AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ತರಕಾರಿ ಸೇವನೆ ಮಾಡುವುದನ್ನು ಕಡೆಗಣಿಸಬೇಡಿ, ಆರೋಗ್ಯ ಪ್ರಯೋಜನ ತಿಳಿದರೆ ಆಶ್ಚರ್ಯವಾಗುತ್ತೆ

ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಟೊಮೆಟೊದಲ್ಲಿ ಪೊಟ್ಯಾಸಿಯಮ್ ಅಂಶ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯಕ್ಕೂ ಕೂಡ ಉಪಯುಕ್ತವಾಗಿದೆ.

Health Tips:  ಈ ತರಕಾರಿ ಸೇವನೆ ಮಾಡುವುದನ್ನು ಕಡೆಗಣಿಸಬೇಡಿ, ಆರೋಗ್ಯ ಪ್ರಯೋಜನ ತಿಳಿದರೆ ಆಶ್ಚರ್ಯವಾಗುತ್ತೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 15, 2024 | 6:30 PM

Share

ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ ಅದರ ಜೊತೆಗೆ ಇತರ ಅನೇಕ ಆರೋಗ್ಯ ಸಮಸ್ಯೆಗಳು ಕೂಡ ಜನರನ್ನು ಹೈರಾಣವಾಗಿಸಿದೆ. ಹೃದ್ರೋಗಗಳಿಗೆ ಮುಖ್ಯ ಕಾರಣ ಅಧಿಕ ರಕ್ತದೊತ್ತಡ. ವಾಸ್ತವವಾಗಿ ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಉಂಟುಮಾಡುತ್ತದೆ. ಆದರೆ ಪೊಟ್ಯಾಸಿಯಮ್ ಸಮೃದ್ಧವಾಗಿರುವ ಆಹಾರವು ಅದರ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಂತಹ ಅಂಶಗಳು ಟೊಮೆಟೊದಲ್ಲಿ ಹೇರಳವಾಗಿದೆ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದ್ದು ಈ ತರಕಾರಿ ಬಿಪಿ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಸಾಮಾನ್ಯವಾಗಿ ಟೊಮೆಟೊ ಎಲ್ಲರ ಅಡುಗೆ ಮನೆಯಲ್ಲಿಯೂ ಲಭ್ಯವಿರುತ್ತದೆ. ಕೆಲವರು ಇದನ್ನು ತರುವುದಕ್ಕೂ ಇಷ್ಟ ಪಡುವುದಿಲ್ಲ ಆದರೆ ಟೊಮೆಟೊದಲ್ಲಿ ವಿಟಮಿನ್, ಪೋಷಕಾಂಶಗಳು, ಪೊಟ್ಯಾಸಿಯಮ್, ಫೋಲೇಟ್, ವಿಟಮಿನ್ ಸಿ ಮತ್ತು ಕೆ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಟೊಮೆಟೊ ಸೇವನೆ ಒಂದು ವರದಾನವಾಗಿದೆ ಎಂದು ತಜ್ಞರು ಹೇಳುತ್ತಾರೆ. ಇದೆಲ್ಲದರ ಜೊತೆಗೆ ಈ ತರಕಾರಿ ಮಾರಣಾಂತಿಕ ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುವುದಲ್ಲದೆ ಚರ್ಮದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.

ಕ್ಯಾನ್ಸರ್ ತಡೆಗಟ್ಟುತ್ತದೆ:

ಆಹಾರದಲ್ಲಿ ಟೊಮೆಟೊ ಸೇರಿಸುವುದರಿಂದ, ಆಹಾರದ ರುಚಿ ಹೆಚ್ಚುವುದು ಮಾತ್ರವಲ್ಲ. ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಈ ತರಕಾರಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರಲ್ಲಿರುವ ಲೈಕೋಪೀನ್ ಆಂಟಿ-ಕ್ಯಾಪ್ಸಿನೊಜೆನಿಕ್ ಗುಣಲಕ್ಷಣಗಳು ಹೊಟ್ಟೆ ಮತ್ತು ಪಿತ್ತಜನಕಾಂಗದ ಕ್ಯಾನ್ಸರ್ ಅನ್ನು ತಡೆಯುತ್ತದೆ ಎಂದು ಸಂಶೋಧನೆಗಳಿಂದ ಸಾಬೀತಾಗಿದೆ.

ಇದನ್ನೂ ಓದಿ: 21-29 ವರ್ಷದ ಪ್ರತೀ ಮಹಿಳೆ ಈ ಪರೀಕ್ಷೆ ಮಾಡಿಸುವುದು ಅಗತ್ಯ

ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ:

ಟೊಮೆಟೊದಲ್ಲಿ ಆರೋಗ್ಯಕರ ಖನಿಜಗಳಿವೆ. ಫೈಬರ್, ಕೋಲೀನ್, ವಿಟಮಿನ್ ಸಿ, ಪೊಟ್ಯಾಸಿಯಮ್ ಅಂಶಗಳು ಹೃದಯಕ್ಕೆ ಒಳ್ಳೆಯದು. ಇದರಲ್ಲಿರುವ ಲೈಕೋಪೀನ್ ನಮ್ಮ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಿ. ಬಿಪಿಯನ್ನು ಸಹ ನಿಯಂತ್ರಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಒಳ್ಳೆಯದು:

ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಟೊಮೆಟೊವನ್ನು ಆಹಾರದಲ್ಲಿ ಸೇರಿಸಬೇಕು. ಇದು ಮುಖವನ್ನು ಕಾಂತಿಯುತವಾಗಿಸುತ್ತದೆ. ಇದಲ್ಲದೆ, ಟೊಮೆಟೊ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಅಂದ ಹೆಚ್ಚುವುದರ ಜೊತೆಗೆ ಮೊಡವೆಗಳಿಂದ ಮುಕ್ತಿ ಸಿಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ