AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಮಧುಮೇಹಿಗಳು ಹಾಲು ಕುಡಿಯಬಹುದೇ? ತಜ್ಞರು ಹೇಳುವುದೇನು?

ಮಧುಮೇಹಿಗಳಿ ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕಾದುದು ಅಗತ್ಯ. ಮಧುಮೇಹಿಗಳು ಹಾಲು ಕುಡಿಯಬಹುದೇ ಎನ್ನುವ ಅನುಮಾನ ಸಾಕಷ್ಟು ಜನರಲ್ಲಿದೆ. ಕುಡಿಯುವುದಾದರೂ ಯಾವ ಹಾಲು ಕುಡಿಯಬೇಕು ಎಂಬುದಕ್ಕೆ ಆರೋಗ್ಯ ತಜ್ಞರು ನೀಡಿರುವ ಉತ್ತರ ಇಲ್ಲಿದೆ.

Health News: ಮಧುಮೇಹಿಗಳು ಹಾಲು ಕುಡಿಯಬಹುದೇ? ತಜ್ಞರು ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Aug 10, 2024 | 6:57 PM

Share

ಮಧುಮೇಹಿಗಳಿ ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆಹಾರ ಸೇವನೆಯಲ್ಲಿ ಸ್ವಲ್ಪ ಕಡಿಮೆಯಾದರೂ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಧುಮೇಹಿಗಳು ಕಡಿಮೆ ಕೊಬ್ಬಿನ ಆಹಾರವನ್ನು ಮಾತ್ರ ಸೇವಿಸಬೇಕು. ಕಡಿಮೆ ಕೊಬ್ಬು ಮತ್ತು ಹೆಚ್ಚಿನ ಫೈಬರ್ ಹೊಂದಿರುವ ಸಮತೋಲಿತ ಆಹಾರವನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ವಾಸ್ತವವಾಗಿ ಅನೇಕ ಜನರು ತಮ್ಮ ದೈನಂದಿನ ಆಹಾರದ ಭಾಗವಾಗಿ ಹಾಲು ಕುಡಿಯುತ್ತಾರೆ. ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ವಿಟಮಿನ್ ಡಿ ಹೇರಳವಾಗಿದ್ದು, ಮೂಳೆಗಳನ್ನು ಬಲಗೊಳಿಸುತ್ತದೆ ಎನ್ನುತ್ತಾರೆ ತಜ್ಞರು. ಆದಾಗ್ಯೂ, ಹಾಲಿನಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಕೊಬ್ಬುಗಳಿವೆ ಎಂದು ಹೇಳಲಾಗುತ್ತದೆ.

ಆದರೆ ದನದ ಹಾಲಿಗಿಂತ ಸಿಹಿಗೊಳಿಸದ ತೆಂಗಿನ ಹಾಲು ಮಧುಮೇಹ ಹೊಂದಿರುವವರಿಗೆ ಸೂಕ್ತವಾದ ಆಯ್ಕೆಯಾಗಿದೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಇದಲ್ಲದೇ ಲೋ ಫ್ಯಾಟ್ ಹಾಲನ್ನು ಬಳಕೆ ಮಾಡಬೇಕು. ಹೃದ್ರೋಗಿಯಾಗಿದ್ದರೂ ಸಹ ಲೋ ಫ್ಯಾಟ್ ಅಥವಾ ಸ್ಕಿಮ್ಡ್ ಹಾಲನ್ನು ಬಳಸಬಹುದು. ಮಧುಮೇಹಿಗಳು ಸೋಯಾ ಅಥವಾ ಬಾದಾಮಿ ಹಾಲನ್ನು ಸಹ ಸುಲಭವಾಗಿ ಬಳಸಬಹುದು.

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕ್ಯಾಲ್ಸಿಯಂ ಭರಿತ ಹಾಲನ್ನು ಆಹಾರದಲ್ಲಿ ಸೇರಿಸಬಹುದು. ಅಲ್ಲದೆ ಕಾರ್ಬೋಹೈಡ್ರೇಟ್ ಕಡಿಮೆ ಇರುವ ಹಾಲು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಶುದ್ದ ಹಾಲಿನಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ, ಇದು ಹೃದ್ರೋಗ ಸಮಸ್ಯೆಗಳಿಗೆ ಕಾರಣವಾಗಬಹುದು, ಆದ್ದರಿಂದ ಕಡಿಮೆ ಕೊಬ್ಬಿನ ಅಥವಾ ಕೊಬ್ಬು ರಹಿತ ಹಾಲು ಮಧುಮೇಹ ಪೀಡಿತರಿಗೆ ಉತ್ತಮ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮುಖದ ಬಣ್ಣ ಹಠಾತ್ ಬದಲಾವಣೆ ಹೃದಯಾಘಾತದ ಲಕ್ಷಣವಾಗಿರಬಹುದು!

ಇದಲ್ಲದೆ, ಮಧುಮೇಹಿಗಳಿಗೆ ಪ್ರೋಟೀನ್ ಬಹಳ ಮುಖ್ಯ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರೋಟೀನ್ ಭರಿತ ಹಾಲು ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಆದ್ದರಿಂದ ವೈದ್ಯರು ನಿಮ್ಮ ಊಟ ಅಥವಾ ತಿಂಡಿಯೊಂದಿಗೆ ಹಾಲನ್ನು ಶಿಫಾರಸು ಮಾಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ