AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smelly Feet: ಈ ರೀತಿಯ ವಾಸನೆ ನಿಮ್ಮ ಪಾದಗಳಿಂದ ಬರುತ್ತಿದೆಯೇ?

ಆರೋಗ್ಯ ತಜ್ಞರ ಪ್ರಕಾರ, ಪಾದಗಳಲ್ಲಿ ಅತಿಯಾದ ಬೆವರುವಿಕೆ ಮತ್ತು ಆಗಾಗ್ಗೆ ಪಾದಗಳಿಂದ ಕೆಟ್ಟ ವಾಸನೆ ಬರುತ್ತಿದ್ದರೆ ನಿರ್ಲಕ್ಷ್ಯ ಬೇಡ ಎಂದು ಎಚ್ಚರಿಸುತ್ತಾರೆ. ಮಧುಮೇಹ ಅಥವಾ ಫಂಗಲ್ ಸೋಂಕಿನಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಬೆವರು ಕೆಟ್ಟ ವಾಸನೆಯನ್ನು ಹೊಂದಿರುತ್ತದೆ.

Smelly Feet: ಈ ರೀತಿಯ ವಾಸನೆ ನಿಮ್ಮ ಪಾದಗಳಿಂದ ಬರುತ್ತಿದೆಯೇ?
Feet Smell Like VinegarImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 30, 2024 | 4:09 PM

Share

ಆಹಾರ ಪದ್ಧತಿಯಲ್ಲಿನ ಬದಲಾವಣೆ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದಾಗಿ ಇತ್ತೀಚೆಗೆ ಕಾಯಿಲೆಗಳಿಗೆ ತುತ್ತಾಗುವವರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕವಯಸ್ಸಿನಲ್ಲಿ ದೀರ್ಘಕಾಲದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲವು ರೋಗಲಕ್ಷಣಗಳ ಮೂಲಕ ಮಧುಮೇಹ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ಆರಂಭದಲ್ಲಿ ಕಂಡುಹಿಡಿಯಬಹುದು. ಪಾದದ ವಾಸನೆಯ ಆಧಾರದ ಮೇಲೆ ದೇಹದಲ್ಲಿನ ಕಾಯಿಲೆಗಳನ್ನು ಊಹಿಸಬಹುದು ಎನ್ನುತ್ತಾರೆ ತಜ್ಞರು. ಪಾದಗಳಿಂದ ವಾಸನೆ ಬರುತ್ತಿದ್ದರೆ, ಅದರಲ್ಲೂ ಮಧುಮೇಹ ಅಥವಾ ಕಿಡ್ನಿ ಸಂಬಂಧಿತ ಸಮಸ್ಯೆಗಳಿದ್ದರೆ ತಕ್ಷಣವೇ ವೈದ್ಯರನ್ನು ಭೇಟಿಯಾಗಿ.

ಆರೋಗ್ಯ ತಜ್ಞರ ಪ್ರಕಾರ, ಪಾದಗಳಲ್ಲಿ ಅತಿಯಾದ ಬೆವರುವಿಕೆ ಮತ್ತು ಆಗಾಗ್ಗೆ ಪಾದಗಳಿಂದ ವಿನೆಗರ್ ವಾಸನೆ ಬರುತ್ತಿದ್ದರೆ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಎಚ್ಚರಿಸುತ್ತಾರೆ. ಹಾರ್ಮೋನ್ ಬದಲಾವಣೆಯಿಂದ ಹದಿಹರೆಯದವರಲ್ಲಿ ವಿಪರೀತ ಬೆವರುವುದು ಸಾಮಾನ್ಯವಾಗಿದೆ. ಮಧುಮೇಹ ಅಥವಾ ಫಂಗಲ್ ಸೋಂಕಿನಂತಹ ಸಮಸ್ಯೆಗಳಿಂದ ಬಳಲುತ್ತಿರುವವರ ಬೆವರು ಕೂಡ ವಿನೆಗರ್ ವಾಸನೆಯನ್ನು ಹೊಂದಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಸ್ಥೂಲಕಾಯತೆಯು ಸ್ತನ ಕ್ಯಾನ್ಸರ್​​​ಗೆ ಕಾರಣವಾಗಬಹುದು!

ಮಧುಮೇಹ ಅಥವಾ ಥೈರಾಯ್ಡ್ ಇರುವವರೂ ಕೂಡ ಕಡಿಮೆ ಸಮಯದಲ್ಲಿ ಅತಿಯಾಗಿ ಬೆವರುತ್ತಾರೆ ಎಂದು ಹೇಳಲಾಗುತ್ತದೆ. ಪಾದಗಳ ದುರ್ವಾಸನೆ ಕಡಿಮೆ ಮಾಡಲು ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ ತಜ್ಞರು. ನಿರ್ದಿಷ್ಟವಾಗಿ ಹೇಳುವುದಾದರೆ, ಆಹಾರವು ಸಾಧ್ಯವಾದಷ್ಟು ಹೆಚ್ಚಿನ ವಿಟಮಿನ್ಗಳನ್ನು ಒಳಗೊಂಡಿರುತ್ತದೆ ಎಂದು ಖಚಿತಪಡಿಸಿಕೊಳ್ಳಿ. ಇದಲ್ಲದೇ ಪಾದಗಳ ಶುಚಿತ್ವದ ಬಗ್ಗೆ ಕಾಳಜಿ ವಹಿಸಬೇಕು. ದಿನಕ್ಕೆ ಎರಡು ಬಾರಿಯಾದರೂ ಪಾದಗಳನ್ನು ಶುದ್ಧ ನೀರಿನಿಂದ ತೊಳೆಯಿರಿ.ಗುಣಮಟ್ಟದ ಕಾಟನ್ ಸಾಕ್ಸ್‌ಗಳನ್ನು ಧರಿಸಿ. ದೇಹದ ಬೆವರುವಿಕೆಯನ್ನು ಕಡಿಮೆ ಮಾಡಲು ಮಾರುಕಟ್ಟೆಯಲ್ಲಿ ಲಭ್ಯವಿರುವ ಆಂಟಿಪೆರ್ಸ್ಪಿರಂಟ್‌ಗಳನ್ನು ಸಹ ಬಳಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್