AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ
Headache
TV9 Web
| Updated By: ನಯನಾ ರಾಜೀವ್|

Updated on: Aug 20, 2022 | 2:32 PM

Share

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ. ತುಂಬಾ ಬಿಸಿಲಿನಲ್ಲಿ ನಡೆದಾಗ, ನಿದ್ರೆ ಸರಿಯಾಗಿ ಮಾಡದಿದ್ದರೆ, ತೀವ್ರ ಒತ್ತಡಕ್ಕೆ ನೀವು ಒಳಗಾಗಿದ್ದರೆ ತಲೆನೋವು ಕಾಣಿಸಿಕೊಳ್ಳುತ್ತದೆ.

ಅವೆಲ್ಲವನ್ನು ಹೊರತುಪಡಿಸಿ, ಮೈಗ್ರೇನ್ ಸಮಸ್ಯೆಯಿದ್ದರೆ ಅಥವಾ ಮೆದುಳಿಗೆ ಸಂಬಂಧಿಸಿದ ಏನೇ ಸಮಸ್ಯೆಯಿದ್ದರೂ ತಲೆ ನೋವು ಆಗಾಗ ಬರುತ್ತದೆ.

ಆದರೆ ಸಹಜವಾಗಿ ಕಾಣಿಸಿಕೊಳ್ಳುವ ತಲೆನೋವನ್ನು ಮಾತ್ರಯಿಲ್ಲದೆ ಕಡಿಮೆ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಐಸ್‌ ಪ್ಯಾಕ್‌ ಐಸ್ ಕ್ಯೂಬ್​ಗಳನ್ನು ಬಟ್ಟೆಯಲ್ಲಿ ಸುತ್ತಿ ಮತ್ತು ಹಣೆಯ ಮೇಲೆ ನಿಧಾನವಾಗಿ ಒತ್ತಿರಿ. ಇದು ನಿಮಗೆ ನೋವಿನಿಂದ ಪರಿಹಾರವನ್ನು ನೀಡುತ್ತದೆ. ಸ್ವಲ್ಪ ಸಮಯದ ನಂತರ ನೀವು ಐಸ್ ಪ್ಯಾಕ್ ಅನ್ನು ಹಣೆಯ ಮೇಲೆ ಇಟ್ಟುಕೊಂಡು ಮಸಾಜ್‌ ರೀತಿ ಮಾಡಬಹುದು. ತಲೆನೋವನ್ನು ಗುಣಪಡಿಸಲು ಇದು ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ.

ನೆತ್ತಿಗೆ ಮಸಾಜ್ ಮಾಡಿ ನಿಮಗೆ ತಲೆನೋವು ಇದ್ದರೆ, ನೀವು ಯಾವುದೇ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿಕೊಳ್ಳಬಹುದು. ಇದು ನಿಮ್ಮ ನರಗಳಿಗೆ ಸಾಕಷ್ಟು ವಿಶ್ರಾಂತಿಯನ್ನು ನೀಡುತ್ತದೆ ಮತ್ತು ತಲೆನೋವಿನಿಂದ ಪರಿಹಾರ ಒದಗಿಸುತ್ತದೆ.

ಬಿಸಿ ಅಕ್ಕಿಯ ಶಾಖವನ್ನು ನೀಡಬಹುದು ಅಕ್ಕಿಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಒಂದು ಬಟ್ಟೆಯ ಚೀಲ ಅಥವಾ ಕಾಟನ್ ಬಟ್ಟೆಗೆ ಹಾಕಿ ಗಂಟು ಕಟ್ಟಿ, ಬಳಿಕ ಹಣೆಯ ಮೇಲೆ ನಿಧಾನವಾಗಿ ಮಸಾಜ್ ಮಾಡಿ.

ಉಸಿರಾಟದ ವ್ಯಾಯಾಮಗಳು ನೀವು ನಿತ್ಯ 15 ನಿಮಿಷಗಳ ಕಾಲ ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮವನ್ನು ಮಾಡಿ. ಈ ವ್ಯಾಯಾಮ ಮಾಡುವುದರಿಂದ ಉಸಿರಾಟ ಸರಾಗವಾಗುತ್ತದೆ. ನರಗಳಿಗೆಬ ವಿಶ್ರಾಂತಿ ಸಿಗುತ್ತದೆ.

ಲ್ಯಾವೆಂಡರ್ ಎಣ್ಣೆ ಈ ಲ್ಯಾವೆಂಡರ್ ಎಣ್ಣೆಯನ್ನು ಬೆಚ್ಚಗೆ ಮಾಡಿ ನಿಮ್ಮ ಹಣೆಗೆ ಹಚ್ಚಿ ಕೆಲ ಸಮಯಗಳ ಕಾಲ ಮಸಾಜ್ ಮಾಡಿ.

ನೀರಿನ ಕೊರತೆ ದೇಹಕ್ಕೆ ನೀರಿನ ಕೊರತೆಯುಂಟಾದಾಗಲೂ ತಲೆ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗಾಗಿ ತಲೆ ನೋವು ಬಂದಾಗ ಮೊದಲು ತಣ್ಣನೆಯ ನೀರು ಕುಡಿದು ನೋಡಿ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?