AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ

ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 22, 2022 | 6:30 AM

Share

ಮಾನವ ದೇಹದ ಎಲ್ಲಾ ಅಂಗಗಳನ್ನು ಬಹಳ ಎಚ್ಚರಿಕೆಯಿಂದ ಸಂರಕ್ಷಿಸುವುದು ಮುಖ್ಯವಾಗಿದೆ. ಅಂತಹ ಅಂಗಗಳಲ್ಲಿ ಬಹಳ ಮುಖ್ಯವಾಗಿ ಪಾತ್ರವಹಿಸುವ ಯಕೃತ್ತು ಕೂಡ ಒಂದು. ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದು. ಪರಿಣಾಮವಾಗಿ ದೇಹದಲ್ಲಿ ಅನೇಕ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಯಕೃತ್ತಿನ ಆರೋಗ್ಯ ಕೆಡಿಸುವ ಕೆಲವು ಆಹಾರಗಳನ್ನು ತಪ್ಪಿಸುವುದು ಬಹಳ ಮುಖ್ಯವಾಗಿದೆ. ಹಾಗಿದ್ದರೆ ಲಿವರ್ ಅನ್ನು ಹಾಳು ಮಾಡುವ ಆಹಾರಗಳು ಯಾವುವು? ಲಿವರ್​ನ ಆರೋಗ್ಯ ಕಾಪಾಡಲು ಯಾವುದನ್ನು ತ್ಯಜಿಸಬೇಕು? ಎಂಬುದನ್ನು ಈ ಸುದ್ದಿ ಮೂಲಕ ತಿಳಿಯಿರಿ.

  1. ಮದ್ಯಪಾನ: ಬಹಳಷ್ಟು ಜನರು ಮದ್ಯಪಾನ ಮಾಡುತ್ತಾರೆ. ಅತಿಯಾದ ಆಲ್ಕೋಹಾಲ್ ಸೇವನೆಯು ಯಕೃತ್ತನ್ನು ಹಾನಿಗೊಳಿಸುತ್ತದೆ. ಆಲ್ಕೋಹಾಲ್ ಉರಿಯೂತ, ಜೀವಕೋಶದ ಸಾವು ಮತ್ತು ಫೈಬ್ರೋಸಿಸ್​ಗೆ ಕಾರಣವಾಗುತ್ತದೆ. ಅದೇ ಸಮಯದಲ್ಲಿ ಲಿವರ್ ಸಿರೋಸಿಸ್ ಸಹ ಸಂಭವಿಸಬಹುದು.
  2. ಸಕ್ಕರೆ: ಹೆಚ್ಚು ಸಕ್ಕರೆ ಸೇವನೆ ದೇಹಕ್ಕೆ ಒಳ್ಳೆಯದಲ್ಲ. ಇದರಿಂದ ಬೊಜ್ಜು ಹೆಚ್ಚಾಗುವುದರೊಂದಿಗೆ ಮಧುಮೇಹದ ಅಪಾಯವೂ ಹೆಚ್ಚಾಗಬಹುದು. ಹೆಚ್ಚು ಸಕ್ಕರೆಯು ಯಕೃತ್ತನ್ನು ಸಹ ಹಾನಿಗೊಳಿಸುತ್ತದೆ. ಹಾಗಾಗಿ ಸಕ್ಕರೆಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿ.
  3. ಕೆಂಪು ಮಾಂಸ: ಅನೇಕ ಜನರು ಮಾಂಸವನ್ನು ಸೇವಿಸುತ್ತಾರೆ. ಬಿಳಿ ಮಾಂಸಗಳಾದ ಕೋಳಿ ಮತ್ತು ಮೀನು ಸೇವಿಸಬಹುದು. ಆದರೆ ಕೆಂಪು ಮಾಂಸವನ್ನು ಸೇವಿಸುವುದು ಯಕೃತ್ತಿಗೆ ಹಾನಿಯಾಗಬಹುದು. ಏಕೆಂದರೆ ಅದನ್ನು ಜೀರ್ಣಿಸಿಕೊಳ್ಳುವುದು ಬಹಳ ಕಷ್ಟ.
  4. ಫಾಸ್ಟ್ ಫುಡ್: ಅನೇಕ ಜನರಿಗೆ ಫಾಸ್ಟ್ ಫುಡ್ ಬಲು ಇಷ್ಟ, ಬರ್ಗರ್, ಸ್ಯಾಂಡ್‌ವಿಚ್, ಪಿಜ್ಜಾ, ಫ್ರೆಂಚ್ ಫ್ರೈಸ್ ಬಾಯಲ್ಲಿ ನೀರೂರಿಸುತ್ತದೆ. ಇವು ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಅವು ಸುಲಭವಾಗಿ ಜೀರ್ಣವಾಗುವುದಿಲ್ಲ ಮತ್ತು ಯಕೃತ್ತನ್ನು ಹಾನಿಗೊಳಿಸುತ್ತವೆ.
  5. ಮೈದಾ ಹಿಟ್ಟು: ಮೈದಾ ಹಿಟ್ಟನ್ನು ಹೆಚ್ಚು ಸಂಸ್ಕರಿಸಲಾಗುತ್ತದೆ. ಹೀಗಾಗಿ ಇದರ ಹೆಚ್ಚಿನ ಸೇವನೆಯು ಲಿವರ್ ಮೇಲೆ ಪರಿಣಾಮ ಬೀರುತ್ತದೆ. ಇದು ಖನಿಜಗಳು, ಫೈಬರ್ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಹೊಂದಿರುವುದಿಲ್ಲ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು