AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eye Exercises: ಕಣ್ಣಿನ ಆರೋಗ್ಯಕ್ಕಾಗಿ ಈ ವ್ಯಾಯಾಮಗಳನ್ನು ಫಾಲೋ ಮಾಡಿ

ಕಣ್ಣುಗಳ ಒತ್ತಡ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಮತ್ತು ದೃಷ್ಟಿ ಹೆಚ್ಚಿಸಲು ಕೆಲವು ಕಣ್ಣಿನ ಸ್ನಾಯು ವ್ಯಾಯಾಮಗಳು ಇಲ್ಲಿವೆ. ಇವುಗಳನ್ನು ನೀವು ಮನೆಯಲ್ಲಿಯೇ ಸುಲಭವಾಗಿ ಪ್ರಯತ್ನಿಸಬಹುದು.

Eye Exercises: ಕಣ್ಣಿನ ಆರೋಗ್ಯಕ್ಕಾಗಿ ಈ ವ್ಯಾಯಾಮಗಳನ್ನು ಫಾಲೋ ಮಾಡಿ
ಕಣ್ಣಿನ ಆರೋಗ್ಯ
Follow us
ಅಕ್ಷತಾ ವರ್ಕಾಡಿ
|

Updated on:Mar 01, 2023 | 12:34 PM

ಹೆಚ್ಚಿನ ಜನರು ಸಾಮಾನ್ಯವಾಗಿ ಉತ್ತಮ ಮತ್ತು ಆರೋಗ್ಯಕರ ಜೀವನಶೈಲಿಗಾಗಿ ವ್ಯಾಯಾಮದ ಮೂಲಕ ದೇಹವನ್ನು ದಂಡಿಸಲು ಮುಂದಾಗುತ್ತಾರೆ. ಆದರೆ ಉತ್ತಮ ಕಣ್ಣಿನ ದೃಷ್ಟಿಗಾಗಿ ಕಣ್ಣಿನ ವ್ಯಾಯಾಮಗಳು ಇದೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಕಣ್ಣುಗಳನ್ನು ಆರೋಗ್ಯಗೊಳಿಸಲು ಈ ಕೆಳಗಿನ ವ್ಯಾಯಾಮಗಳನ್ನು ನಿಮ್ಮ ದೈನಂದಿನ ಜೀವನದಲ್ಲಿ ರೂಢಿಸಿಕೊಳ್ಳಿ. ಕಣ್ಣುಗಳ ಒತ್ತಡ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡಲು ಮತ್ತು ದೃಷ್ಟಿ ಹೆಚ್ಚಿಸಲು ಕೆಲವು ಕಣ್ಣಿನ ಸ್ನಾಯು ವ್ಯಾಯಾಮಗಳು ಇಲ್ಲಿವೆ. ಇವುಗಳನ್ನು ನೀವು ಮನೆಯಲ್ಲಿಯೇ ಸುಲಭವಾಗಿ ಪ್ರಯತ್ನಿಸಬಹುದು.

ತ್ರಾಟಕ ಕರ್ಮ ಅಥವಾ ಫೋಕಸಿಂಗ್:

ತ್ರಾಟಕ ಕರ್ಮವು ಧ್ಯಾನದಂತಹ ಪ್ರಕ್ರಿಯೆಯಾಗಿದ್ದು, ಕೆಲವು ನಿಮಿಷಗಳ ವರೆಗೆ ನಿಮ್ಮ ಕಣ್ಣುಗಳಲ್ಲಿ ನೀರು ಬರುವವರೆಗೆ ಹಾಗೆಯೇ ಒಂದೇ ಕಡೆ ಗುರಿಯಾಗಿಸಿ. ಒಂದೇ ಕಡೆ ಕಣ್ಣು ಮಿಟುಕಿಸದೆ ಒಂದೇ ಕಡೆ ನೋಡುವುದರಿಂದ ಕಣ್ಣಿನಲ್ಲಿ ನೀರು ಬರಲು ಪ್ರಾರಂಭವಾಗುತ್ತದೆ. ಇದು ನಿಮ್ಮ ಕಣ್ಣುಗಳ ಸ್ನಾಯುಗಳಿಗೆ ಉತ್ತಮ ವ್ಯಾಯಾಮವಾಗಿದೆ.

ಪೆನ್ಸಿಲ್ ಪುಷ್-ಅಪ್‌ಗಳು:

ಕಣ್ಣಿನ ಉತ್ತಮ ಆರೋಗ್ಯಕ್ಕಾಗಿ ಪೆನ್ಸಿಲ್ ಪುಷ್ಅಪ್ಗಳನ್ನು ಉತ್ತಮ ವ್ಯಾಯಾಮವೆಂದು ಪರಿಗಣಿಸಲಾಗುತ್ತದೆ. ಇದು ಕಣ್ಣಿನ ಸ್ನಾಯುಗಳನ್ನು ಬಲಪಡಿಸುತ್ತದೆ. ಈ ಮೂಲಕ ಪ್ರೆಸ್ಬಿಯೋಪಿಯಾವನ್ನು ತಡೆಯಬಹುದು. ಇದಕ್ಕಾಗಿ, ನಿಮ್ಮ ಕಣ್ಣುಗಳ ಮುಂದೆ ತೋಳಿನ ದೂರದಲ್ಲಿ ಪೆನ್ ಅಥವಾ ಪೆನ್ಸಿಲ್ ಹಿಡಿದುಕೊಳ್ಳಿ. ನಂತರ ಎರಡು ಕಣ್ಣುಗಳಿಂದ ಪೆನ್ಸಿಲ್ ತುದಿಯನ್ನು ನೋಡಿ. ನಿಧಾನವಾಗಿ ಅದನ್ನು ನಿಮ್ಮ ಕಣ್ಣುಗಳ ಕಡೆಗೆ ತನ್ನಿ. ಪೆನ್ ಅಥವಾ ಪೆನ್ಸಿಲ್ ನಿಬ್ ಎರಡೆರಡು ಕಾಣುವ ತನ ನೀವು ಅದರ ತುದಿಯ ಮೇಲೆ ಗಮನ ಕೇಂದ್ರೀಕರಿಸಿ. ತುದಿ ವಿಭಜನೆಯಾದ ತಕ್ಷಣ, ಅದನ್ನು ಮತ್ತೆ ನಿಮ್ಮ ಕಣ್ಣಿನ ಮುಂದೆ ತನ್ನಿ. ಈ ರೀತಿಯ ಅನುಕ್ರಮವನ್ನು ಪುನರಾವರ್ತಿಸಿ. ಈ ಅನುಕ್ರಮವನ್ನು ಒಂದು ಸಮಯದಲ್ಲಿ 10 ರಿಂದ 15 ಬಾರಿ ಪುನರಾವರ್ತಿಸಿ.

ಬ್ರಾಕ್ ಸ್ಟ್ರಿಂಗ್:

ಬ್ರಾಕ್ ಸ್ಟ್ರಿಂಗ್ ಒಂದು ಜನಪ್ರಿಯ ದೃಷ್ಟಿ ಚಿಕಿತ್ಸೆಯಾಗಿದ್ದು ಇದನ್ನು ದೃಶ್ಯ ವ್ಯವಸ್ಥೆಯನ್ನು ತರಬೇತಿ ಮಾಡಲು ಬಳಸಬಹುದು. ಒಂದು ಕಿಟಿಕಿಗೆ ಹಗ್ಗವನ್ನು ಕಟ್ಟಿ ನಂತರ ಹಗ್ಗಕ್ಕೆ ಮೂರು ಮಣಿಗಳನ್ನು ಪೋಣಿಸಿ. ಒಂದೊಂದು ಮಣಿಯನ್ನು 2-5 ಅಡಿ ದೂರದಲ್ಲಿರಿಸಿ. ನಂತರ ಹಗ್ಗವನ್ನು ಮೂಗಿನಿಂದ 6 ಇಂಚು ದೂರದಲ್ಲಿರಿಸಿ. ನಂತರ ಮೂರು ಮಣಿಗಳನ್ನೇ ದೃಷ್ಟಿಸಿ ನೋಡಿ. ಇದನ್ನೇ ಹಲವು ಬಾರಿ ಪುನಾರಾವರ್ತಿಸಿ.

ಇದನ್ನೂ ಓದಿ: ಒಣ ಕಣ್ಣಿನ ಸಮಸ್ಯೆಗೆ ಇಲ್ಲಿದೆ ಆರ್ಯುವೇದದ ಪರಿಹಾರ

ಕಣ್ಣು ಗುಡ್ಡೆಗಳನ್ನು ತಿರುಗಿಸುವುದು:

ನೀವು ಮನೆಯಲ್ಲಿ ಸುಮ್ಮನೆ ಕುಳಿತಿರುವಾಗ, ತಲೆಯನ್ನು ಸ್ಥಿರವಾಗಿ ಇಟ್ಟುಕೊಂಡು ಕಣ್ಣ ಗುಡ್ಡೆಗಳನ್ನು ಎಡದಿಂದ ಬಲಕ್ಕೆ, ಬಲದಿಂದ ಎಡಕ್ಕೆ ತಿರುಗಿಸುತ್ತಾ ಇರಿ. ಇದು ನಿಮ್ಮ ಕಣ್ಣುಗಳಿಗೆ ಸಾಕಷ್ಟು ಆರಾಮವನ್ನು ನೀಡುತ್ತದೆ.

ಡಿಸ್ಲೆಕ್ಸಿಯಾ, ಹೆಚ್ಚು ಮಿಟುಕಿಸುವುದು, ಕಣ್ಣುಜ್ಜುವುದು, ಕಣ್ಣಿನ ಸೆಳೆತ ಅಥವಾ ಪಾರ್ಶ್ವವಾಯು ಕಣ್ಣಿನ ಸ್ನಾಯುಗಳು, ಇತ್ಯಾದಿಗಳಂತಹ ಕೆಲವು ಕಣ್ಣಿನ ಸಮಸ್ಯೆಯನ್ನು ಹೊಂದಿರುವವರು ಈ ಮೇಲಿನ ವ್ಯಾಯಾಮವನ್ನು ಮಾಡುವ ಮುನ್ನ ನಿಮ್ಮ ಹತ್ತಿರದ ನೇತ್ರ ತಜ್ಞರನ್ನು ಸಂಪರ್ಕಿಸುವುದು ಉತ್ತಮ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:31 pm, Wed, 1 March 23

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ