AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack:ಕೈಗಳಲ್ಲಿ ಜುಮ್ಮೆನ್ನುವ ಅನುಭವವಾಗುತ್ತಿದ್ದರೆ ನಿರ್ಲಕ್ಷಿಸಬೇಡಿ, ಹೃದಯಾಘಾತದ ಲಕ್ಷಣವಾಗಿರಬಹುದು

ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂದು ಹೇಳಲಾಗುತ್ತದೆಯಾದರೂ ಲಕ್ಷಣಗಳನ್ನು ಈ ಹಿಂದೆಯೇ ತೋರಿಸಿರುತ್ತದೆ ಆದರೆ ಯಾರೂ ಕೂಡ ಅದರ ಬಗ್ಗೆ ಹೆಚ್ಚು ಗಮನಹರಿಸಿರುವುದಿಲ್ಲ.

Heart Attack:ಕೈಗಳಲ್ಲಿ ಜುಮ್ಮೆನ್ನುವ ಅನುಭವವಾಗುತ್ತಿದ್ದರೆ ನಿರ್ಲಕ್ಷಿಸಬೇಡಿ, ಹೃದಯಾಘಾತದ ಲಕ್ಷಣವಾಗಿರಬಹುದು
Heart Attack
TV9 Web
| Updated By: ನಯನಾ ರಾಜೀವ್|

Updated on: Nov 20, 2022 | 1:35 PM

Share

ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂದು ಹೇಳಲಾಗುತ್ತದೆಯಾದರೂ ಲಕ್ಷಣಗಳನ್ನು ಈ ಹಿಂದೆಯೇ ತೋರಿಸಿರುತ್ತದೆ ಆದರೆ ಯಾರೂ ಕೂಡ ಅದರ ಬಗ್ಗೆ ಹೆಚ್ಚು ಗಮನಹರಿಸಿರುವುದಿಲ್ಲ. ಹೃದಯಾಘಾತ ಸಂಭವಿಸುವ ಕೆಲವು ದಿನಗಳ ಮೊದಲು, ಕೆಲವು ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತವೆ, ಅದನ್ನು ನಾವು ಗಂಭೀರವಾಗಿ ಪರಿಗಣಿಸುವುದಿಲ್ಲ.

ಹೆಚ್ಚಿನ ಜನರು ಈ ಸಣ್ಣ ರೋಗಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ. ಉದಾಹರಣೆಗೆ, ಹೆಚ್ಚು ಆಮ್ಲೀಯತೆಯನ್ನು ಹೊಂದಿರುವುದು. ಕೈಯಲ್ಲಿ ಜುಮ್ಮೆನ್ನುವುದು, ಆಹಾರ ಜೀರ್ಣವಾಗುವುದಿಲ್ಲ. ಎದೆಯುರಿ, ಬೆನ್ನಿನ ಭಾಗದಲ್ಲಿ ನಿರಂತರ ನೋವು. ಹೃದಯಾಘಾತಕ್ಕೆ ಸಂಬಂಧಿಸಿದ ಹಲವು ಚಿಹ್ನೆಗಳಾಗಿವೆ.

ಹಾರ್ವರ್ಡ್ ಹೆಲ್ತ್ ರಿಸರ್ಚ್ ಏನು ಹೇಳುತ್ತದೆ? ಹೃದಯಾಘಾತದ ಅನೇಕ ಸಂದರ್ಭಗಳಲ್ಲಿ ಸಣ್ಣ ಚಿಹ್ನೆಗಳು ನೀವು ಬೇಗನೆ ವೈದ್ಯರ ಬಳಿಗೆ ಹೋಗಬೇಕು ಎಂಬ ಸಂಕೇತವನ್ನು ನೀಡುತ್ತವೆ, ಆದರೆ ಜನರು ಅದನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಾರೆ.

ಹಾರ್ವರ್ಡ್ ಹೆಲ್ತ್ ಇತ್ತೀಚೆಗೆ ಒಂದು ಸಂಶೋಧನೆಯನ್ನು ಪ್ರಕಟಿಸಿದೆ. ಅವರು ಮಹಿಳೆಯರ ಮೇಲೆ ಈ ಸಂಶೋಧನೆಯನ್ನು ಮಾಡಿದ್ದಾರೆ. ಇದರಲ್ಲಿ ಶೇ.95 ಮಹಿಳೆಯರು ಹೃದಯಾಘಾತವಾಗುವ ಒಂದು ತಿಂಗಳ ಮೊದಲು ಆರೋಗ್ಯದಲ್ಲಿ ಏರು ಪೇರು ಕಾಣಿಸಿಕೊಂಡಿತ್ತು. ಸುಸ್ತಾಗಿ ನಿದ್ದೆ ಬಾರದಂತಹ ಅನುಭವ ಹೃದಯಾಘಾತಕ್ಕೆ ಒಂದು ತಿಂಗಳ ಮೊದಲು ಇಂತಹ ಲಕ್ಷಣಗಳು ದೇಹದಲ್ಲಿ ಕಾಣಿಸಿಕೊಳ್ಳುತ್ತವೆ

1. ಸಂಶೋಧನೆಯ ಪ್ರಕಾರ ಉಸಿರಾಟದ ತೊಂದರೆ, ದೌರ್ಬಲ್ಯ, ರಾತ್ರಿಯಲ್ಲಿ ಬೆವರುವುದು, ತಲೆತಿರುಗುವಿಕೆ ಮತ್ತು ವಾಂತಿ ಹೃದಯಾಘಾತದ ಆರಂಭಿಕ ಲಕ್ಷಣಗಳಾಗಿರಬಹುದು. ಮತ್ತೊಂದೆಡೆ, ಹೆಚ್ಚಿನ ಪುರುಷರಲ್ಲಿ, ಎದೆ ನೋವು, ಬಿಗಿತ, ಉಸಿರಾಟದ ತೊಂದರೆ ಆರಂಭಿಕ ಲಕ್ಷಣವಾಗಿ ಸಂಭವಿಸಬಹುದು.

2. ಹಾರ್ವರ್ಡ್ ಹೆಲ್ತ್ ನ ಸಂಶೋಧನೆಯ ಪ್ರಕಾರ, ಕೆಲವು ಮಹಿಳೆಯರಿಗೆ ಅತಿಯಾದ ಆಯಾಸ, ಅಸಮಾಧಾನ, ನಿದ್ರಾಹೀನತೆ ಅಥವಾ ಉಸಿರಾಟದ ತೊಂದರೆ ನಿರಂತರವಾಗಿ ಇದ್ದರೆ, ಅದು ಹೃದಯಾಘಾತದ ಆರಂಭಿಕ ಲಕ್ಷಣಗಳಾಗಿರಬಹುದು. ಈ ರೋಗಲಕ್ಷಣಗಳನ್ನು ಗಮನಿಸಿದರೆ, ತಕ್ಷಣವೇ ಚಿಕಿತ್ಸೆ ನೀಡಬಹುದು ಮತ್ತು ಹೃದಯಾಘಾತವನ್ನು ತಡೆಯಬಹುದು.

3. ಹಾರ್ವರ್ಡ್ ಹೆಲ್ತ್ ಪ್ರಕಾರ, ಎದೆ ನೋವು, ಉಸಿರಾಟದ ತೊಂದರೆ, ಆಯಾಸ, ಶೀತ ಬೆವರು, ತಲೆತಿರುಗುವಿಕೆ ಮತ್ತು ವಾಕರಿಕೆ ಮುಂತಾದ ರೋಗಲಕ್ಷಣಗಳನ್ನು ಹೊಂದಿರುವ ಮಹಿಳೆಯರು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ