AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kidney disorders: ಮೂತ್ರಪಿಂಡದ ಕಾಯಿಲೆಗಳ ಸಾಮಾನ್ಯ ವಿಧಗಳ ಕುರಿತು ಮಾಹಿತಿ ಇಲ್ಲಿವೆ

ಇತ್ತೀಚಿನ ಒತ್ತಡದ ಜೀವನಶೈಲಿ, ಕಳಪೆ ಆಹಾರ ಪದ್ದತಿಗಳು ಕಿಡ್ನಿ ಅಸ್ವಸ್ಥತೆಗೆ ಕಾರಣವಾಗುತ್ತದೆ. ಪ್ರಮುಖ ಮೂತ್ರಪಿಂಡ ಕಾಯಿಲೆಗಳ ಕುರಿತು ಮಾಹಿತಿ ಇಲ್ಲಿದೆ.

Kidney disorders: ಮೂತ್ರಪಿಂಡದ ಕಾಯಿಲೆಗಳ ಸಾಮಾನ್ಯ ವಿಧಗಳ ಕುರಿತು ಮಾಹಿತಿ ಇಲ್ಲಿವೆ
Kidney disordersImage Credit source: HealthHub
ಅಕ್ಷತಾ ವರ್ಕಾಡಿ
|

Updated on: Jun 25, 2023 | 4:54 PM

Share

ಮೂತ್ರಪಿಂಡಗಳು ಮಾನವ ದೇಹದಲ್ಲಿನ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ದೇಹದಲ್ಲಿನ ತ್ಯಾಜ ಹಾಗೂ ದ್ರವಗಳನ್ನು ಹೊರ ಹಾಕಲು ಮತ್ತು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮೂತ್ರಪಿಂಡಗಳಿಂದ ಉತ್ಪತ್ತಿಯಾಗುವ ಹಾರ್ಮೋನುಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಮೂತ್ರಪಿಂಡಗಳು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮವನ್ನುಂಟು ಮಾಡುವುದರಿಂದ ಅದರ ಆರೋಗ್ಯವನ್ನು ಕಾಪಾಡುವುದು ಅತ್ಯಂತ ಮುಖ್ಯವಾಗಿರುತ್ತದೆ. ಇತ್ತೀಚಿನ ಒತ್ತಡದ ಜೀವನಶೈಲಿ, ಕಳಪೆ ಆಹಾರ ಪದ್ದತಿಗಳು ಕಿಡ್ನಿ ಅಸ್ವಸ್ಥತೆಗೆ ಕಾರಣವಾಗುತ್ತದೆ. ಪ್ರಮುಖ ಮೂತ್ರಪಿಂಡ ಕಾಯಿಲೆಗಳ ಕುರಿತು ಮಾಹಿತಿ ಇಲ್ಲಿದೆ.

ದೀರ್ಘಕಾಲದ ಮೂತ್ರಪಿಂಡ ಕಾಯಿಲೆ:

ಮೂತ್ರಪಿಂಡದ ಕಾಯಿಲೆಯ ಸಾಮಾನ್ಯ ರೂಪಗಳಲ್ಲಿ ಇದು ಒಂದಾಗಿದೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆಯು ಅಧಿಕ ರಕ್ತದೊತ್ತಡ ಅಥವಾ ಮಧುಮೇಹದಿಂದ ಉಂಟಾಗುತ್ತದೆ, ಈ ಎರಡೂ ಕಾಯಿಲೆಗಳು ಮೂತ್ರಪಿಂಡದಲ್ಲಿನ ರಕ್ತನಾಳಗಳಿಗೆ ಹಾನಿ ಮಾಡುತ್ತದೆ ಮತ್ತು ರಕ್ತವನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆಯನ್ನು ಅಡ್ಡಿಪಡಿಸುತ್ತದೆ. ಈ ರೋಗವು ಶುದ್ಧೀಕರಣವನ್ನು ನಿಲ್ಲಿಸುತ್ತದೆ ಮತ್ತು ಕಾಲಾನಂತರದಲ್ಲಿ, ಮೂತ್ರಪಿಂಡಗಳ ಸ್ಥಿತಿಯನ್ನು ಹದಗೆಡಿಸುತ್ತದೆ.

ಕಿಡ್ನಿ ಕಲ್ಲುಗಳು:

ಕಿಡ್ನಿ ಕಲ್ಲುಗಳು ಜನರು ಎದುರಿಸುವ ಸಾಮಾನ್ಯ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ರಕ್ತದಲ್ಲಿನ ಖನಿಜಗಳು ಮೂತ್ರಪಿಂಡಗಳಲ್ಲಿ ಸ್ಫಟಿಕೀಕರಣಗೊಂಡಾಗ ಕಲ್ಲುಗಳು ಉಂಟಾಗುತ್ತವೆ. ಕಲ್ಲುಗಳು ಸಾಮಾನ್ಯವಾಗಿ ನೋವಿನಿಂದ ಕೂಡಿರುತ್ತವೆ ಮತ್ತು ಮೂತ್ರದಲ್ಲಿ ರಕ್ತವನ್ನು ಉಂಟುಮಾಡುತ್ತವೆ ಆದರೆ ಇತರ ಮೂತ್ರಪಿಂಡದ ಕಾಯಿಲೆಗಳಂತೆ ಹಾನಿಕಾರಕವಲ್ಲ. ಮೂತ್ರ ವಿಸರ್ಜನೆಯ ಸಮಯದಲ್ಲಿ ಕಲ್ಲುಗಳು ಸಾಮಾನ್ಯವಾಗಿ ಹೊರಬರುತ್ತವೆ ಆದರೆ ತುಂಬಾ ನೋವಿನಿಂದ ಕೂಡಿರುತ್ತವೆ.

ಪಾಲಿಸಿಸ್ಟಿಕ್ ಕಿಡ್ನಿ ರೋಗ:

ಮೂತ್ರಪಿಂಡದಲ್ಲಿ ಅನೇಕ ಸಿಸ್ಟ್‌ಗಳು ರೂಪುಗೊಂಡಾಗ ಪಾಲಿಸಿಸ್ಟಿಕ್ ಕಿಡ್ನಿ ಕಾಯಿಲೆ ಉಂಟಾಗುತ್ತದೆ. ಇದು ಸಾಮಾನ್ಯ ಮೂತ್ರಪಿಂಡದ ಚೀಲಗಳಿಗಿಂತ ಭಿನ್ನವಾಗಿದೆ ಏಕೆಂದರೆ ಇದು ಆಕಾರದಲ್ಲಿ ಬದಲಾವಣೆಯನ್ನು ಉಂಟುಮಾಡಬಹುದು ಮತ್ತು ಅವುಗಳನ್ನು ದೊಡ್ಡದಾಗಿಸಬಹುದು. ಈ ರೋಗವು ಮೂತ್ರಪಿಂಡಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.

ಇದನ್ನೂ ಓದಿ: ವಿಟಲಿಗೋ ಎಂದರೇನು? ಅದರ ಲಕ್ಷಣಗಳು, ಕಾರಣಗಳು, ಚಿಕಿತ್ಸೆಯ ಬಗ್ಗೆ ಮಾಹಿತಿ ಇಲ್ಲಿದೆ

ಗ್ಲೋಮೆರುಲೋನೆಫ್ರಿಟಿಸ್:

ಗ್ಲೋಮೆರುಲೋನೆಫ್ರಿಟಿಸ್ ಮೂತ್ರಪಿಂಡಗಳಲ್ಲಿ ಗ್ಲೋಮೆರುಲಿ ಎಂದು ಕರೆಯಲ್ಪಡುವ ಸಣ್ಣ ರಕ್ತನಾಳಗಳು ಕೆಲವು ಸೋಂಕು ಅಥವಾ ಅಸ್ವಸ್ಥತೆಯಿಂದ ಉಬ್ಬಿಕೊಂಡಾಗ ಉಂಟಾಗುತ್ತದೆ. ಈ ಸಣ್ಣ ರಕ್ತನಾಳಗಳು ಮೂತ್ರಪಿಂಡಗಳ ಕಾರ್ಯನಿರ್ವಹಣೆಗೆ ಬಹಳ ಮುಖ್ಯ, ಏಕೆಂದರೆ ಅವು ರಕ್ತವನ್ನು ಫಿಲ್ಟರ್ ಮಾಡಿ ಮತ್ತು ಅದರಿಂದ ತ್ಯಾಜ್ಯವನ್ನು ತೆಗೆದುಹಾಕುತ್ತವೆ. ಈ ಅಸ್ವಸ್ಥತೆಯು ಮಾರಣಾಂತಿಕವಲ್ಲ ಗುಣಪಡಿಸಬಹುದಾಗಿದೆ.

ಯುಟಿಐ ಎಂದು ಕರೆಯಲ್ಪಡುವ ಮೂತ್ರನಾಳದ ಸೋಂಕುಗಳು:

ಮೂತ್ರಪಿಂಡದ ಮೂತ್ರಕೋಶ ಅಥವಾ ಮೂತ್ರನಾಳದಲ್ಲಿ ಉಂಟಾಗುವ ಬ್ಯಾಕ್ಟೀರಿಯಾದ ಸೋಂಕುಗಳು. ಈ ಸೋಂಕು ತುಂಬಾ ಗುಣಪಡಿಸಬಹುದಾದ ಮತ್ತು ಅಪಾಯಕಾರಿ ಅಲ್ಲ ಆದರೆ ಗಮನಿಸದೆ ಬಿಟ್ಟರೆ ಮತ್ತು ಸರಿಯಾಗಿ ಗುಣಪಡಿಸದಿದ್ದರೆ, ಇದು ಮೂತ್ರಪಿಂಡಗಳಿಗೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು ಮತ್ತು ಮೂತ್ರಪಿಂಡ ವೈಫಲ್ಯಕ್ಕೆ ಕಾರಣವಾಗಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?