AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heat wave and heart attack: ಹೀಟ್ ಸ್ಟ್ರೋಕ್ ನಿಂದ ಹೃದಯಾಘಾತವನ್ನು ತಡೆಯುವುದು ಹೇಗೆ? ಇಲ್ಲಿದೆ ವೈದ್ಯರ ಸಲಹೆ

ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿ ಅನಾರೋಗ್ಯಗಳ ಪೈಕಿ ಹೀಟ್ ಸ್ಟ್ರೋಕ್ ಕೂಡ ಒಂದು. ಇದು ಹೃದಯಾಘಾತಕ್ಕೂ ಕಾರಣವಾಗಬಹುದು ಹಾಗಾಗಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ. ಅಲ್ಲದೆ ಇದನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆದುಕೊಂಡರೆ, ನಿಯಂತ್ರಿಸಬಹುದು. ಇಲ್ಲವಾದರೆ ಜೀವಕ್ಕೇ ಕುತ್ತು ತರುವ ಸಾಧ್ಯತೆಗಳಿರುತ್ತದೆ.

Heat wave and heart attack: ಹೀಟ್ ಸ್ಟ್ರೋಕ್ ನಿಂದ ಹೃದಯಾಘಾತವನ್ನು ತಡೆಯುವುದು ಹೇಗೆ? ಇಲ್ಲಿದೆ ವೈದ್ಯರ ಸಲಹೆ
Heat wave and heart attack
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Apr 30, 2024 | 8:20 PM

ಬೇಸಿಗೆ ಕಾಲದಲ್ಲಿ ಹೆಚ್ಚುತ್ತಿರುವ ತಾಪಮಾನದಿಂದಾಗಿ ಜನ ತತ್ತರಿಸುವಂತಾಗಿದೆ. ಹವಾಮಾನ ಬದಲಾವಣೆಯಾಗಿ ಬಿಸಿ ಗಾಳಿ ಹೆಚ್ಚುತ್ತಿದೆ. ಇದರಿಂದ ಅನೇಕ ರೀತಿಯ ರೋಗಗಳು ಜನರನ್ನು ಹೈರಾಣವಾಗಿಸಿದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿ ಅನಾರೋಗ್ಯಗಳ ಪೈಕಿ ಹೀಟ್ ಸ್ಟ್ರೋಕ್ ಕೂಡ ಒಂದು. ಇದು ಹೃದಯಾಘಾತಕ್ಕೂ ಕಾರಣವಾಗಬಹುದು ಹಾಗಾಗಿ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಮುಖ್ಯ. ಅಲ್ಲದೆ ಇದನ್ನು ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಪಡೆದುಕೊಂಡರೆ, ನಿಯಂತ್ರಿಸಬಹುದು. ಇಲ್ಲವಾದರೆ ಜೀವಕ್ಕೇ ಕುತ್ತು ತರುವ ಸಾಧ್ಯತೆಗಳಿರುತ್ತದೆ.

ಯಾವುದೇ ಪ್ರದೇಶದಲ್ಲಿ ತಾಪಮಾನವು 40 ಡಿಗ್ರಿಗಳಿಗಿಂತ ಹೆಚ್ಚಿದ್ದರೆ, ಹೀಟ್ ಸ್ಟ್ರೋಕ್ ಅಪಾಯವಿರುತ್ತದೆ. ಸಾಮಾನ್ಯವಾಗಿ ದೇಹ ಅತಿಯಾಗಿ ನಿರ್ಜಲೀಕರಣಗೊಂಡಾಗ, ಹೆಚ್ಚು ಮಸಾಲೆಯುಕ್ತ ಆಹಾರ ಸೇವನೆ ಮಾಡಿದಾಗ, ಮದ್ಯಪಾನ, ದ್ರವ ಆಹಾರಗಳ ಕೊರತೆ ಉಂಟಾದಾಗ, ಹೆಚ್ಚು ದಪ್ಪನೆಯ ಬಟ್ಟೆ ಧರಿಸುವುದರಿಂದ ದೇಹಕ್ಕೆ ಅಗತ್ಯವಿರುವಷ್ಟು ಗಾಳಿ ಸಿಗುವುದಿಲ್ಲ. ಇದರಿಂದ ಇನ್ನಷ್ಟು ಉಷ್ಣತೆ ಜಾಸ್ತಿಯಾಗುತ್ತದೆ. ಈ ಎಲ್ಲ ಕಾರಣಗಳಿಂದ ಹೀಟ್ ಸ್ಟ್ರೋಕ್ ಉಂಟಾಗುತ್ತದೆ. ಈ ರೀತಿ ಆಗುವುದನ್ನು ತಪ್ಪಿಸಲು ಮೊದಲು ಇದರ ರೋಗಲಕ್ಷಣಗಳನ್ನು ತಿಳಿದುಕೊಳ್ಳುವುದು ಮುಖ್ಯವಾಗುತ್ತದೆ.

ಹೀಟ್ ಸ್ಟ್ರೋಕ್ ರೋಗಲಕ್ಷಣಗಳು ಯಾವುವು?

ದಣಿವು:

ಇದು ಹೃದಯಾಘಾತದ ಆರಂಭಿಕ ಲಕ್ಷಣವಾಗಿರಬಹುದು. ಕೆಲವು ಜನರು ಬೇಸಿಗೆಯಲ್ಲಿ ಬೇಗನೆ ಆಯಾಸಗೊಳ್ಳುತ್ತಾರೆ. ಇದು ಹೃದಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಬೇಸಿಗೆಯಲ್ಲಿ ನೀವು ಇದ್ದಕ್ಕಿದ್ದಂತೆ ಮೂರ್ಛೆ ಹೋದರೆ, ಅದು ಹೃದಯಾಘಾತದ ಸಂಕೇತವೂ ಆಗಿರಬಹುದು. ಆದ್ದರಿಂದ ಅದನ್ನು ನಿರ್ಲಕ್ಷಿಸಬಾರದು.

ತಲೆನೋವು:

ಸೂರ್ಯನ ಪ್ರಕಾಶಮಾನವಾದ ಕಿರಣಗಳಿಂದ ನಿಮಗೆ ನಿರಂತರ ತಲೆನೋವು ಬರುತ್ತಿದ್ದರೆ ಇದು ನಿಮ್ಮ ಬಿಪಿಯನ್ನು ಹೆಚ್ಚು ಮಾಡುವ ಅಪಾಯವಿದೆ. ಹಾಗಾಗಿ ಸಮಯಕ್ಕೆ ಸರಿಯಾಗಿ ಇದಕ್ಕೆ ಚಿಕಿತ್ಸೆ ಮಾಡುವುದು ಅಗತ್ಯ, ಇಲ್ಲವಾದಲ್ಲಿ ಹೃದಯಾಘಾತ ಸಂಭವಿಸಬಹುದು. ಹೆಚ್ಚುತ್ತಿರುವ ತಾಪಮಾನದಲ್ಲಿ, ದೇಹದಲ್ಲಿ ನೀರಿನ ಕೊರತೆ ಉಂಟಾಗಬಹುದು. ಇದು ಕೂಡ ಹೃದ್ರೋಗಕ್ಕೆ ಕಾರಣವಾಗಬಹುದು.

ಹೀಟ್ ಸ್ಟ್ರೋಕ್ ನಿಂದ ಹೃದಯಾಘಾತ ಹೇಗೆ ಸಂಭವಿಸುತ್ತದೆ?

ಡಾ। ಅಜಿತ್ ಜೈನ್ ಹೇಳುವ ಪ್ರಕಾರ ಹೀಟ್ ಸ್ಟ್ರೋಕ್ ನಿಂದ ಹೃದಯಾಘಾತ ಸಂಭವಿಸಬಹುದು. ಏಕೆಂದರೆ ಹೆಚ್ಚುತ್ತಿರುವ ಶಾಖಕ್ಕೆ ಅನುಗುಣವಾಗಿ ದೇಹವು ಕೂಡ ತಾಪಮಾನ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತದೆ. ಈ ಕಾರಣದಿಂದಾಗಿ ಹೃದಯವು ಹೆಚ್ಚು ರಕ್ತವನ್ನು ಪರಿಚಲನೆ ಮಾಡಬೇಕಾಗುತ್ತದೆ. ಈ ಸಮಯದಲ್ಲಿ ಹೃದಯದ ಮೇಲೆ ಒತ್ತಡವಿರುತ್ತದೆ. ಇದರಿಂದಾಗಿ ಹೃದಯ ಬಡಿತ ವೇಗವಾಗುತ್ತದೆ. ಈ ಹಠಾತ್ ಬೆಳವಣಿಗೆಯಿಂದ ಹೃದಯಾಘಾತ ಸಂಭವಿಸಬಹುದು.

ಇದನ್ನೂ ಓದಿ: ಕಣ್ಣಿನ ಸಮಸ್ಯೆಗೆ ರಾಮಬಾಣ ಗೋಡಂಬಿ, ಇದನ್ನು ಪ್ರತಿದಿನ ತಿನ್ನುವುದರಿಂದ ಆರೋಗ್ಯ ಲಾಭ

ಅಪಾಯದಲ್ಲಿರುವವರು ಯಾರು?

ಗರ್ಭಿಣಿಯರು, ವೃದ್ಧರು ಮತ್ತು ಈಗಾಗಲೇ ಹೃದ್ರೋಗ ಸಮಸ್ಯೆ ಇರುವವರು ಹೆಚ್ಚು ಜಾಗರೂಕರಾಗಿರಬೇಕು ಎಂದು ಡಾ. ಜೈನ್ ಹೇಳಿದ್ದು ತೀವ್ರ ಬಿಸಿಲಿರುವ ಸಂದರ್ಭದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ ಎಂದಿದ್ದಾರೆ. ಅಗತ್ಯವಾಗಿ ಹೊರಗೆ ಹೋಗ ಬೇಕು ಎನ್ನುವವರು ಈ ವಿಧಾನಗಳನ್ನು ಅನುಸರಿಸಿ.

  • ದಿನಕ್ಕೆ 7- 8 ಲೋಟ ನೀರು ಕುಡಿಯಿರಿ.
  • ನಿಂಬೆ ರಸದಿಂದ ಪಾನಕ ಮಾಡಿ ಕುಡಿಯಿರಿ.
  • ಬೆಳಗಿನ ಉಪಾಹಾರವನ್ನು ತಪ್ಪಿಸಬೇಡಿ.
  • ಹಸಿರು ತರಕಾರಿ ಮತ್ತು ಹಣ್ಣುಗಳನ್ನು ಸೇವಿಸಿ.
  • ಸಡಿಲವಾಗಿರುವ ಬಟ್ಟೆಗಳನ್ನು ಧರಿಸಿ.
  • ಮೇಲೆ ತಿಳಿಸಿರುವ ರೋಗ ಲಕ್ಷ್ಮಣ ಕಂಡುಬಂದರೆ ತಕ್ಷಣ ವೈದ್ಯರ ಬಳಿಗೆ ಹೋಗಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು