AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ

ಈ ರೋಗಲಕ್ಷಣಗಳು ನಿಮ್ಮ ಮೂತ್ರಪಿಂಡ ಕಾಯಿಲೆಯ ರೋಗಲಕ್ಷಣ ಸೂಚಕವಾಗಿರಬಹುದು

ನಿಮ್ಮ ಕಿಡ್ನಿ ಹಾನಿಯಾಗುತ್ತಿದೆ ಎನ್ನುವುದಕ್ಕೆ ಈ ರೋಗ ಲ್ಷಣಗಳ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Sep 09, 2022 | 7:00 AM

Share

ಮೂತ್ರಪಿಂಡಗಳು ದೇಹಕ್ಕೆ ಹೃದಯ ಮತ್ತು ಮಿದುಳಿನಷ್ಟೇ ಮುಖ್ಯ. ನಮ್ಮ ಹೃದಯ ಮತ್ತು ದೇಹವನ್ನು ಆರೋಗ್ಯವಾಗಿಡಲು ಯೋಗ, ಧ್ಯಾನ ಮಾಡುವಂತೆ. ಹಾಗೇ ಉತ್ತಮ ಆಹಾರ ಮತ್ತು ದಿನಚರಿಯನ್ನು ಅನುಸರಿಸುತ್ತೇವೆ. ಅಂತೆಯೇ, ಮೂತ್ರಪಿಂಡಗಳ ಕಡೆಗೂ ವಿಶೇಷ ಗಮನ ಹರಿಸಬೇಕು. ಕಿಡ್ನಿಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಡ್ನಿ ಸಂಬಂಧಿತ ಸಮಸ್ಯೆಗಳು ಉದ್ಭವಿಸಿದರೆ, ನಮ್ಮ ದೇಹವು ಕೆಲವು ರೋಗಲಕ್ಷಣಗಳನ್ನು ತೋರಿಸುತ್ತದೆ. ಆದಾಗ್ಯೂ, ಅನೇಕ ಜನರು ಅದನ್ನು ನಿರ್ಲಕ್ಷಿಸಿ ಸಾವಿಗೀಡಾಗುತ್ತಾರೆ.

ಒಮ್ಮೆ ಮೂತ್ರಪಿಂಡಗಳು ಹಾನಿಗೊಳಗಾದರೆ, ಚೇತರಿಕೆ ತುಂಬಾ ಕಷ್ಟ. ಹಾಗಾಗಿ ಆ ಲಕ್ಷಣಗಳು ಕಂಡು ಬಂದ ತಕ್ಷಣ ಎಚ್ಚೆತ್ತುಕೊಳ್ಳುವಂತೆ ವೈದ್ಯರು ಸೂಚಿಸುತ್ತಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿದರೆ ಸಮಸ್ಯೆ ಕಡಿಮೆಯಾಗುತ್ತದೆ ಇಲ್ಲವೇ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಕಿಡ್ನಿ ಆರೋಗ್ಯ ಹದಗೆಟ್ಟಾಗ ಕಾಣಿಸಿಕೊಳ್ಳುವ ರೋಗಲಕ್ಷಣಗಳು ಇಲ್ಲಿವೆ

1. ತುಂಬಾ ಸುಸ್ತಾಗುವುದು: ದೇಹದಲ್ಲಿ ಆಗುವ ಸಣ್ಣ ಪುಟ್ಟ ಬದಲಾವಣೆಗಳನ್ನು ನಿರ್ಲಕ್ಷಿಸುವುದು ಭೀಕರ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಣ್ಣ ಪ್ರಮಾಣದ ವ್ಯಾಯಾಮ ಕೂಡ ದೇಹವನ್ನು ತ್ವರಿತವಾಗಿ ದಣಿಸಬಹುದು. ಇದು ದೇಹದಲ್ಲಿನ ಟಾಕ್ಸಿನ್‌ಗಳು ಹೆಚ್ಚಾಗುವುದರಿಂದ ಆಗುತ್ತದೆ. ಈ ವಸ್ತುಗಳು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದರೊಂದಿಗೆ ರಕ್ತದಲ್ಲಿನ ಕಲ್ಮಶಗಳ ಪ್ರಮಾಣವೂ ಹೆಚ್ಚಾಗತೊಡಗುತ್ತದೆ. ಇದರಿಂದ ಮೂತ್ರಪಿಂಡಗಳು ಹಾನಿಗೊಳಗಾಗುತ್ತವೆ.

2. ನಿದ್ರಾಹೀನತೆ, ಚರ್ಮದ ಸಮಸ್ಯೆಗಳು: ನಿದ್ರಾಹೀನತೆ ಮತ್ತು ಚರ್ಮದ ಸಮಸ್ಯೆಗಳ ಬಗ್ಗೆ ಎಚ್ಚರವಹಿಸಬೇಕು. ಈ ಸಮಸ್ಯೆಗಳು ಮೂತ್ರಪಿಂಡದ ಕಾಯಿಲೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಚರ್ಮವು ಒಣಗಿದ್ದರೆ, ಚಪ್ಪಟೆಯಾಗಿ, ತುರಿಕೆ ಸಮಸ್ಯೆಯಾಗಿದ್ದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.

3. ಕಾಲುಗಳ ಊತ: ಕಾಲುಗಳ ಊತವು ಕಿಡ್ನಿ ಸಂಬಂಧಿ ಕಾಯಿಲೆಗಳನ್ನೂ ಸೂಚಿಸುತ್ತದೆ. ಕಾಲುಗಳು ಅತಿಯಾಗಿ ಊದಿಕೊಂಡರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ. ಇಲ್ಲವಾದರೆ ಸಮಯ ಕಳೆದಂತೆ ಸಮಸ್ಯೆ ಉಲ್ಬಣಿಸುವ ಅಪಾಯವಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ