AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬಾತ್ರೂಮ್​ನಲ್ಲೇ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಕಾರಣವೇನು?

ಹೃದಯಾಘಾತಗಳು ಹೆಚ್ಚಾಗಿ ಸ್ನಾನಗೃಹದಲ್ಲೇ ಸಂಭವಿಸುತ್ತದೆ. ಇದಕ್ಕೆ ಕಾರಣವೇನು ಎಂದು ನಿಮಗೆ ತಿಳಿದಿದೆಯೇ? ನೀವು ಸ್ನಾನಗೃಹದಲ್ಲಿ ಮಾಡುವ ಕೆಲವು ತಪ್ಪುಗಳು ಇದಕ್ಕೆ ಮೂಲ ಕಾರಣ. ಆದ್ದರಿಂದ ಇನ್ಮುಂದೆ ಸ್ನಾನಕ್ಕೆ ಹೋದ ವೇಳೆ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ತಪ್ಪಿಸಲು ಈ ಸಲಹೆ ಅನುಸರಿಸಿ.

Health Tips: ಬಾತ್ರೂಮ್​ನಲ್ಲೇ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಕಾರಣವೇನು?
Heart Attack in Shower
ಅಕ್ಷತಾ ವರ್ಕಾಡಿ
|

Updated on: Dec 10, 2024 | 12:55 PM

Share

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಾಗಿದೆ. ವಿಶೇಷವಾಗಿ ಈ ಸಮಸ್ಯೆ ಯುವ ಪೀಳಿಗೆಯನ್ನು ಕಾಡುತ್ತಿದೆ. ಆದರೆ ಪಾರ್ಶ್ವವಾಯು ಮತ್ತು ಹೃದಯಾಘಾತಗಳು ಹೆಚ್ಚಾಗಿ ಸ್ನಾನಗೃಹದಲ್ಲೇ ಸಂಭವಿಸುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಬಾತ್ರೂಮ್ನಲ್ಲಿ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತ ಸಂಭವಿಸಲು ಕಾರಣವೆನೆಂದರೆ ಸ್ನಾನಗೃಹದ ಉಷ್ಣತೆಯು ನಮ್ಮ ಕೋಣೆಯ ಉಳಿದ ತಾಪಮಾನಕ್ಕಿಂತ ಭಿನ್ನವಾಗಿರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೇಹದ ಉಷ್ಣತೆಯನ್ನು ಸಮತೋಲನಗೊಳಿಸಲು ಮತ್ತು ರಕ್ತ ಪರಿಚಲನೆಯನ್ನು ಕಾಪಾಡಿಕೊಳ್ಳಲು ಕೆಲಸ ಮಾಡುವುದು ಬಹಳ ಮುಖ್ಯ. ನೀವು ನೇರವಾಗಿ ತಲೆಯ ಮೇಲೆ ನೀರನ್ನು ಸುರಿಯುವುದರಿಂದ, ರಕ್ತ ಪರಿಚಲನೆಗೆ ತೊಂದರೆಯಾಗುತ್ತದೆ. ರಕ್ತವು ಸರಿಯಾಗಿ ಹೃದಯವನ್ನು ತಲುಪುವುದಿಲ್ಲ. ವಿಶೇಷವಾಗಿ ನೀರು ತುಂಬಾ ತಂಪಾಗಿದ್ದರೆ, ಇದು ರಕ್ತದೊತ್ತಡದಲ್ಲಿ ಹಠಾತ್ ಹೆಚ್ಚಳವಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ಇದಲ್ಲದೇ ಸಾಮಾನ್ಯವಾಗಿ ಬೆಳಿಗ್ಗಿನ ಜಾವ ಯಾವುದೇ ವ್ಯಕ್ತಿಯ ಬಿಪಿ ಸ್ವಲ್ಪ ಹೆಚ್ಚಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ತಣ್ಣೀರು ನೇರವಾಗಿ ತಲೆಗೆ ಸುರಿದರೆ ಅದು ಬಿಪಿ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಇದು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಮೊಮೊಸ್, ಪಿಜ್ಜಾ, ಬರ್ಗರ್ ಸೇವನೆ ಕ್ಯಾನ್ಸರ್​​ಗೆ ಕಾರಣವಾಗಬಹುದು; ಸಂಶೋಧನೆಯಲ್ಲಿ ಬಹಿರಂಗ

ಸ್ನಾನಕ್ಕೆ ಹೋದ ವೇಳೆ ಈ ವಿಷ್ಯ ನೆನಪಿನಲ್ಲಿಡಿ:

ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ತಪ್ಪಿಸಲು ನೀವು ತಣ್ಣೀರಿನಿಂದ ಸ್ನಾನ ಮಾಡುವಾಗ, ಮೊದಲು ನಿಮ್ಮ ಪಾದಗಳಿಗೆ ನೀರನ್ನು ಸುರಿಯಿರಿ. ನಂತರ ನಿಮ್ಮ ಮೈಮೇಲೆ ನೀರು ಹಾಕಿ. ಇದಲ್ಲದೆ ತುಂಬಾ ಹೊತ್ತು ಸ್ನಾನಗೃಹದಲ್ಲಿ ಸಮಯ ಕಳೆಯಬೇಡಿ. ಹಾಗಂತ ಆತುರಬೇಡ. ನೀವು ದೀರ್ಘಕಾಲ ಸ್ನಾನದ ತೊಟ್ಟಿಯಲ್ಲಿ ಇದ್ದರೆ, ಅದು ನಿಮ್ಮ ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ