ಈ ಸಮಸ್ಯೆಯಿಂದ ಬಳಲುತ್ತಿದ್ದರೆ ತಪ್ಪಿಯೂ ಕಿತ್ತಳೆ ಹಣ್ಣು ಸೇವಿಸಬೇಡಿ

ಕಿತ್ತಳೆ ಹಣ್ಣು ವಿಟಮಿನ್ ಸಿ ಹೇರಳವಾಗಿರುವ ಹಣ್ಣಾಗಿದ್ದು, ನಮ್ಮ ಕಣ್ಣು, ಕೂದಲು, ಮೂಳೆ ಇತ್ಯಾದಿಗಳ ಪೋಷಣೆಗೆ ಉಪಯುಕ್ತವಾಗಿದೆ. ಆದರೆ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣಿನಿಂದ ದೂರವಿರುವುದು ಅಗತ್ಯ. ಆದ್ದರಿಂದ ಯಾವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣು ಸೇವಿಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಈ ಸಮಸ್ಯೆಯಿಂದ ಬಳಲುತ್ತಿದ್ದರೆ ತಪ್ಪಿಯೂ ಕಿತ್ತಳೆ ಹಣ್ಣು ಸೇವಿಸಬೇಡಿ

Updated on: Jun 04, 2024 | 9:45 AM

ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಚಳಿಗಾಲದಲ್ಲಿ ಕಿತ್ತಳೆ ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಕೆಲವು ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣು ಸೇವಿಸುವುದು ಒಳ್ಳೆಯದಲ್ಲ. ಇದು ನಿಮ್ಮ ಸಮಸ್ಯೆಯನ್ನು ಉಲ್ಬಣಗೊಳಿಸಬಹುದು. ಆದ್ದರಿಂದ ಯಾರೆಲ್ಲಾ ಕಿತ್ತಳೆ ಹಣ್ಣು ಸೇವಿಸಬಾರದು. ಇದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು? ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಯಾವ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣು ಸೇವಿಸಬಾರದು?

  • ಕಿಡ್ನಿ ಸ್ಟೋನ್ ಸಮಸ್ಯೆ ಇರುವವರು ಕಿತ್ತಳೆ ಹಣ್ಣನ್ನೂ ತ್ಯಜಿಸಬೇಕು ಎನ್ನುತ್ತಾರೆ ತಜ್ಞರು. ಕಿಡ್ನಿ ಕಲ್ಲುಗಳಿರುವವರಲ್ಲಿ ಕಿತ್ತಳೆ ನೋವು ಉಂಟುಮಾಡುತ್ತದೆ. ಕಿತ್ತಳೆ ಕೆಲವು ಜನರಲ್ಲಿ ಎದೆಯುರಿ ಉಂಟುಮಾಡಬಹುದು.
  • ನೆಗಡಿ ಮತ್ತು ಕೆಮ್ಮಿನಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣಿನಿಂದ ದೂರವಿರಬೇಕು ಎನ್ನುತ್ತಾರೆ ತಜ್ಞರು. ಕಿತ್ತಳೆಯು ಸಂಕೋಚಕ ಗುಣಗಳಿಂದ ಸಮೃದ್ಧವಾಗಿದೆ. ಹಾಗಾಗಿ ನೆಗಡಿ ಮತ್ತು ಕೆಮ್ಮು ಇರುವವರು ಇವುಗಳಿಂದ ದೂರವಿರಬೇಕು. ಸೇವಿಸಿದರೆ ಶೀತ ಮತ್ತು ಕೆಮ್ಮು ಬರುವ ಸಾಧ್ಯತೆ ಹೆಚ್ಚುತ್ತದೆ.
  • ಅಸಿಡಿಟಿಯಿಂದ ಬಳಲುತ್ತಿರುವವರು ಯಾವುದೇ ಸಂದರ್ಭದಲ್ಲೂ ಕಿತ್ತಳೆ ಸೇವಿಸಬಾರದು. ಏಕೆಂದರೆ ಕಿತ್ತಳೆಯಲ್ಲಿ ಹೆಚ್ಚಿನ ಆಮ್ಲ ಅಂಶವಿದೆ. ಹಾಗಾಗಿ ಅಸಿಡಿಟಿಯಿಂದ ಬಳಲುತ್ತಿರುವವರು ಕಿತ್ತಳೆ ಹಣ್ಣನ್ನು ಸೇವಿಸಿದರೆ ಹೊಟ್ಟೆಯಲ್ಲಿ ಆಸಿಡ್ ಪ್ರಮಾಣ ಹೆಚ್ಚುತ್ತದೆ. ಇದು ಹೊಟ್ಟೆ ನೋವನ್ನು ಉಂಟುಮಾಡುತ್ತದೆ.
  • ಹಲ್ಲಿನ ಸಮಸ್ಯೆಯಿಂದ ಬಳಲುತ್ತಿರುವವರೂ ಕಿತ್ತಳೆ ಸೇವಿಸಬಾರದು ಎನ್ನುತ್ತಾರೆ ತಜ್ಞರು. ವಿಶೇಷವಾಗಿ ದುರ್ಬಲ ಹಲ್ಲು ಹೊಂದಿರುವ ಜನರು ಕಿತ್ತಳೆ ಹಣ್ಣನ್ನು ತಪ್ಪಿಸಬೇಕು. ಹಲ್ಲಿನ ದಂತಕವಚದ ಜೊತೆಗೆ ಕ್ಯಾಲ್ಸಿಯಂ ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಇದರಿಂದ ಹಲ್ಲಿನ ಆರೋಗ್ಯ ಹಾಳಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us