AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ

ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ
ಸಾಂಕೇತಿಕ ಚಿತ್ರ
TV9 Web
| Updated By: Rakesh Nayak Manchi|

Updated on: Aug 22, 2022 | 6:30 AM

Share

ಮಾನವ ದೇಹದ ಎಲ್ಲಾ ಅಂಗಗಳನ್ನು ಬಹಳ ಎಚ್ಚರಿಕೆಯಿಂದ ಸಂರಕ್ಷಿಸುವುದು ಮುಖ್ಯವಾಗಿದೆ. ಅಂತಹ ಅಂಗಗಳಲ್ಲಿ ಬಹಳ ಮುಖ್ಯವಾಗಿ ಪಾತ್ರವಹಿಸುವ ಯಕೃತ್ತು ಕೂಡ ಒಂದು. ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದು. ಪರಿಣಾಮವಾಗಿ ದೇಹದಲ್ಲಿ ಅನೇಕ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಯಕೃತ್ತಿನ ಆರೋಗ್ಯ ಕೆಡಿಸುವ ಕೆಲವು ಆಹಾರಗಳನ್ನು ತಪ್ಪಿಸುವುದು ಬಹಳ ಮುಖ್ಯವಾಗಿದೆ. ಹಾಗಿದ್ದರೆ ಲಿವರ್ ಅನ್ನು ಹಾಳು ಮಾಡುವ ಆಹಾರಗಳು ಯಾವುವು? ಲಿವರ್​ನ ಆರೋಗ್ಯ ಕಾಪಾಡಲು ಯಾವುದನ್ನು ತ್ಯಜಿಸಬೇಕು? ಎಂಬುದನ್ನು ಈ ಸುದ್ದಿ ಮೂಲಕ ತಿಳಿಯಿರಿ.

  1. ಮದ್ಯಪಾನ: ಬಹಳಷ್ಟು ಜನರು ಮದ್ಯಪಾನ ಮಾಡುತ್ತಾರೆ. ಅತಿಯಾದ ಆಲ್ಕೋಹಾಲ್ ಸೇವನೆಯು ಯಕೃತ್ತನ್ನು ಹಾನಿಗೊಳಿಸುತ್ತದೆ. ಆಲ್ಕೋಹಾಲ್ ಉರಿಯೂತ, ಜೀವಕೋಶದ ಸಾವು ಮತ್ತು ಫೈಬ್ರೋಸಿಸ್​ಗೆ ಕಾರಣವಾಗುತ್ತದೆ. ಅದೇ ಸಮಯದಲ್ಲಿ ಲಿವರ್ ಸಿರೋಸಿಸ್ ಸಹ ಸಂಭವಿಸಬಹುದು.
  2. ಸಕ್ಕರೆ: ಹೆಚ್ಚು ಸಕ್ಕರೆ ಸೇವನೆ ದೇಹಕ್ಕೆ ಒಳ್ಳೆಯದಲ್ಲ. ಇದರಿಂದ ಬೊಜ್ಜು ಹೆಚ್ಚಾಗುವುದರೊಂದಿಗೆ ಮಧುಮೇಹದ ಅಪಾಯವೂ ಹೆಚ್ಚಾಗಬಹುದು. ಹೆಚ್ಚು ಸಕ್ಕರೆಯು ಯಕೃತ್ತನ್ನು ಸಹ ಹಾನಿಗೊಳಿಸುತ್ತದೆ. ಹಾಗಾಗಿ ಸಕ್ಕರೆಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿ.
  3. ಕೆಂಪು ಮಾಂಸ: ಅನೇಕ ಜನರು ಮಾಂಸವನ್ನು ಸೇವಿಸುತ್ತಾರೆ. ಬಿಳಿ ಮಾಂಸಗಳಾದ ಕೋಳಿ ಮತ್ತು ಮೀನು ಸೇವಿಸಬಹುದು. ಆದರೆ ಕೆಂಪು ಮಾಂಸವನ್ನು ಸೇವಿಸುವುದು ಯಕೃತ್ತಿಗೆ ಹಾನಿಯಾಗಬಹುದು. ಏಕೆಂದರೆ ಅದನ್ನು ಜೀರ್ಣಿಸಿಕೊಳ್ಳುವುದು ಬಹಳ ಕಷ್ಟ.
  4. ಫಾಸ್ಟ್ ಫುಡ್: ಅನೇಕ ಜನರಿಗೆ ಫಾಸ್ಟ್ ಫುಡ್ ಬಲು ಇಷ್ಟ, ಬರ್ಗರ್, ಸ್ಯಾಂಡ್‌ವಿಚ್, ಪಿಜ್ಜಾ, ಫ್ರೆಂಚ್ ಫ್ರೈಸ್ ಬಾಯಲ್ಲಿ ನೀರೂರಿಸುತ್ತದೆ. ಇವು ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಅವು ಸುಲಭವಾಗಿ ಜೀರ್ಣವಾಗುವುದಿಲ್ಲ ಮತ್ತು ಯಕೃತ್ತನ್ನು ಹಾನಿಗೊಳಿಸುತ್ತವೆ.
  5. ಮೈದಾ ಹಿಟ್ಟು: ಮೈದಾ ಹಿಟ್ಟನ್ನು ಹೆಚ್ಚು ಸಂಸ್ಕರಿಸಲಾಗುತ್ತದೆ. ಹೀಗಾಗಿ ಇದರ ಹೆಚ್ಚಿನ ಸೇವನೆಯು ಲಿವರ್ ಮೇಲೆ ಪರಿಣಾಮ ಬೀರುತ್ತದೆ. ಇದು ಖನಿಜಗಳು, ಫೈಬರ್ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಹೊಂದಿರುವುದಿಲ್ಲ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!