AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದ್ರೋಗದ ಅಪಾಯದಿಂದ ಪಾರಾಗಲು ಈ ಒಂದು ಅಭ್ಯಾಸ ಬದಲಾಯಿಸಿಕೊಳ್ಳಿ!

Heart Health Tips: ಬಿಪಿ, ಡಯಾಬಿಟಿಸ್, ಹೃದಯಾಘಾತ ಇವೆಲ್ಲವೂ ಶ್ರೀಮಂತರ ಅಥವಾ ಅನುಕೂಲಸ್ಥರಿಗೆ ಬರುವ ರೋಗ ಎಂಬ ನಂಬಿಕೆ ಹಲವರಲ್ಲಿತ್ತು. ಆದರೆ, ಈ ಯಾವ ರೋಗಗಳೂ ಯಾರನ್ನೂ ಹೇಳಿಕೇಳಿ ಬರುವಂಥದ್ದಲ್ಲ. ನಾವು ಈ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸಿದರೆ ಮಾತ್ರ ಇವುಗಳನ್ನು ದೂರ ಇಡಲು ಸಾಧ್ಯ. ಆದರೆ, ಕೆಲವೊಮ್ಮೆ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ರೂಢಿಸಿಕೊಳ್ಳುವ ಕೆಲವು ಅಭ್ಯಾಸಗಳಿಂದಾಗಿ ನಾವೇ ಕೆಲವು ಆರೋಗ್ಯ ಸಮಸ್ಯೆಗಳನ್ನು ಆಹ್ವಾನಿಸಿಕೊಳ್ಳುತ್ತೇವೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬೇಕೆಂದರೆ ನಿಮ್ಮ ಒಂದು ಅಭ್ಯಾಸದಲ್ಲಿ ಬದಲಾವಣೆ ಮಾಡಿಕೊಳ್ಳಲೇಬೇಕು. ಯಾವುದು ಅದು?

ಹೃದ್ರೋಗದ ಅಪಾಯದಿಂದ ಪಾರಾಗಲು ಈ ಒಂದು ಅಭ್ಯಾಸ ಬದಲಾಯಿಸಿಕೊಳ್ಳಿ!
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on: Feb 02, 2024 | 11:40 AM

Share

ಇತ್ತೀಚೆಗೆ ಹೃದ್ರೋಗವೆಂಬುದು (Heart Disease) ಸಾಮಾನ್ಯವಾಗಿಬಿಟ್ಟಿದೆ. ಇದರಿಂದಲೇ ಸಣ್ಣಪುಟ್ಟ ಎದೆನೋವು ಬಂದರೂ ಜನರು ಆತಂಕದಿಂದ ಹೃದ್ರೋಗತಜ್ಞರನ್ನು ಭೇಟಿಯಾಗುತ್ತಿದ್ದಾರೆ. ಕಳೆದ ಐದಾರು ವರ್ಷಗಳಿಂದ ಹೃದ್ರೋಗತಜ್ಞರನ್ನು ಭೇಟಿಯಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಜಾಗತಿಕವಾಗಿ ಪ್ರತಿ ವರ್ಷ ಅತಿ ಹೆಚ್ಚು ಸಾವುಗಳಿಗೆ ಹೃದ್ರೋಗ ಮುಖ್ಯ ಕಾರಣವಾಗಿದೆ. ಪ್ರಮುಖ ರೋಗಲಕ್ಷಣಗಳನ್ನು ಹೊಂದಿರುವ ಈ ಆರೋಗ್ಯ ಸಮಸ್ಯೆ (Health Problem) ಮಾರಣಾಂತಿಕವಾಗಿರುತ್ತದೆ. ಹಾಗಾದರೆ, ಹೃದ್ರೋಗ ಬಾರದಂತೆ ತಡೆಯಲು ನಾವು ಏನು ಮಾಡಬೇಕು?

ನಮ್ಮ ಆಹಾರ ಮತ್ತು ಜೀವನಶೈಲಿಯ ಆಯ್ಕೆಗಳ ಮೇಲೆ ಹೃದ್ರೋಗವನ್ನು ತಡೆಗಟ್ಟುವುದು ಕೇಂದ್ರೀಕೃತವಾಗಿರುತ್ತದೆ. ಹೃದಯಾಘಾತ, ಪಾರ್ಶ್ವವಾಯು ಹೀಗೆ ಹಲವಾರು ರೋಗಗಳಿಗೆ ನಮ್ಮ ಜೀವನಶೈಲಿಯೇ ಮುಖ್ಯ ಕಾರಣವಾಗಿರುತ್ತದೆ. ಕುಟುಂಬದ ಇತಿಹಾಸ (ಹೆರಿಡಿಟಿ)ದಿಂದ ಧೂಮಪಾನದವರೆಗೆ, ಜೀವನಶೈಲಿಯಿಂದ ಸ್ಯಾಚುರೇಟೆಡ್ ಮತ್ತು ಟ್ರಾನ್ಸ್ ಕೊಬ್ಬುಗಳ ಅತಿಯಾದ ಸೇವನೆಯವರೆಗೆ ಹಲವು ಅಂಶಗಳು ಇದಕ್ಕೆ ಕಾರಣವಾಗುತ್ತವೆ. ಆದರೆ ಹೃದ್ರೋಗತಜ್ಞರ ಪ್ರಕಾರ, ಕೇವಲ ಒಂದು ಸರಳವಾದ ಆಹಾರದ ಬದಲಾವಣೆಯಿಂದ ನಿಮ್ಮ ಆರೋಗ್ಯದಲ್ಲಿ ಬಹಳ ವ್ಯತ್ಯಾಸಗಳನ್ನು ನೋಡಬಹುದು.

ಇದನ್ನೂ ಓದಿ: ಚಳಿಗಾಲದಲ್ಲಿ ಹೃದಯಾಘಾತದ ಅಪಾಯದಿಂದ ಪಾರಾಗುವುದು ಹೇಗೆ?

ಸಂಶೋಧನೆಯ ಪ್ರಕಾರ, ತಿನ್ನುವ ಆಹಾರದ ಪ್ರಕಾರಗಳನ್ನು ಬದಲಾಯಿಸುವುದು ಮಾತ್ರವಲ್ಲದೆ ಊಟದ ಸಮಯವನ್ನು ಗಮನದಲ್ಲಿಟ್ಟುಕೊಳ್ಳುವುದು ನಮ್ಮ ಆರೋಗ್ಯದಲ್ಲಿ ಬಹಳ ಬದಲಾವಣೆಯನ್ನು ಉಂಟುಮಾಡುತ್ತದೆ. ಹೃದ್ರೋಗ ತಜ್ಞರ ಪ್ರಕಾರ, ದಿನವೂ ಬೇಗ ಊಟ ಮಾಡುವುದರಿಂದ ಹೃದ್ರೋಗದ ಅಪಾಯವನ್ನು ತಗ್ಗಿಸಬಹುದು. ಹೃದಯರಕ್ತನಾಳದ ಸಮಸ್ಯೆಗಳ ತಡೆಗಟ್ಟುವಿಕೆಯಲ್ಲಿ ಆಹಾರವು ಮಹತ್ವದ ಪಾತ್ರವನ್ನು ಹೊಂದಿದೆ ಎಂದು ವೈದ್ಯರು ಹೇಳುತ್ತಾರೆ.

2023ರ ಡಿಸೆಂಬರ್ ತಿಂಗಳಿಂದ ವಿಜ್ಞಾನಿಗಳು 1,00,000ಕ್ಕೂ ಹೆಚ್ಚು ಜನರ ಡೇಟಾವನ್ನು ವಿಶ್ಲೇಷಿಸಿದ್ದಾರೆ. ರಾತ್ರಿ ತಡವಾಗಿ ತಿನ್ನುವುದು, ಬೆಳಗಿನ ತಿಂಡಿ ಎರಡೂ ಹೃದಯದ ಕಾಯಿಲೆಗಳ ಹೆಚ್ಚಿನ ಅಪಾಯದೊಂದಿಗೆ ಸಂಬಂಧಿಸಿದೆ ಎಂದು ಕಂಡುಹಿಡಿಯಲಾಗಿದೆ. ಆಹಾರ ಸೇವನೆಯಲ್ಲಿ ಒಂದು ಗಂಟೆಯ ವಿಳಂಬವೂ ಸಹ ಹೃದಯರಕ್ತನಾಳದ ಬಿಕ್ಕಟ್ಟಿನಿಂದ ಬಳಲುವ ಸಾಧ್ಯತೆಯನ್ನು ಶೇ. 6ರಷ್ಟು ಹೆಚ್ಚಿಸಬಹುದು ಎಂದು ಸಂಶೋಧನೆಗಳು ಸೂಚಿಸುತ್ತವೆ. ಇದರರ್ಥ ಬೆಳಿಗ್ಗೆ 9 ಗಂಟೆಗೆ ಉಪಾಹಾರ ಸೇವಿಸುವ ಜನರು 8 ಗಂಟೆಗೆ ತಿನ್ನುವ ಜನರಿಗಿಂತ ಶೇ. 6ರಷ್ಟು ಹೆಚ್ಚು ಹೃದಯದ ಕಾಯಿಲೆಯಿಂದ ಬಳಲುವ ಅಪಾಯ ಹೊಂದಿರುತ್ತಾರೆ.

ಇದನ್ನೂ ಓದಿ: ಮಕ್ಕಳಲ್ಲಿ ಹೃದಯಾಘಾತ ಉಂಟಾಗುವ ಲಕ್ಷಣಗಳೇನು?

ರಾತ್ರಿ ತಡವಾಗಿ ಊಟ ಮಾಡುವುದರಿಂದ ಕೂಡ ಹೃದ್ರೋಗದ ಅಪಾಯ ಹೆಚ್ಚಾಗುತ್ತದೆ. ರಾತ್ರಿ 8 ಗಂಟೆಯ ನಂತರ ಊಟ ಮಾಡುವುದರಿಂದ ಸ್ಟ್ರೋಕ್‌ನಿಂದ ಬಳಲುವ ಅಪಾಯ ಶೇ. 28ರಷ್ಟು ಹೆಚ್ಚಾಗುತ್ತದೆ. ಹೀಗಾಗಿ, ರಾತ್ರಿ 8 ಗಂಟೆಗೂ ಮೊದಲು ತಿನ್ನುವುದು ಉತ್ತಮ. ತಿನ್ನುವುದರ ನಡುವೆ ಹೆಚ್ಚು ವಿರಾಮಗಳನ್ನು ತೆಗೆದುಕೊಳ್ಳುವುದು ನಮ್ಮ ಆರೋಗ್ಯಕ್ಕೆ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ದಿನದ ಕೊನೆಯ ಊಟ ಮತ್ತು ಮರುದಿನದ ಮೊದಲ ತಿಂಡಿಯ ನಡುವೆ ಹೆಚ್ಚು ಸಮಯ ಉಪವಾಸ ಮಾಡಿದರೆ ಅದು ಉತ್ತಮವಾಗಿರುತ್ತದೆ. ಇದು ಪಾರ್ಶ್ವವಾಯು ಅಪಾಯವನ್ನು ಮತ್ತಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರರ್ಥ ರಾತ್ರಿಯಲ್ಲಿ ದೀರ್ಘಾವಧಿಯ ಉಪವಾಸವು ಹೃದಯರಕ್ತನಾಳದ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಆದ್ದರಿಂದ, ದಿನವೂ ಸಾಧ್ಯವಾದಷ್ಟು ಬೇಗ ಊಟವನ್ನು ಮಾಡಬೇಕು ಮತ್ತು ದೀರ್ಘಾವಧಿಯಲ್ಲಿ ಉತ್ತಮ ಹೃದಯದ ಆರೋಗ್ಯಕ್ಕಾಗಿ ಸಮಯಕ್ಕೆ ಸರಿಯಾಗಿ ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ