AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ? ಇಲ್ಲಿದೆ ವಿವರ

ನಮ್ಮಲ್ಲಿ ಸಾಕಷ್ಟು ಜನರಿಗೆ ಬಿಸಿನೀರಿಗೆ ತಣ್ಣೀರು ಅಥವಾ ತಣ್ಣೀರಿಗೆ ಬಿಸಿ ನೀರು ಸೇರಿಸಿ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸ ನಿಮ್ಮ ಆರೋಗ್ಯದ ಮೇಲೆ ವಿಶೇಷವಾಗಿ ಜೀರ್ಣಕ್ರಿಯೆಯ ಮೇಲೆ ಕೆಟ್ಟ ಪರಿಣಾಮವನ್ನುಂಟು ಮಾಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

Health Tips: ಬಿಸಿ ನೀರಿಗೆ ತಣ್ಣೀರು ಮಿಕ್ಸ್ ಮಾಡಿ ಏಕೆ ಕುಡಿಯಬಾರದು ಗೊತ್ತಾ? ಇಲ್ಲಿದೆ ವಿವರ
ಬಿಸಿ ಮತ್ತು ತಣ್ಣೀರಿನ ಮಿಶ್ರಣ
Follow us
ಅಕ್ಷತಾ ವರ್ಕಾಡಿ
|

Updated on: Jun 29, 2024 | 8:58 AM

ತಣ್ಣೀರಿಗೆ ಬಿಸಿ ನೀರು ಅಥವಾ ಬಿಸಿ ನೀರಿಗೆ ತಣ್ಣೀರು ಮಿಕ್ಸ್​ ಮಾಡಿ ಕುಡಿಯುವ ಅಭ್ಯಾಸವನ್ನು ಸಾಕಷ್ಟು ಜನರು ಹೊಂದಿರುತ್ತಾರೆ. ಆದರೆ ಈ ರೀತಿಯ ಅಭ್ಯಾಸ ಒಳ್ಳೆದಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಬಿಸಿನೀರಿನಲ್ಲಿ ಬ್ಯಾಕ್ಟೀರಿಯಾ ಇರುವುದಿಲ್ಲ. ಆದರೆ ಬಿಸಿ ನೀರಿಗೆ ತಣ್ಣೀರು ಸೇರಿಸಿದರೆ ಅದು ಕಲುಷಿತವಾಗುತ್ತದೆ. ಆದ್ದರಿಂದ ಎರಡನ್ನೂ ಸಂಯೋಜಿಸುವುದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಬಿಸಿನೀರು ವಾತ ಮತ್ತು ಕಫವನ್ನು ಶಾಂತಗೊಳಿಸುತ್ತದೆ. ಆದರೆ ತಣ್ಣೀರು ಎರಡನ್ನೂ ಮಿಶ್ರಣ ಮಾಡುವುದರಿಂದ ಕಫ ದೋಷ ಹೆಚ್ಚಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಬಿಸಿ ಮತ್ತು ತಣ್ಣೀರಿನ ಮಿಶ್ರಣವು ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸುತ್ತದೆ. ಇದು ಉಬ್ಬುವಿಕೆಗೆ ಕಾರಣವಾಗುವುದಲ್ಲದೇ ಪೋಷಕಾಂಶಗಳ ಹೀರಿಕೊಳ್ಳುವಿಕೆಗೆ ಅಡ್ಡಿಪಡಿಸುತ್ತದೆ. ಆದ್ದರಿಂದ ತಣ್ಣೀರು ಮತ್ತು ಬಿಸಿನೀರು ಮಿಶ್ರಣ ಮಾಡುವುದು ಸರಿಯಲ್ಲ.

ಇದನ್ನೂ ಓದಿ: Cancer fatigue treatment: ಕ್ಯಾನ್ಸರ್​ನಿಂದ ಆಯಾಸವೋ ಆಯಾಸ, ಇದನ್ನು ಹೇಗೆ ನಿಭಾಯಿಸುವುದು? ಇಲ್ಲಿದೆ ತಜ್ಞರ ಸಲಹೆ

ಹಾಗಾದರೆ ಯಾವ ನೀರು ಕುಡಿಯಬೇಕು?

ಮಣ್ಣಿನ ಪಾತ್ರೆಯಲ್ಲಿನ ನೀರು ಆರೋಗ್ಯಕ್ಕೆ ಅಮೃತವಿದ್ದಂತೆ. ಇದು ನೈಸರ್ಗಿಕವಾಗಿ ನೀರನ್ನು ತಂಪಾಗಿ ಮತ್ತು ಸ್ವಚ್ಛವಾಗಿರಿಸುತ್ತದೆ. ಇದು ನೀರಿನಲ್ಲಿರುವ ಖನಿಜಗಳನ್ನು ಸಹ ಸಂರಕ್ಷಿಸುತ್ತದೆ. ಮಣ್ಣಿನ ಮಡಿಕೆಗಳು ಸ್ಥಿರವಾದ, ಮಧ್ಯಮ ತಾಪಮಾನವನ್ನು ನಿರ್ವಹಿಸುತ್ತವೆ. ಆಯುರ್ವೇದದ ಪ್ರಕಾರ ಮಣ್ಣಿನ ಪಾತ್ರೆಯಲ್ಲಿನ ನೀರು ದೇಹಕ್ಕೆ ಒಳ್ಳೆಯದು. ಮಣ್ಣಿನ ಪಾತ್ರೆಯಲ್ಲಿ ಇಟ್ಟಿರುವ ನೀರಿನಲ್ಲಿ ಆಮ್ಲಜನಕವೂ ಬಂದು ಬೀಳುತ್ತದೆ. ಇದು ನೀರನ್ನು ತುಂಬಾ ತಂಪಾಗಿರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ, ವಿಶೇಷವಾಗಿ ಬಿಸಿ ವಾತಾವರಣದಲ್ಲಿ, ಈ ನೀರು ನಿಮ್ಮ ಜೀರ್ಣಕ್ರಿಯೆಗೆ ಅಡ್ಡಿಯಾಗದಂತೆ ಅಥವಾ ಕಫ ದೋಷವನ್ನು ಉಲ್ಬಣಗೊಳಿಸದೆ ನಿಮ್ಮ ದೇಹವನ್ನು ತಂಪಾಗಿರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ