AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ

ಈ ರೋಗಲಕ್ಷಣಗಳು ನಿಮ್ಮ ಮೂತ್ರಪಿಂಡ ಕಾಯಿಲೆಯ ರೋಗಲಕ್ಷಣ ಸೂಚಕವಾಗಿರಬಹುದು

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 09, 2022 | 7:00 AM

Share

ಮೂತ್ರಪಿಂಡಗಳು ದೇಹಕ್ಕೆ ಹೃದಯ ಮತ್ತು ಮಿದುಳಿನಷ್ಟೇ ಮುಖ್ಯ. ನಮ್ಮ ಹೃದಯ ಮತ್ತು ದೇಹವನ್ನು ಆರೋಗ್ಯವಾಗಿಡಲು ಯೋಗ, ಧ್ಯಾನ ಮಾಡುವಂತೆ. ಹಾಗೇ ಉತ್ತಮ ಆಹಾರ ಮತ್ತು ದಿನಚರಿಯನ್ನು ಅನುಸರಿಸುತ್ತೇವೆ. ಅಂತೆಯೇ, ಮೂತ್ರಪಿಂಡಗಳ ಕಡೆಗೂ ವಿಶೇಷ ಗಮನ ಹರಿಸಬೇಕು. ಕಿಡ್ನಿಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಡ್ನಿ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದರೆ, ನಮ್ಮ ದೇಹವು ಕೆಲವು ರೋಗಲಕ್ಷಣಗಳನ್ನು ತೋರಿಸುತ್ತದೆ. ಆದಾಗ್ಯೂ, ಅನೇಕ ಜನರು ಅದನ್ನು ನಿರ್ಲಕ್ಷಿಸಿ ಸಾವಿಗೀಡಾಗುತ್ತಾರೆ.

ಒಮ್ಮೆ ಮೂತ್ರಪಿಂಡಗಳು ಹಾನಿಗೊಳಗಾದರೆ, ಚೇತರಿಕೆ ತುಂಬಾ ಕಷ್ಟ. ಹಾಗಾಗಿ ಆ ಲಕ್ಷಣಗಳು ಕಂಡು ಬಂದ ತಕ್ಷಣ ಎಚ್ಚೆತ್ತುಕೊಳ್ಳುವಂತೆ ವೈದ್ಯರು ಸೂಚಿಸುತ್ತಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದರೆ ಸಮಸ್ಯೆ ಕಡಿಮೆಯಾಗುತ್ತದೆ ಇಲ್ಲವೇ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಕಿಡ್ನಿ ಆರೋಗ್ಯ ಹದಗೆಟ್ಟಾಗ ಕಾಣಿಸಿಕೊಳ್ಳುವ ರೋಗಲಕ್ಷಣಗಳು ಇಲ್ಲಿವೆ

1. ತುಂಬಾ ಸುಸ್ತಾಗುವುದು: ದೇಹದಲ್ಲಿ ಆಗುವ ಸಣ್ಣ ಪುಟ್ಟ ಬದಲಾವಣೆಗಳನ್ನು ನಿರ್ಲಕ್ಷಿಸುವುದು ಭೀಕರ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಣ್ಣ ಪ್ರಮಾಣದ ವ್ಯಾಯಾಮ ಕೂಡ ದೇಹವನ್ನು ತ್ವರಿತವಾಗಿ ದಣಿಸಬಹುದು. ಇದು ದೇಹದಲ್ಲಿನ ಟಾಕ್ಸಿನ್‌ಗಳು ಹೆಚ್ಚಾಗುವುದರಿಂದ ಆಗುತ್ತದೆ. ಈ ವಸ್ತುಗಳು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದರೊಂದಿಗೆ ರಕ್ತದಲ್ಲಿನ ಕಲ್ಮಶಗಳ ಪ್ರಮಾಣವೂ ಹೆಚ್ಚಾಗತೊಡಗುತ್ತದೆ. ಇದರಿಂದ ಮೂತ್ರಪಿಂಡಗಳು ಹಾನಿಗೊಳಗಾಗುತ್ತವೆ.

2. ನಿದ್ರಾಹೀನತೆ, ಚರ್ಮದ ಸಮಸ್ಯೆಗಳು: ನಿದ್ರಾಹೀನತೆ ಮತ್ತು ಚರ್ಮದ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಬೇಕು. ಈ ಸಮಸ್ಯೆಗಳು ಮೂತ್ರಪಿಂಡದ ಕಾಯಿಲೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಚರ್ಮವು ಒಣಗಿದ್ದರೆ, ಚಪ್ಪಟೆಯಾಗಿ, ತುರಿಕೆ ಸಮಸ್ಯೆಯಾಗಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

3. ಕಾಲುಗಳ ಊತ: ಕಾಲುಗಳ ಊತವು ಕಿಡ್ನಿ ಸಂಬಂಧಿ ಕಾಯಿಲೆಗಳನ್ನೂ ಸೂಚಿಸುತ್ತದೆ. ಕಾಲುಗಳು ಅತಿಯಾಗಿ ಊದಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ. ಇಲ್ಲವಾದರೆ ಸಮಯ ಕಳೆದಂತೆ ಸಮಸ್ಯೆ ಉಲ್ಬಣಿಸುವ ಅಪಾಯವಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು