Heart Attack: ಹಠಾತ್ ಹೃದಯಾಘಾತಕ್ಕೆ ಈ ಆಹಾರಗಳೇ ಮುಖ್ಯ ಕಾರಣ: ತಜ್ಞರು ಅಭಿಪ್ರಾಯವೇನು?

ಜೀವನಶೈಲಿಯಲ್ಲಿನ ವಿಪರೀತ ಬದಲಾವಣೆ, ಆಹಾರ ಸೇವನೆಯಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ, ವಿಪರೀತ ಮಾನಸಿಕ ಒತ್ತಡ ಹೃದಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ.

Heart Attack: ಹಠಾತ್ ಹೃದಯಾಘಾತಕ್ಕೆ ಈ ಆಹಾರಗಳೇ ಮುಖ್ಯ ಕಾರಣ: ತಜ್ಞರು ಅಭಿಪ್ರಾಯವೇನು?
ಪ್ರಾತಿನಿಧಿಕ ಚಿತ್ರImage Credit source: bestlifeonline.com
Follow us
|

Updated on: Apr 03, 2023 | 7:00 AM

ಹೃದಯಾಘಾತದಿಂದ (sudden heart attack) ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಯಸ್ಸನ್ನು ಲೆಕ್ಕಿಸದೆ ಜನರು ಹೃದ್ರೋಗದಿಂದ ಸಾಯುತ್ತಿದ್ದಾರೆ. ಲವಲವಿಕೆಯಿಂದ ಇಂದು ಇದ್ದ ಜನ ನಾಳೆ ಇರುವುದಿಲ್ಲ. ಅನಿಯಮಿತ ಹೃದಯ ಬಡಿತಕ್ಕೆ ಹಲವು ಕಾರಣಗಳಿವೆ. ಇದು ಮಾನವ ದೇಹದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದಕ್ಕೆ ನಾವು ಸೇವಿಸುವ ಆಹಾರವು ಮೊದಲು ಕಾರಣ ಎಂದು ಹೇಳಲಾಗುತ್ತಿದೆ. ಜೀವನಶೈಲಿಯಲ್ಲಿನ ವಿಪರೀತ ಬದಲಾವಣೆ, ಆಹಾರ ಸೇವನೆಯಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ, ವಿಪರೀತ ಮಾನಸಿಕ ಒತ್ತಡ ಹೃದಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕರಿದ ಪದಾರ್ಥಗಳ ಸೇವನೆಯೇ ಹೃದ್ರೋಗಕ್ಕೆ ಮುಖ್ಯ ಕಾರಣ ಎನ್ನುತ್ತಾರೆ ತಜ್ಞರು. ಈ ಕಾರಣದಿಂದಾಗಿ, ರಕ್ತನಾಳಗಳಲ್ಲಿ ಕೊಬ್ಬು ಸಂಗ್ರಹವಾಗುತ್ತದೆ ಮತ್ತು ರಕ್ತದ ಹರಿವನ್ನು ತಡೆಯುತ್ತದೆ. ಹೃದ್ರೋಗಕ್ಕೆ ಮತ್ತೊಂದು ಕಾರಣವೆಂದರೆ ಅತಿಯಾದ ಉಪ್ಪು ಸೇವನೆ. ಉಪ್ಪಿನೊಂದಿಗೆ ಬಿಪಿ ಬರಬಹುದು. ಇದರಿಂದ ಹೃದಯ ಸ್ನಾಯುಗಳು ಗಟ್ಟಿಯಾಗುತ್ತವೆ.

ಈ ಪದಾರ್ಥಗಳಿಂದ ದೂರವಿರಿ

ಸಕ್ಕರೆ ಮತ್ತು ಪಾಲಿಶ್ ಇರುವ ಆಹಾರಗಳನ್ನು ಸೇವಿಸುವುದು ಕೂಡ ಹೃದಯಾಘಾತಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಮೈದಾ, ರವೆ, ಉಪಾದ ರವೆ ಮುಂತಾದವುಗಳಿಂದ ಮಾಡಿದ ಆಹಾರಗಳನ್ನು ಆದಷ್ಟು ತ್ಯಜಿಸಬೇಕು. ಇವು ರಕ್ತವನ್ನು ದಪ್ಪವಾಗಿಸುತ್ತದೆ. ಫಾಸ್ಟ್ ಫುಡ್ ಮತ್ತು ಜಂಕ್ ಫುಡ್ ಕೂಡ ದೇಹದಲ್ಲಿ ಕೊಬ್ಬು ಹೆಚ್ಚಾಗಲು ಕಾರಣವಾಗುತ್ತದೆ. ಇದಲ್ಲದೆ, ಅಂತಹ ವಸ್ತುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಇದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗದೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು.

ಇದನ್ನೂ ಓದಿ: ಹೃದಯ ವೈಫಲ್ಯ ಮತ್ತು ಸ್ಲೀಪ್ ಅಪೆನಿಯಾಗೆ ಚಿಕಿತ್ಸೆ ನೀಡಲು ಹೊಸ ಔಷಧವನ್ನು ಕಂಡುಹಿಡಿಯಲಾಗಿದೆ: ಅಧ್ಯಯನ

ಹೃದಯಾಘಾತದಿಂದ ದೂರವಿರಲು ಒಮೆಗಾ 3 ಕೊಬ್ಬಿನಾಮ್ಲವಿರುವ ಆಹಾರವನ್ನು ಸೇವಿಸಿ ಎಂದು ತಜ್ಞರು ಹೇಳುತ್ತಾರೆ. ಅಗಸೆ ಬೀಜಗಳು, ವಾಲ್ನಟ್ಸ್, ಬಾದಾಮಿಗಳಂತಹ ಹೆಚ್ಚಿನ ವಸ್ತುಗಳನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ತೈಲ ಆಧಾರಿತ ಆಹಾರಗಳನ್ನು ಕಡಿಮೆ ಮಾಡುವುದು, ಮದ್ಯಪಾನ ಮತ್ತು ಧೂಮಪಾನವನ್ನು ತ್ಯಜಿಸುವುದರಿಂದ ಹತ್ತು ವರ್ಷಗಳವರೆಗೆ ಹೃದಯವನ್ನು ನೋಡಿಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಒತ್ತಡವನ್ನು ಕಡಿಮೆ ಮಾಡಲು ಧ್ಯಾನ ಕೂಡ ಉತ್ತಮ. ಯೋಗ ಮುಂತಾದವುಗಳನ್ನು ಅಭ್ಯಾಸ ಮಾಡಲು ತಜ್ಞರು ಸೂಚಿಸುತ್ತಾರೆ.

ಆರೋಗ್ಯ ಲೇಖನಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ