ನಿಮ್ಮ ಲಿವರ್ ಆರೋಗ್ಯಕ್ಕೆ ಆಲ್ಕೋಹಾಲ್​ಗಿಂತ ಹೆಚ್ಚು ಅಪಾಯಕಾರಿ ಆಹಾರಗಳಿವು

ಲಿವರ್ ರಕ್ತದಲ್ಲಿನ ಹೆಚ್ಚಿನ ರಾಸಾಯನಿಕ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ಪಿತ್ತರಸ ಎಂಬ ಉತ್ಪನ್ನವನ್ನು ಹೊರಹಾಕುತ್ತದೆ. ಲಿವರ್ ಮತ್ತು ಜೀರ್ಣಾಂಗ ವ್ಯವಸ್ಥೆಯು ಸುಲಭವಾಗಿ ಕೆಲಸ ಮಾಡಲು ಸಹಾಯ ಮಾಡಲು ನಮ್ಮ ಹೊಟ್ಟೆಯಲ್ಲಿ ವಿಷಕಾರಿ ಆಹಾರ ಸೇರಿಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ.

ನಿಮ್ಮ ಲಿವರ್ ಆರೋಗ್ಯಕ್ಕೆ ಆಲ್ಕೋಹಾಲ್​ಗಿಂತ ಹೆಚ್ಚು ಅಪಾಯಕಾರಿ ಆಹಾರಗಳಿವು
ಲಿವರ್Image Credit source: iStock
Follow us
|

Updated on: Jan 15, 2024 | 6:30 PM

ಆಲ್ಕೋಹಾಲ್ ಸೇವನೆಯಿಂದ ಲಿವರ್ ಆರೋಗ್ಯ ಹದಗೆಡುತ್ತದೆ. ಇದು ಪ್ರಾಣಕ್ಕೂ ಸಂಚಕಾರ ತರಬಹುದು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ, ಧೂಮಪಾನ, ಮದ್ಯಪಾನಗಳ ಅಭ್ಯಾಸ ಬಿಟ್ಟುಬಿಡಬೇಕೆಂದು ಎಚ್ಚರಿಕೆ ಸಂದೇಶಗಳನ್ನು ನೀಡಲಾಗುತ್ತದೆ. ಆದರೆ, ಆಲ್ಕೋಹಾಲ್​ಗಿಂತಲೂ ಹೆಚ್ಚು ನಮ್ಮ ಲಿವರ್ ಮೇಲೆ ಪರಿಣಾಮ ಬೀರುವ ಕೆಲವು ಆಹಾರಗಳಿವೆ ಎಂಬುದು ಹಲವರಿಗೆ ತಿಳಿದಿಲ್ಲ. ಈ ಆಹಾರಗಳನ್ನು ನಿರಂತರವಾಗಿ ಸೇವಿಸುವುದರಿಂದ ನಮ್ಮ ಲಿವರ್ ಆರೋಗ್ಯ ಹದಗೆಡುತ್ತಾ ಹೋಗುತ್ತದೆ.

ಲಿವರ್ ರಕ್ತದಲ್ಲಿನ ಹೆಚ್ಚಿನ ರಾಸಾಯನಿಕ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ಪಿತ್ತರಸ ಎಂಬ ಉತ್ಪನ್ನವನ್ನು ಹೊರಹಾಕುತ್ತದೆ. ಇದು ಲಿವರ್​ನಿಂದ ತ್ಯಾಜ್ಯ ಉತ್ಪನ್ನಗಳನ್ನು ಸಾಗಿಸಲು ಸಹಾಯ ಮಾಡುತ್ತದೆ. ಅಂದರೆ, ಇದು ನಿಮ್ಮ ದೇಹವನ್ನು ನಿರ್ವಿಷಗೊಳಿಸುತ್ತದೆ ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಲಭವಾಗಿ ಚಲಿಸುವಂತೆ ಮಾಡುತ್ತದೆ. ಲಿವರ್ ಮತ್ತು ಜೀರ್ಣಾಂಗ ವ್ಯವಸ್ಥೆಯು ಸುಲಭವಾಗಿ ಕೆಲಸ ಮಾಡಲು ಸಹಾಯ ಮಾಡಲು ನಮ್ಮ ಹೊಟ್ಟೆಯಲ್ಲಿ ವಿಷಕಾರಿ ಆಹಾರ ಸೇರಿಕೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಲಿವರ್ ಅನ್ನು ರಕ್ಷಿಸಲು ನೀವು ಕೆಲವು ಆಹಾರಗಳ ಸೇವನೆಯನ್ನು ಅವಾಯ್ಡ್​ ಮಾಡಬೇಕು. ಆ ಆಹಾರಗಳು ಇಲ್ಲಿವೆ.

ಸ್ಯಾಚುರೇಟೆಡ್ ಕೊಬ್ಬುಗಳು:

ಸ್ಯಾಚುರೇಟೆಡ್ ಕೊಬ್ಬು ಒಂದು ರೀತಿಯ ಆಹಾರದ ಕೊಬ್ಬು. ಇದು ಟ್ರಾನ್ಸ್ ಕೊಬ್ಬಿನ ಜೊತೆಗೆ ಅನಾರೋಗ್ಯಕರ ಕೊಬ್ಬುಗಳಲ್ಲಿ ಒಂದಾಗಿದೆ. ಈ ಕೊಬ್ಬುಗಳು ಕೋಣೆಯ ಉಷ್ಣಾಂಶದಲ್ಲಿ ಹೆಚ್ಚಾಗಿ ಘನವಾಗಿರುತ್ತವೆ. ಬೆಣ್ಣೆ, ಪಾಮ್ ಮತ್ತು ತೆಂಗಿನ ಎಣ್ಣೆ, ಚೀಸ್ ಮತ್ತು ಕೆಂಪು ಮಾಂಸದಂತಹ ಆಹಾರಗಳು ಹೆಚ್ಚಿನ ಪ್ರಮಾಣದಲ್ಲಿ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತವೆ.

ಇದನ್ನೂ ಓದಿ: ಆಲ್ಕೋಹಾಲ್ ಕುಡಿಯುವುದರಿಂದ ತೂಕ ಹೆಚ್ಚಾಗುತ್ತಾ? ಅಸಲಿ ಸತ್ಯ ಇಲ್ಲಿದೆ

ಸಕ್ಕರೆ ಅಂಶ:

ಇವು ಸಿಹಿಕಾರಕ ಅಂಶಗಳಾಗಿವೆ. ಇವುಗಳನ್ನು ಸಂಸ್ಕರಿಸಿದಾಗ ಅಥವಾ ತಯಾರಿಸಿದಾಗ ಆಹಾರಗಳು ಅಥವಾ ಪಾನೀಯಗಳಿಗೆ ಸೇರಿಸಲಾಗುತ್ತದೆ. ಹಣ್ಣು ಅಥವಾ ಹಾಲಿನಲ್ಲಿರುವಂತಹ ನೈಸರ್ಗಿಕವಾಗಿ ಕಂಡುಬರುವ ಸಕ್ಕರೆ ಅಂಶಕ್ಕೂ ಈ ಆರ್ಟಿಫಿಷಿಯಲ್ ಸಕ್ಕರೆ ಅಂಶಕ್ಕೂ ವ್ಯತ್ಯಾಸಗಳಿವೆ.

ಸಂಸ್ಕರಿತ ಮಾಂಸಗಳು:

ಉಪ್ಪು ಹಾಕುವ ಮೂಲಕ ಸಂರಕ್ಷಿಸಲ್ಪಟ್ಟ ಮಾಂಸಗಳು, ಕ್ಯೂರಿಂಗ್ ಅಥವಾ ರಾಸಾಯನಿಕ ಸಂರಕ್ಷಕಗಳನ್ನು ಸೇರಿಸಿದ ಪದಾರ್ಥಗಳು ಆರೋಗ್ಯಕ್ಕೆ ಹಾನಿಕರವಾಗಿದೆ.

ಕೃತಕ ಬಣ್ಣ:

ಆಹಾರಗಳನ್ನು ತಾಜಾವಾಗಿಡಲು ಅಥವಾ ಅವುಗಳ ಬಣ್ಣ, ಸುವಾಸನೆ ಅಥವಾ ವಿನ್ಯಾಸವನ್ನು ಹೆಚ್ಚಿಸಲು ರಾಸಾಯನಿಕಗಳನ್ನು ಸೇರಿಸಲಾಗುತ್ತದೆ. ಅವು ಆಹಾರದ ಬಣ್ಣಗಳು, ಸುವಾಸನೆ ವರ್ಧಕಗಳನ್ನು ಒಳಗೊಂಡಿರುತ್ತದೆ.

ಹೈಡ್ರೋಜನೀಕರಿಸಿದ ತೈಲಗಳು:

ಆಲಿವ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಮತ್ತು ಸೋಯಾಬೀನ್​ಗಳಂತಹ ಸಸ್ಯಗಳಿಂದ ತೆಗೆದ ಖಾದ್ಯ ತೈಲಗಳಿಂದ ತಯಾರಿಸಿದ ಆಹಾರವನ್ನು ಆದಷ್ಟೂ ಕಡಿಮೆ ಸೇವಿಸಿ.

ಉಪ್ಪು ಮತ್ತು ಹೆಚ್ಚಿನ ಸೋಡಿಯಂ ಆಹಾರಗಳು:

ಬ್ರೆಡ್, ಪಿಜ್ಜಾ, ಸ್ಯಾಂಡ್ವಿಚ್, ಬರ್ರಿಟೊಗಳು, ಟ್ಯಾಕೋಗಳು ಮುಂತಾದ ಆಹಾರಗಳನ್ನು ಕಡಿಮೆ ಸೇವಿಸಿ.

ಇದನ್ನೂ ಓದಿ: ಆಲ್ಕೋಹಾಲ್ ಸೇವನೆಯಿಂದ ಕರುಳಿನ ಆರೋಗ್ಯದ ಮೇಲೆ ಬೀರುವ 5 ಹಾನಿಕಾರಕ ಪರಿಣಾಮಗಳ ಬಗ್ಗೆ ಗೊತ್ತಾ? ತಜ್ಞರ ಸಲಹೆ ಇಲ್ಲಿದೆ

ಹೆಚ್ಚು ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳು:

ಬಿಳಿ ಹಿಟ್ಟು, ಬಿಳಿ ಬ್ರೆಡ್, ಬಿಳಿ ಅಕ್ಕಿ, ಪೇಸ್ಟ್ರಿಗಳು, ಸೋಡಾ, ಪಾಸ್ತಾ, ಸಿಹಿತಿಂಡಿಗಳು, ಉಪಹಾರ ಧಾನ್ಯಗಳು ಮತ್ತು ಸಕ್ಕರೆ ಸೇರಿಸಿದ ಆಹಾರ ನಿಮ್ಮ ಲಿವರ್ ಮೇಲೆ ಪರಿಣಾಮ ಬೀರುತ್ತದೆ.

ತಂಪು ಪಾನೀಯಗಳು:

ತಂಪು ಪಾನೀಯಗಳಲ್ಲಿ ಬಳಸಲಾಗುವ ಸಂಸ್ಕರಣೆಯ ಅಂಶಗಳು ಮತ್ತು ಹೆಚ್ಚಿನ ಮಟ್ಟದ ಸಕ್ಕರೆಯಿಂದ ಅವು ಆರೋಗ್ಯಕ್ಕೆ ಅಪಾಯಕಾರಿಯಾಗಿವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು