AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Almond Benefits: ಬಾದಾಮಿ ಸೇವನೆಯಿಂದ ಆಗುವ ಐದು ಪ್ರಯೋಜನಗಳು; ಆಯುರ್ವೇದ ತಜ್ಞರ ಸಲಹೆ

ಬಾದಾಮಿಯ ಪೌಷ್ಟಿಕಾಂಶದ ಗುಣಲಕ್ಷಣಗಳಲ್ಲಿ ಬಲವಾದ ನಂಬಿಕೆಯಿಂದ ಹುಟ್ಟಿಕೊಂಡಿದೆ, ಬಾದಾಮಿಯ ದೈನಂದಿನ ಸೇವನೆಯು ವಾತ ಮತ್ತು ಪಿತ್ತ ದೋಷಗಳನ್ನು ನಿವಾರಿಸಲು ಪ್ರಯೋಜನಕಾರಿಯಾಗಿದ್ದು, ಮಧುಮೇಹಕ್ಕೆ, ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಸಹಕಾರಿಯಾಗಲಿದೆ.

Almond Benefits: ಬಾದಾಮಿ ಸೇವನೆಯಿಂದ ಆಗುವ ಐದು ಪ್ರಯೋಜನಗಳು; ಆಯುರ್ವೇದ ತಜ್ಞರ ಸಲಹೆ
ಬಾದಾಮಿ
TV9 Web
| Edited By: |

Updated on: Aug 14, 2022 | 7:00 AM

Share

ನಿಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಜೀವಸತ್ವಗಳು, ಖನಿಜಗಳು ಮತ್ತು ಪೋಷಕಾಂಶಗಳ ಅಗತ್ಯವಿರುತ್ತದೆ. ಇದು ನಿಮ್ಮ ಆಹಾರದಲ್ಲಿ ಪ್ರಧಾನವಾಗಿರಬೇಕು. ಪೌಷ್ಟಿಕತಜ್ಞರು ಮತ್ತು ಆರೋಗ್ಯ ತಜ್ಞರು ಅವುಗಳಲ್ಲಿ ಕೆಲವನ್ನು ಮಧ್ಯಾಹ್ನದ ತಿಂಡಿಯಾಗಿ ತಿನ್ನಲು ಹಾಗೂ ಶಕ್ತಿಯ ಮರುಪೂರಣವನ್ನು ಉತ್ತೇಜಿಸಲು ಶಿಫಾರಸು ಮಾಡುತ್ತಾರೆ. ಆಯುರ್ವೇದದ ಪ್ರಕಾರ, ವಾತ, ಪಿತ್ತ ಮತ್ತು ಕಫ ಸಮತೋಲನದಲ್ಲಿದ್ದರೆ ದೇಹವು ಆರೋಗ್ಯಕರ ಸ್ಥಿತಿಯಲ್ಲಿರುತ್ತದೆ. ಯಾವುದೇ ಅಸಮತೋಲನವು ಆರೋಗ್ಯದ ಕಾಯಿಲೆಗಳಿಗೆ ಕಾರಣವಾಗುತ್ತದೆ. ಪೌಷ್ಟಿಕಾಂಶದ ಗುಣಗಳನ್ನು ಹೊಂದಿರುವ ಬಾದಾಮಿಯ ದೈನಂದಿನ ಸೇವನೆಯು ವಾತ ಮತ್ತು ಪಿತ್ತ ದೋಷಗಳನ್ನು ನಿವಾರಿಸಲು ಸಹ ಪ್ರಯೋಜನಕಾರಿ ಎಂದು ನಂಬಲಾಗಿದೆ.

ಹಿರಿಯ ಆಯುರ್ವೇದ ತಜ್ಞ ಡಾ.ವಿಶಾಖ ಮಹೀಂದ್ರೂ ಅವರು ಪ್ರತಿದಿನ ಬಾದಾಮಿ ಸೇವಿಸುವುದರಿಂದ ಆಗುವ ಪ್ರಮುಖ ಐದು ಪ್ರಯೋಜನಗಳನ್ನು ಸೂಚಿಸಿದ್ದಾರೆ. ಅವುಗಳು ಈ ಕೆಳಗಿನಂತಿವೆ:

ಮಧುಮೇಹಿಗಳಿಗೆ ಪ್ರಯೋಜನಕಾರಿ: ನೆನೆಸಿದ ಬಾದಾಮಿ ಸೇವನೆಯು ದುರ್ಬಲತೆ ಮತ್ತು ದೌರ್ಬಲ್ಯದಂತಹ ಮಧುಮೇಹದ ಕೆಲವು ತೊಡಕುಗಳನ್ನು ತಡೆಯಲು ಸಹಾಯ ಮಾಡುತ್ತದೆ. ಆಯುರ್ವೇದದ ಪ್ರಕಾರ, ಸ್ಥೂಲಕಾಯತೆ, ಪ್ರಿಡಿಯಾಬಿಟಿಸ್ ಮೆಟಬಾಲಿಕ್ ಸಿಂಡ್ರೋಮ್‌ನಂತಹ ಅಸ್ವಸ್ಥತೆಗಳನ್ನು ಸಂಯೋಜಿಸುವ ಮಧುಮೇಹ ಪರಿಸ್ಥಿತಿಗಳಲ್ಲಿ ಬಾದಾಮಿ ಸಹಾಯ ಮಾಡುತ್ತದೆ.

ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಆಯುರ್ವೇದದ ಪ್ರಕಾರ, ಬಾದಾಮಿಯ ದೈನಂದಿನ ಸೇವನೆಯು ದೇಹದ ಅಂಗಾಂಶಗಳಿಗೆ ತೇವಾಂಶವನ್ನು ನೀಡುತ್ತದೆ, ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಮತ್ತು ಕೂದಲು ಉದುರುವಿಕೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ.

ಜ್ಞಾಪಕಶಕ್ತಿ ಹೆಚ್ಚಿಸಲು ಸಹಕಾರಿ: ಆಯುರ್ವೇದದ ಪ್ರಕಾರ, ನರಮಂಡಲವನ್ನು ಬಲಪಡಿಸಲು ಪ್ರತಿದಿನ ಬಾದಾಮಿ ಸೇವಿಸಬೇಕು. ಬಾದಾಮಿ ಸೇವನೆಯು ಜ್ಞಾಪಕಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಸಾಂಪ್ರದಾಯಿಕವಾಗಿ ನಂಬಲಾಗಿದೆ.

ಸಂತಾನೋತ್ಪತ್ತಿ ಕಾರ್ಯದ ಸಾಮರ್ಥ್ಯಕ್ಕೆ ಬೆಂಬಲ: ಪ್ರತಿನಿತ್ಯ ಬಾದಾಮಿ ಸೇವನೆ ಮಾಡುವುದರಿಂದ ಸಂತಾನೋತ್ಪತ್ತಿ ಅಂಗಾಂಶ ಮತ್ತು ಕಾರ್ಯದ ಸಾಮರ್ಥ್ಯವನ್ನು ಬೆಂಬಲಿಸುತ್ತದೆ. ಉತ್ತಮ ಪ್ರಯೋಜನಗಳನ್ನು ಪಡೆಯಲು ಪ್ರತಿದಿನ ತಿನ್ನಲು ಶಿಫಾರಸು ಮಾಡಲಾಗಿದೆ.

ಸ್ನಾಯುವಿನ ಶಕ್ತಿ ಹೆಚ್ಚಿಸಲು ಪರಿಣಾಮಕಾರಿ: ಬಾದಾಮಿಯಂತಹ ಬೀಜಗಳನ್ನು ಸೇವಿಸುವುದು ಕ್ರಮೇಣ ತೂಕವನ್ನು ಹೆಚ್ಚಿಸುವ ಆರೋಗ್ಯಕರ ವಿಧಾನಗಳಲ್ಲಿ ಒಂದಾಗಿದೆ. ಬಾದಾಮಿಯು ಆಯುರ್ವೇದದ ಪ್ರಕಾರ ದೇಹದ ದ್ರವ್ಯರಾಶಿ ಮತ್ತು ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ.

ಹೆಚ್ಚಿನ ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ