AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆಯುರ್ವೇದದ ಪ್ರಕಾರ ಊಟದ ನಂತರ ಈ ಕೆಲವು ಚಟುವಟಿಕೆಗಳನ್ನು ಮಾಡಲೇಬಾರದು! ಯಾಕೆ ಗೊತ್ತಾ?

ಊಟದ ನಂತರ ಅಪ್ಪಿ ತಪ್ಪಿಯೂ ಈ ಕೆಲವು ಕೆಲಸಗಳನ್ನು ಮಾಡಬಾರದು ಎಂದು ಆಯುರ್ವೇದ ತಿಳಿಸುತ್ತದೆ. ಈ ಕುರಿತಂತೆ ತಜ್ಞರು ಹಂಚಿಕೊಂಡ ಮಾಹಿತಿ ಈ ಕೆಳಗಿನಂತಿದೆ.

Health Tips: ಆಯುರ್ವೇದದ ಪ್ರಕಾರ ಊಟದ ನಂತರ ಈ ಕೆಲವು ಚಟುವಟಿಕೆಗಳನ್ನು ಮಾಡಲೇಬಾರದು! ಯಾಕೆ ಗೊತ್ತಾ?
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 11, 2021 | 12:44 PM

Share

ಆಯುರ್ವೇದದ ಪ್ರಕಾರ ಊಟದ ನಂತರ ಕೆಲವು ಕೆಲಸಗಳನ್ನು ಮಾಡಬಾರದು. ಪುರಾತನ ವೈದ್ಯಕೀಯ ಪದ್ಧತಿಯ ಪ್ರಕಾರ, ಊಟದ ನಂತರ ನೀರು ಕುಡಿಯುವುದು ಅಥವಾ ರಾತ್ರಿಯ ಊಟದ ನಂತರ ಮಲಗುವುದು ಒಳ್ಳೆಯದಲ್ಲ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಹೊರೆಯಾಗಬಹುದು. ಅದೇ ರೀತಿ ಹೊಟ್ಟೆ ತುಂಬ ತಿಂದ ನಂತರ 100 ಹೆಜ್ಜೆ ನಡೆಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದರೆ ದೂರದವರೆಗೆ ನಡೆಯುವುದು ಚಯಾಪಚಯ ಕ್ರಿಯೆಗೆ ಅಡ್ಡಿಯುಂಟು ಮಾಡುತ್ತದೆ. ಪೋಷಕಾಂಶಗಳನ್ನು ಹೀರಿಕೊಳ್ಳಲು ತೊಂದರೆ ಉಂಟು ಮಾಡುತ್ತದೆ. ಆಯುರ್ವೇದ ತಜ್ಞೆ ಡಾ. ದೀಕ್ಷಾ ಅವರು ನೀವು ಊಟದ ನಂತರ ಮಲಗುವುದು, ನೀರು ಕುಡಿಯುವುದು ಮತ್ತು ಸ್ನಾನ ಮಾಡುವುದು ಜೊತೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು ಎಂಬುದರ ಕುರಿತಾಗಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಊಟದ ನಂತರ ಮಲಗುವುದು ಊಟವಾದ ತಕ್ಷಣ ಮಲಗುವುದರಿಂದ ದೇಹದಲ್ಲಿ ಕಫಾ (ನೀರಿನಾಂಶ) ಮತ್ತು ಕೊಬ್ಬು ಹೆಚ್ಚಾಗುತ್ತದೆ ಎಂದು ಡಾ. ದೀಕ್ಷಾ ಹೇಳಿದ್ದಾರೆ. ಇದು ದೇಹದ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಇದರಿಂದಾಗಿ ನಿಮ್ಮ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ ಎಂದು ಅವರು ಸಲಹೆ ನೀಡಿದ್ದಾರೆ.

ಊಟದ ನಂತರ ನೀರು ಕುಡಿಯುವುದು ಆಯುರ್ವೇದದ ಪ್ರಕಾರ ನೀರನ್ನು ಊಟದ ನಡುವೆ ಸೇವಿಸಬೇಕು. ಆಹಾರ ಸೇವಿಸುವ ಮೊದಲು ಅಥವಾ ನಂತರ ಅಲ್ಲ. ಆಹಾರದ ಮೊದಲು ನೀರು ಕುಡಿಯುವುದು ಜೀರ್ಣಕ್ರಿಯೆಯನ್ನು ಕಡಿಮೆ ಮಾಡುತ್ತದೆ. ಆಹಾರದ ನಂತರ ತಕ್ಷಣ ನೀರು ಕುಡಿಯುವುದು ಸ್ಥೂಲಕಾಯರನ್ನಾಗಿ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಊಟದ ನಂತರ ಸೂರ್ಯನ ಬಿಸಿಲಿಗೆ ಒಡ್ಡುಕೊಳ್ಳುವುದು ಊಟದ ನಂತರ ತಕ್ಷಣವೇ ಸೂರ್ಯನ ಬಿಸಿಲಿಗೆ ಒಡ್ಡಿಕೊಳ್ಳುವುದರಿಂದ ಹೆಚ್ಚಿನ ರಕ್ತ ಪರಿಚಲನೆ ಮತ್ತು ನರಗಳ ಪ್ರಚೋದನೆಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಇದು ಚಯಾಪಚಯಕ್ಕೆ ಅಡ್ಡಿಪಡಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಊಟದ ನಂತರ ಈಜು, ದೂರದ ನಡಿಗೆ, ಹಾಡುವುದು, ಪ್ರಯಾಣ ಮತ್ತು ವ್ಯಾಯಾಮ ಊಟದ ಬಳಿಕ ಈ ಕೆಲವು ಚಟುವಟಿಕೆಗಳು ವಾತವನ್ನು ಉಲ್ಭಣಗೊಳಿಸುತ್ತವೆ. ಊಟದ ಬಳಿಕ ಅಸ್ವಸ್ಥತೆಗೆ ಕಾರಣವಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯನ್ನುಂಟು ಮಾಡುತ್ತದೆ.

ಊಟದ ನಂತರ ಸ್ನಾನ ಮಾಡುವುದು ಆಯುರ್ವೇದದ ಪ್ರಕಾರ, ಊಟದ ನಂತರ ಎರಡು ಗಂಟೆಗಳ ನಂತರವೇ ಸ್ನಾನ ಮಾಡಬೇಕು. ದೇಹದಲ್ಲಿರುವ ಬಿಸಿಯು ಆಹಾರದ ಜೀರ್ಣಕ್ರಿಯೆಗೆ ಸಹಾಯಕವಾಗಿರುತ್ತದೆ. ಆದರೆ ನೀವು ಸ್ನಾನ ಮಾಡುವಾಗ ದೇಹದ ಉಷ್ಣತೆ ಕಡಿಮೆಯಾಗುತ್ತದೆ. ಇದು ನಿಧಾನ ಜೀರ್ಣಕ್ರಿಯೆಗೆ ಕಾರಣವಾಗುತ್ತದೆ ಎಂದು ಡಾ. ದೀಕ್ಷಾ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Health Tips: ಪಾರ್ಶ್ವವಾಯುವಿನ ಲಕ್ಷಣ, ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು?

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು