AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ

ಈ ರೋಗಲಕ್ಷಣಗಳು ನಿಮ್ಮ ಮೂತ್ರಪಿಂಡ ಕಾಯಿಲೆಯ ರೋಗಲಕ್ಷಣ ಸೂಚಕವಾಗಿರಬಹುದು

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 09, 2022 | 7:00 AM

Share

ಮೂತ್ರಪಿಂಡಗಳು ದೇಹಕ್ಕೆ ಹೃದಯ ಮತ್ತು ಮಿದುಳಿನಷ್ಟೇ ಮುಖ್ಯ. ನಮ್ಮ ಹೃದಯ ಮತ್ತು ದೇಹವನ್ನು ಆರೋಗ್ಯವಾಗಿಡಲು ಯೋಗ, ಧ್ಯಾನ ಮಾಡುವಂತೆ. ಹಾಗೇ ಉತ್ತಮ ಆಹಾರ ಮತ್ತು ದಿನಚರಿಯನ್ನು ಅನುಸರಿಸುತ್ತೇವೆ. ಅಂತೆಯೇ, ಮೂತ್ರಪಿಂಡಗಳ ಕಡೆಗೂ ವಿಶೇಷ ಗಮನ ಹರಿಸಬೇಕು. ಕಿಡ್ನಿಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಡ್ನಿ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದರೆ, ನಮ್ಮ ದೇಹವು ಕೆಲವು ರೋಗಲಕ್ಷಣಗಳನ್ನು ತೋರಿಸುತ್ತದೆ. ಆದಾಗ್ಯೂ, ಅನೇಕ ಜನರು ಅದನ್ನು ನಿರ್ಲಕ್ಷಿಸಿ ಸಾವಿಗೀಡಾಗುತ್ತಾರೆ.

ಒಮ್ಮೆ ಮೂತ್ರಪಿಂಡಗಳು ಹಾನಿಗೊಳಗಾದರೆ, ಚೇತರಿಕೆ ತುಂಬಾ ಕಷ್ಟ. ಹಾಗಾಗಿ ಆ ಲಕ್ಷಣಗಳು ಕಂಡು ಬಂದ ತಕ್ಷಣ ಎಚ್ಚೆತ್ತುಕೊಳ್ಳುವಂತೆ ವೈದ್ಯರು ಸೂಚಿಸುತ್ತಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದರೆ ಸಮಸ್ಯೆ ಕಡಿಮೆಯಾಗುತ್ತದೆ ಇಲ್ಲವೇ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಕಿಡ್ನಿ ಆರೋಗ್ಯ ಹದಗೆಟ್ಟಾಗ ಕಾಣಿಸಿಕೊಳ್ಳುವ ರೋಗಲಕ್ಷಣಗಳು ಇಲ್ಲಿವೆ

1. ತುಂಬಾ ಸುಸ್ತಾಗುವುದು: ದೇಹದಲ್ಲಿ ಆಗುವ ಸಣ್ಣ ಪುಟ್ಟ ಬದಲಾವಣೆಗಳನ್ನು ನಿರ್ಲಕ್ಷಿಸುವುದು ಭೀಕರ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಣ್ಣ ಪ್ರಮಾಣದ ವ್ಯಾಯಾಮ ಕೂಡ ದೇಹವನ್ನು ತ್ವರಿತವಾಗಿ ದಣಿಸಬಹುದು. ಇದು ದೇಹದಲ್ಲಿನ ಟಾಕ್ಸಿನ್‌ಗಳು ಹೆಚ್ಚಾಗುವುದರಿಂದ ಆಗುತ್ತದೆ. ಈ ವಸ್ತುಗಳು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದರೊಂದಿಗೆ ರಕ್ತದಲ್ಲಿನ ಕಲ್ಮಶಗಳ ಪ್ರಮಾಣವೂ ಹೆಚ್ಚಾಗತೊಡಗುತ್ತದೆ. ಇದರಿಂದ ಮೂತ್ರಪಿಂಡಗಳು ಹಾನಿಗೊಳಗಾಗುತ್ತವೆ.

2. ನಿದ್ರಾಹೀನತೆ, ಚರ್ಮದ ಸಮಸ್ಯೆಗಳು: ನಿದ್ರಾಹೀನತೆ ಮತ್ತು ಚರ್ಮದ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಬೇಕು. ಈ ಸಮಸ್ಯೆಗಳು ಮೂತ್ರಪಿಂಡದ ಕಾಯಿಲೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಚರ್ಮವು ಒಣಗಿದ್ದರೆ, ಚಪ್ಪಟೆಯಾಗಿ, ತುರಿಕೆ ಸಮಸ್ಯೆಯಾಗಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

3. ಕಾಲುಗಳ ಊತ: ಕಾಲುಗಳ ಊತವು ಕಿಡ್ನಿ ಸಂಬಂಧಿ ಕಾಯಿಲೆಗಳನ್ನೂ ಸೂಚಿಸುತ್ತದೆ. ಕಾಲುಗಳು ಅತಿಯಾಗಿ ಊದಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ. ಇಲ್ಲವಾದರೆ ಸಮಯ ಕಳೆದಂತೆ ಸಮಸ್ಯೆ ಉಲ್ಬಣಿಸುವ ಅಪಾಯವಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು