AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಬೂದಾನದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು! ಎಷ್ಟು ಸಮಸ್ಯೆಗಳು ದೂರವಾಗುತ್ತವೆ ತಿಳಿದಿದೆಯೇ?

ಸಾಬಕ್ಕಿ, ಸಾಬೂದಾನ ಹೀಗೆ ನಾನಾ ಹೆಸರುಗಳಿಂದ ಪ್ರಸಿದ್ದಿ ಪಡೆದುಕೊಂಡಿರುವ ಆಹಾರ ಪದಾರ್ಥವನ್ನು ಉಪವಾಸದ ಸಂದರ್ಭಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಏಕೆಂದರೆ ಇದರಲ್ಲಿ ಅತೀ ಹೆಚ್ಚು ಶಕ್ತಿಯುತ ಗುಣಗಳಿವೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ನೀಡಬಹುದಾದ ಏಕೈಕ ಆಹಾರವಾಗಿದೆ. ಹಾಗಾದರೆ ಇದರ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು ತಿಳಿದುಕೊಳ್ಳಿ.

ಸಾಬೂದಾನದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು! ಎಷ್ಟು ಸಮಸ್ಯೆಗಳು ದೂರವಾಗುತ್ತವೆ ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 13, 2025 | 11:14 AM

Share

ಸಬ್ಬಕ್ಕಿ(Sago), ಸಾಬಕ್ಕಿ, ಸಾಬೂದಾನ ಹೀಗೆ ನಾನಾ ಹೆಸರುಗಳಿಂದ ಪ್ರಸಿದ್ದಿ ಪಡೆದುಕೊಂಡಿರುವ ಆಹಾರ ಪದಾರ್ಥ. ಸಾಮಾನ್ಯವಾಗಿ ಇದು ಮರಗೆಣಸಿನಿಂದ ತಯಾರಿಸಲಾಗುವ ಪಿಷ್ಠವಾಗಿದೆ. ಇದನ್ನು ಉಪವಾಸದ ಸಂದರ್ಭಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಏಕೆಂದರೆ ಇದರಲ್ಲಿ ಅತೀ ಹೆಚ್ಚು ಶಕ್ತಿಯುತ ಗುಣಗಳಿವೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ನೀಡಬಹುದಾದ ಏಕೈಕ ಆಹಾರವಾಗಿದೆ. ಹಾಗಾದರೆ ಇದರ ಪ್ರಯೋಜನಗಳೇನು? ಯಾಕಾಗಿ ಸೇವನೆ ಮಾಡಬೇಕು ತಿಳಿದುಕೊಳ್ಳಿ.

  • ಸಾಮಾನ್ಯವಾಗಿ ಸಾಬೂದಾನದಲ್ಲಿ ಫೋಲಿಕ್ ಆಮ್ಲ ಮತ್ತು ವಿಟಮಿನ್ ಬಿ ಸಮೃದ್ಧವಾಗಿದೆ. ಇವು ಗರ್ಭಿಣಿಯರ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಗರ್ಭಾವಸ್ಥೆಯಲ್ಲಿ, ತಾಯಿಯ ದೇಹವನ್ನು ಆರೋಗ್ಯವಾಗಿಡಲು ಮತ್ತು ಮಗುವಿನ ಬೆಳವಣಿಗೆಗೆ ಸಹಾಯವಾಗಲು ಇದರಿಂದ ಮಾಡಿದ ಆಹಾರ ಪದಾರ್ಥಗಳ ಸೇವನೆ ಮಾಡಲಾಗುತ್ತದೆ.
  • ಇದರ ಸೇವನೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳು ಇಲ್ಲದ ಕಾರಣ ಮಧುಮೇಹಿಗಳಿಗೂ ಒಳ್ಳೆಯದು. ಹಾಗಾಗಿ ಇದನ್ನು ನಿಯಮಿತವಾಗಿ ಸೇವನೆ ಮಾಡಬಹುದು.
  • ಸಾಬಕ್ಕಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಕೆ ನಂತಹ ಪೋಷಕಾಂಶಗಳಿವೆ. ಅವು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತವೆ ಮತ್ತು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.
  • ಸಾಬೂದಾನ ದೈಹಿಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸ್ನಾಯು ಸಮಸ್ಯೆಗಳೂ ಕಡಿಮೆಯಾಗುತ್ತವೆ. ಇದನ್ನು ಪ್ರೋಟೀನ್ ಜೊತೆಗೆ ತೆಗೆದುಕೊಳ್ಳುವುದು ವಿಶೇಷವಾಗಿ ಒಳ್ಳೆಯದು.
  • ಕಡಿಮೆ ತೂಕ ಇರುವವರಿಗೆ ಸಾಬಕ್ಕಿ ಬಹಳ ಸಹಾಯ ಮಾಡುತ್ತದೆ. ಇದು ಆರೋಗ್ಯಕರವಾಗಿ ತೂಕ ಹೆಚ್ಚಿಸಲು ಸಹಕಾರಿ. ಅಂದರೆ ದೇಹದಲ್ಲಿ ಅಗತ್ಯವಾದ ಕೊಬ್ಬನ್ನು ಹೆಚ್ಚಿಸದೆ ತೂಕವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ಹೆಚ್ಚಿನ ಕ್ಯಾಲೊರಿ ಪದಾರ್ಥಗಳ ಜೊತೆಯಲ್ಲಿ ಎಂದಿಗೂ ಬಳಕೆ ಮಾಡಬಾರದು.
  • ಸಾಬೂದಾನ ನಾರಿನಂಶದಿಂದ ಸಮೃದ್ಧವಾಗಿದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ. ಗ್ಲುಟೆನ್ ಮುಕ್ತ ಆಹಾರವಾಗಿರುವುದರಿಂದ ಅಲರ್ಜಿ ಇರುವವರು ಕೂಡ ಸುರಕ್ಷಿತವಾಗಿ ಸೇವಿಸಬಹುದು.
  • ಉಪವಾಸದ ಸಮಯದಲ್ಲಿ ಸಾಬೂದಾನ ಸೇವನೆ ತುಂಬಾ ಪ್ರಯೋಜನಕಾರಿ. ಇದು ತಕ್ಷಣದ ಶಕ್ತಿಯನ್ನು ಒದಗಿಸುವ ಶಕ್ತಿಯುತ ಆಹಾರವಾಗಿದೆ. ಖಿಚಡಿ ಅಥವಾ ಪಾಯಸದಂತಹ ಭಕ್ಷ್ಯಗಳ ರೂಪದಲ್ಲಿ ಸೇವಿಸುವುದರಿಂದ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಆರೋಗ್ಯವನ್ನು ಕೂಡ ಕಾಪಾಡುತ್ತದೆ

(ಸೂಚನೆ: ಇಲ್ಲಿರುವ ವಿಷಯಗಳು ಜಾಗೃತಿಗಾಗಿ ಮಾತ್ರ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 am, Thu, 13 February 25

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!