AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಮಧುಮೇಹಿಗಳು ಹಾಲು ಕುಡಿಯಬಹುದೇ? ತಜ್ಞರು ಹೇಳುವುದೇನು?

ಮಧುಮೇಹಿಗಳಿ ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕಾದುದು ಅಗತ್ಯ. ಮಧುಮೇಹಿಗಳು ಹಾಲು ಕುಡಿಯಬಹುದೇ ಎನ್ನುವ ಅನುಮಾನ ಸಾಕಷ್ಟು ಜನರಲ್ಲಿದೆ. ಕುಡಿಯುವುದಾದರೂ ಯಾವ ಹಾಲು ಕುಡಿಯಬೇಕು ಎಂಬುದಕ್ಕೆ ಆರೋಗ್ಯ ತಜ್ಞರು ನೀಡಿರುವ ಉತ್ತರ ಇಲ್ಲಿದೆ.

Health News: ಮಧುಮೇಹಿಗಳು ಹಾಲು ಕುಡಿಯಬಹುದೇ? ತಜ್ಞರು ಹೇಳುವುದೇನು?
ಅಕ್ಷತಾ ವರ್ಕಾಡಿ
|

Updated on: Aug 10, 2024 | 6:57 PM

Share

ಮಧುಮೇಹಿಗಳಿ ತಮ್ಮ ಆಹಾರದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆಹಾರ ಸೇವನೆಯಲ್ಲಿ ಸ್ವಲ್ಪ ಕಡಿಮೆಯಾದರೂ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಬಹುದು. ಆದ್ದರಿಂದ ಮಧುಮೇಹಿಗಳು ಕಡಿಮೆ ಕೊಬ್ಬಿನ ಆಹಾರವನ್ನು ಮಾತ್ರ ಸೇವಿಸಬೇಕು. ಕಡಿಮೆ ಕೊಬ್ಬು ಮತ್ತು ಹೆಚ್ಚಿನ ಫೈಬರ್ ಹೊಂದಿರುವ ಸಮತೋಲಿತ ಆಹಾರವನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ವಾಸ್ತವವಾಗಿ ಅನೇಕ ಜನರು ತಮ್ಮ ದೈನಂದಿನ ಆಹಾರದ ಭಾಗವಾಗಿ ಹಾಲು ಕುಡಿಯುತ್ತಾರೆ. ಹಾಲಿನಲ್ಲಿ ಕ್ಯಾಲ್ಸಿಯಂ, ಪ್ರೊಟೀನ್ ಮತ್ತು ವಿಟಮಿನ್ ಡಿ ಹೇರಳವಾಗಿದ್ದು, ಮೂಳೆಗಳನ್ನು ಬಲಗೊಳಿಸುತ್ತದೆ ಎನ್ನುತ್ತಾರೆ ತಜ್ಞರು. ಆದಾಗ್ಯೂ, ಹಾಲಿನಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಕೊಬ್ಬುಗಳಿವೆ ಎಂದು ಹೇಳಲಾಗುತ್ತದೆ.

ಆದರೆ ದನದ ಹಾಲಿಗಿಂತ ಸಿಹಿಗೊಳಿಸದ ತೆಂಗಿನ ಹಾಲು ಮಧುಮೇಹ ಹೊಂದಿರುವವರಿಗೆ ಸೂಕ್ತವಾದ ಆಯ್ಕೆಯಾಗಿದೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಇದಲ್ಲದೇ ಲೋ ಫ್ಯಾಟ್ ಹಾಲನ್ನು ಬಳಕೆ ಮಾಡಬೇಕು. ಹೃದ್ರೋಗಿಯಾಗಿದ್ದರೂ ಸಹ ಲೋ ಫ್ಯಾಟ್ ಅಥವಾ ಸ್ಕಿಮ್ಡ್ ಹಾಲನ್ನು ಬಳಸಬಹುದು. ಮಧುಮೇಹಿಗಳು ಸೋಯಾ ಅಥವಾ ಬಾದಾಮಿ ಹಾಲನ್ನು ಸಹ ಸುಲಭವಾಗಿ ಬಳಸಬಹುದು.

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕ್ಯಾಲ್ಸಿಯಂ ಭರಿತ ಹಾಲನ್ನು ಆಹಾರದಲ್ಲಿ ಸೇರಿಸಬಹುದು. ಅಲ್ಲದೆ ಕಾರ್ಬೋಹೈಡ್ರೇಟ್ ಕಡಿಮೆ ಇರುವ ಹಾಲು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಶುದ್ದ ಹಾಲಿನಲ್ಲಿ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುತ್ತದೆ, ಇದು ಹೃದ್ರೋಗ ಸಮಸ್ಯೆಗಳಿಗೆ ಕಾರಣವಾಗಬಹುದು, ಆದ್ದರಿಂದ ಕಡಿಮೆ ಕೊಬ್ಬಿನ ಅಥವಾ ಕೊಬ್ಬು ರಹಿತ ಹಾಲು ಮಧುಮೇಹ ಪೀಡಿತರಿಗೆ ಉತ್ತಮ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮುಖದ ಬಣ್ಣ ಹಠಾತ್ ಬದಲಾವಣೆ ಹೃದಯಾಘಾತದ ಲಕ್ಷಣವಾಗಿರಬಹುದು!

ಇದಲ್ಲದೆ, ಮಧುಮೇಹಿಗಳಿಗೆ ಪ್ರೋಟೀನ್ ಬಹಳ ಮುಖ್ಯ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಪ್ರೋಟೀನ್ ಭರಿತ ಹಾಲು ಒಂಬತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಆದ್ದರಿಂದ ವೈದ್ಯರು ನಿಮ್ಮ ಊಟ ಅಥವಾ ತಿಂಡಿಯೊಂದಿಗೆ ಹಾಲನ್ನು ಶಿಫಾರಸು ಮಾಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!