಲ್ಲಿ ಆಗಾಗ ಏಳುವುದು ಕೂಡ ಕಿಡ್ನಿ ವೈಫಲ್ಯದ ಆರಂಭಿಕ ಸಂಕೇತವಾಗಿರಬಹುದು.

ಇದನ್ನೂ ಓದಿ: ಲೈಂಗಿಕ ಶಕ್ತಿ ಕಡಿಮೆಯಾಗಿದ್ದರೆ ಈ ಮಸಾಲೆಯನ್ನು ಪ್ರತಿದಿನ ಸೇವನೆ ಮಾಡಿ

ಮೂತ್ರದಲ್ಲಿ ರಕ್ತ ಅಥವಾ ಬಣ್ಣ ಬದಲಾವಣೆ:

ಮೂತ್ರ ವಿಸರ್ಜನೆಯ ಸಮಯದಲ್ಲಿ ರಕ್ತ ಬರುವುದು ಅಥವಾ ಮೂತ್ರದ ಬಣ್ಣದಲ್ಲಿ ಬದಲಾವಣೆ ಮೂತ್ರಪಿಂಡದ ಸಮಸ್ಯೆಗಳ ಸಂಕೇತವಾಗಿದೆ. ಇದಲ್ಲದೆ ಮೂತ್ರಪಿಂಡದ ಕಾರ್ಯವು ಕಡಿಮೆಯಾದಾಗ ದೇಹದಲ್ಲಿ ದ್ರವದ ಧಾರಣವು ಉಸಿರಾಟದ ತೊಂದರೆಗಳನ್ನು ಉಂಟುಮಾಡುತ್ತದೆ.

ವಾಂತಿ, ದೇಹ ತುರಿಕೆ:

ಕಿಡ್ನಿ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ದೇಹದಲ್ಲಿ ವಿಷಕಾರಿ ಅಂಶಗಳು ಸೇರಿಕೊಂಡು ವಾಂತಿ, ಅನ್ನ ತಿನ್ನಲು ತೊಂದರೆ, ದೇಹದ ತುರಿಕೆ ಸಾಮಾನ್ಯ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
‘ಅಪ್ಪು’ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್
ಮಗಳಿಗೆ ಹೊಟ್ಟೆನೋವಿನ ಸಮಸ್ಯೆ ಇತ್ತೆಂದ ತಂದೆ ಶಿವಕುಮಾರ್