AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರನ್ನು ಕೇಳದೆ ಈ 4 ಸಪ್ಲಿಮೆಂಟ್ ಎಂದಿಗೂ ಸೇವಿಸಬೇಡಿ!

ದೇಹದ ದೈನಂದಿನ ಅಗತ್ಯಗಳನ್ನು ಪೂರೈಸಲು ಜನರು ವಿಟಮಿನ್ ಮತ್ತು ಖನಿಜಯುಕ್ತ ಸಪ್ಲಿಮೆಂಟ್​ಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ಇದು ನಿಜಕ್ಕೂ ಆರೋಗ್ಯಕರವೇ? ಸಪ್ಲಿಮೆಂಟ್​ಗಳ ಅಡ್ಡಪರಿಣಾಮಗಳೇನು? ಎಂಬುದರ ಬಗ್ಗೆ ವೈದ್ಯರು ನೀಡಿರುವ ಮಾಹಿತಿ ಇಲ್ಲಿದೆ.

ವೈದ್ಯರನ್ನು ಕೇಳದೆ ಈ 4 ಸಪ್ಲಿಮೆಂಟ್ ಎಂದಿಗೂ ಸೇವಿಸಬೇಡಿ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jan 16, 2024 | 4:32 PM

Share

ಇತ್ತೀಚಿನ ದಿನಗಳಲ್ಲಿ ವಿಟಮಿನ್, ಕ್ಯಾಲ್ಸಿಯಂ, ಐರನ್ ಮುಂತಾದ ಸಪ್ಲಿಮೆಂಟ್​ಗಳನ್ನು ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮ ಆಹಾರದಲ್ಲಿ ನಮಗೆ ಈ ಸಪ್ಲಿಮೆಂಟ್​ಗಳು ಹೆಚ್ಚು ಸಿಗದಿದ್ದಾಗ ಮಾತ್ರೆ, ಸಿರಪ್​ಗಳ ರೂಪದಲ್ಲಿ ಅದನ್ನು ಸೇವಿಸಬೇಕಾಗುತ್ತದೆ. ಜಂಕ್​ಫುಡ್, ಅನಾರೋಗ್ಯಕರ ಆಹಾರ, ಒತ್ತಡದ ಜೀವನಶೈಲಿಯಿಂದ ದೇಹಕ್ಕೆ ಸಪ್ಲಿಮೆಂಟ್​ಗಳ ಕೊರತೆ ಹೆಚ್ಚುತ್ತಿದೆ. ಹೀಗಾಗಿ, ದೇಹದ ದೈನಂದಿನ ಅಗತ್ಯಗಳನ್ನು ಪೂರೈಸಲು ಜನರು ವಿಟಮಿನ್ ಮತ್ತು ಖನಿಜಯುಕ್ತ ಸಪ್ಲಿಮೆಂಟ್​ಗಳ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ಸಪ್ಲಿಮೆಂಟ್​ಗಳು ನಿಮ್ಮ ದೇಹಕ್ಕೆ ಆರೋಗ್ಯಕರವಾಗಿರುತ್ತವೆ. ಅವುಗಳಿಂದ ನಿಮಗೆ ಹಲವಾರು ರೀತಿಯಲ್ಲಿ ಪ್ರಯೋಜನ ಸಿಗುತ್ತದೆ.

ಆದರೆ, ವೈದ್ಯರಾದ ಡಾ. ಚಾರ್ಲ್ಸ್ ಟಿಕ್​ಟಾಕ್​ನಲ್ಲಿ ಕೆಲವು ಎಚ್ಚರಿಕೆಗಳನ್ನು ನೀಡಿದ್ದು, ನಮ್ಮ ಆರೋಗ್ಯಕ್ಕೆ ತೊಂದರೆ ಉಂಟುಮಾಡುವ 4 ಸಪ್ಲಿಮೆಂಟ್​ಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವುಗಳೆಂದರೆ. ವಿಟಮಿನ್ ಎ, ವಿಟಮಿನ್ ಇ, ಕಬ್ಬಿಣಾಂಶ, ಬಯೋಟಿನ್.

ಇದನ್ನೂ ಓದಿ: ಕೂದಲು ಡ್ಯಾಮೇಜ್ ಆಗದಂತೆ ತಡೆಯುವ 7 ವಿಟಮಿನ್​ಗಳಿವು

ವಿಟಮಿನ್ ಎ:

ವಿಟಮಿನ್ ಎ ದೇಹಕ್ಕೆ ಅಗತ್ಯವಾದ ವಿಟಮಿನ್ ಆಗಿದೆ. ಇದು ನಿಮ್ಮ ದೃಷ್ಟಿಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ ಮತ್ತು ಹೃದಯ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಆದರೂ ವಿಟಮಿನ್ ಎ ಸಪ್ಲಿಮೆಂಟ್​ ಅನ್ನು ನಿರಂತರವಾಗಿ ಸೇವಿಸುವುದರಿಂದ ಲಿವರ್​ಗೆ ಡ್ಯಾಮೇಜ್ ಮಾಡುವ ಸಾಧ್ಯತೆ ಇರುತ್ತದೆ. ವಿಟಮಿನ್ ಎಯ ಅತಿಯಾದ ಸೇವನೆಯು ವಾಂತಿ, ತಲೆ ತಿರುಗುವಿಕೆ, ದೃಷ್ಟಿ ಮಂದವಾಗುವುದು, ಮೂಳೆ ಡ್ಯಾಮೇಜ್ ಮುಂತಾದ ಸಮಸ್ಯೆಗಳಿಗೆ ಕಾರಣವಾಗಬಹುದು.

ವಿಟಮಿನ್ ಇ:

ವಿಟಮಿನ್ ಇ ಮತ್ತು ಕ್ಯಾನ್ಸರ್ ನಡುವೆ ಸಂಬಂಧವಿದೆ ಎಂದು ಹಲವಾರು ಅಧ್ಯಯನಗಳು ಹೇಳಿವೆ. ಈ ವಿಟಮಿನ್ ಸೇವನೆ ಅಧಿಕವಾದರೆ ಪುರುಷರಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಕೆಲವು ಅಧ್ಯಯನಗಳು ಎತ್ತಿ ತೋರಿಸಿವೆ.

ಕಬ್ಬಿಣಾಂಶ:

ಐರನ್ ಅತ್ಯಂತ ಪ್ರಮುಖ ಖನಿಜವಾಗಿದೆ. ಇದರ ಕೊರತೆಯು ರಕ್ತಹೀನತೆ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗಬಹುದು. ಆದರೆ, ವೈದ್ಯರು ಐರನ್ ಸಪ್ಲಿಮೆಂಟ್ ಸೇವಿಸಲು ಹೇಳದೇ ಇದ್ದರೂ ನೀವು ಸೇವಿಸಿದರೆ ಅದು ನಿಮ್ಮ ಹೃದಯವನ್ನು ಹಾನಿಗೊಳಿಸಬಹುದು. ಕಬ್ಬಿಣದ ಸಪ್ಲಿಮೆಂಟ್​ಗಳ ದೀರ್ಘಾವಧಿಯ ಬಳಕೆಯು ಹೃದಯ ವೈಫಲ್ಯದ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ಹೇಳಿದೆ.

ಇದನ್ನೂ ಓದಿ: ನಿಮ್ಮ ದೇಹದಲ್ಲಿ ವಿಟಮಿನ್ ಡಿ ಕೊರತೆಯಾಗಿದೆ ಎಂಬುದರ ಲಕ್ಷಣಗಳಿವು

ಬಯೋಟಿನ್:

ಬಯೋಟಿನ್ ಕೂದಲು ಮತ್ತು ಉಗುರುಗಳಿಗೆ ಪ್ರಯೋಜನಕಾರಿ. ಆದರೆ, ಈ ಸಪ್ಲಿಮೆಂಟ್ ಬಳಕೆಯು ತಪ್ಪಾದ ಲ್ಯಾಬ್ ಪರೀಕ್ಷಾ ಫಲಿತಾಂಶಗಳಿಗೆ ಕಾರಣವಾಗುತ್ತದೆ. ಇದು ಅಪಾಯಕಾರಿಯಾಗಿದೆ. ಅಂದರೆ, ನೀವು ಯಾವುದಾದರೂ ಸಮಸ್ಯೆಗೆ ಲ್ಯಾಬ್ ಟೆಸ್ಟ್ ಮಾಡಿಸಲು ಹೋದಾಗ ಅದರ ರಿಸಲ್ಟ್​ ನಿಮ್ಮ ಬಯೋಟಿನ್ ಸಪ್ಲಿಮೆಂಟ್ ಸೇವನೆಯ ಪರಿಣಾಮದಿಂದ ಬದಲಾಗುವ ಸಾಧ್ಯತೆ ಇರುತ್ತದೆ.

ಆದ್ದರಿಂದ, ಯಾವುದೇ ಸಪ್ಲಿಮೆಂಟ್​ಗಳನ್ನು ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಬಹಳ ಮುಖ್ಯ. ಏಕೆಂದರೆ ತಪ್ಪಾದ ಸಪ್ಲಿಮೆಂಟ್ ನಿಮ್ಮ ದೇಹದ ಮೇಲೆ ನೆಗೆಟಿವ್ ಪರಿಣಾಮ ಬೀರುತ್ತದೆ. ಯಾವುದೇ ಸಪ್ಲಿಮೆಂಟ್​ಗಳನ್ನು ಪ್ರಾರಂಭಿಸುವ ಮೊದಲು ನಿಮ್ಮ ವೈದ್ಯರೊಂದಿಗೆ ಮಾತನಾಡುವುದರಿಂದ ಆರೋಗ್ಯದ ಅಪಾಯಗಳನ್ನು ತಡೆಯಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!