AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ

ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ.

Health Tips: ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಬಹುದು; ಈ ಆಹಾರಗಳನ್ನು ತ್ಯಜಿಸಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 22, 2022 | 6:30 AM

Share

ಮಾನವ ದೇಹದ ಎಲ್ಲಾ ಅಂಗಗಳನ್ನು ಬಹಳ ಎಚ್ಚರಿಕೆಯಿಂದ ಸಂರಕ್ಷಿಸುವುದು ಮುಖ್ಯವಾಗಿದೆ. ಅಂತಹ ಅಂಗಗಳಲ್ಲಿ ಬಹಳ ಮುಖ್ಯವಾಗಿ ಪಾತ್ರವಹಿಸುವ ಯಕೃತ್ತು ಕೂಡ ಒಂದು. ಅನಾರೋಗ್ಯಕರ ಆಹಾರವು ಯಕೃತ್ತಿನಲ್ಲಿ ವಿಷವನ್ನು ಸಂಗ್ರಹಿಸಲು ಕಾರಣವಾಗಬಹುದು. ಈ ಕಾರಣದಿಂದಾಗಿ ದೇಹದಲ್ಲಿನ ಚಯಾಪಚಯ ಪ್ರಕ್ರಿಯೆ ಮೇಲೆ ಪರಿಣಾಮ ಬೀರಬಹುದು. ಪರಿಣಾಮವಾಗಿ ದೇಹದಲ್ಲಿ ಅನೇಕ ಸಮಸ್ಯೆಗಳು ಪ್ರಾರಂಭವಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ ಯಕೃತ್ತಿನ ಆರೋಗ್ಯ ಕೆಡಿಸುವ ಕೆಲವು ಆಹಾರಗಳನ್ನು ತಪ್ಪಿಸುವುದು ಬಹಳ ಮುಖ್ಯವಾಗಿದೆ. ಹಾಗಿದ್ದರೆ ಲಿವರ್ ಅನ್ನು ಹಾಳು ಮಾಡುವ ಆಹಾರಗಳು ಯಾವುವು? ಲಿವರ್​ನ ಆರೋಗ್ಯ ಕಾಪಾಡಲು ಯಾವುದನ್ನು ತ್ಯಜಿಸಬೇಕು? ಎಂಬುದನ್ನು ಈ ಸುದ್ದಿ ಮೂಲಕ ತಿಳಿಯಿರಿ.

  1. ಮದ್ಯಪಾನ: ಬಹಳಷ್ಟು ಜನರು ಮದ್ಯಪಾನ ಮಾಡುತ್ತಾರೆ. ಅತಿಯಾದ ಆಲ್ಕೋಹಾಲ್ ಸೇವನೆಯು ಯಕೃತ್ತನ್ನು ಹಾನಿಗೊಳಿಸುತ್ತದೆ. ಆಲ್ಕೋಹಾಲ್ ಉರಿಯೂತ, ಜೀವಕೋಶದ ಸಾವು ಮತ್ತು ಫೈಬ್ರೋಸಿಸ್​ಗೆ ಕಾರಣವಾಗುತ್ತದೆ. ಅದೇ ಸಮಯದಲ್ಲಿ ಲಿವರ್ ಸಿರೋಸಿಸ್ ಸಹ ಸಂಭವಿಸಬಹುದು.
  2. ಸಕ್ಕರೆ: ಹೆಚ್ಚು ಸಕ್ಕರೆ ಸೇವನೆ ದೇಹಕ್ಕೆ ಒಳ್ಳೆಯದಲ್ಲ. ಇದರಿಂದ ಬೊಜ್ಜು ಹೆಚ್ಚಾಗುವುದರೊಂದಿಗೆ ಮಧುಮೇಹದ ಅಪಾಯವೂ ಹೆಚ್ಚಾಗಬಹುದು. ಹೆಚ್ಚು ಸಕ್ಕರೆಯು ಯಕೃತ್ತನ್ನು ಸಹ ಹಾನಿಗೊಳಿಸುತ್ತದೆ. ಹಾಗಾಗಿ ಸಕ್ಕರೆಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಿ.
  3. ಕೆಂಪು ಮಾಂಸ: ಅನೇಕ ಜನರು ಮಾಂಸವನ್ನು ಸೇವಿಸುತ್ತಾರೆ. ಬಿಳಿ ಮಾಂಸಗಳಾದ ಕೋಳಿ ಮತ್ತು ಮೀನು ಸೇವಿಸಬಹುದು. ಆದರೆ ಕೆಂಪು ಮಾಂಸವನ್ನು ಸೇವಿಸುವುದು ಯಕೃತ್ತಿಗೆ ಹಾನಿಯಾಗಬಹುದು. ಏಕೆಂದರೆ ಅದನ್ನು ಜೀರ್ಣಿಸಿಕೊಳ್ಳುವುದು ಬಹಳ ಕಷ್ಟ.
  4. ಫಾಸ್ಟ್ ಫುಡ್: ಅನೇಕ ಜನರಿಗೆ ಫಾಸ್ಟ್ ಫುಡ್ ಬಲು ಇಷ್ಟ, ಬರ್ಗರ್, ಸ್ಯಾಂಡ್‌ವಿಚ್, ಪಿಜ್ಜಾ, ಫ್ರೆಂಚ್ ಫ್ರೈಸ್ ಬಾಯಲ್ಲಿ ನೀರೂರಿಸುತ್ತದೆ. ಇವು ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಅವು ಸುಲಭವಾಗಿ ಜೀರ್ಣವಾಗುವುದಿಲ್ಲ ಮತ್ತು ಯಕೃತ್ತನ್ನು ಹಾನಿಗೊಳಿಸುತ್ತವೆ.
  5. ಮೈದಾ ಹಿಟ್ಟು: ಮೈದಾ ಹಿಟ್ಟನ್ನು ಹೆಚ್ಚು ಸಂಸ್ಕರಿಸಲಾಗುತ್ತದೆ. ಹೀಗಾಗಿ ಇದರ ಹೆಚ್ಚಿನ ಸೇವನೆಯು ಲಿವರ್ ಮೇಲೆ ಪರಿಣಾಮ ಬೀರುತ್ತದೆ. ಇದು ಖನಿಜಗಳು, ಫೈಬರ್ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಹೊಂದಿರುವುದಿಲ್ಲ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ