AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ
Headache
TV9 Web
| Edited By: |

Updated on: Aug 20, 2022 | 2:32 PM

Share

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ. ತುಂಬಾ ಬಿಸಿಲಿನಲ್ಲಿ ನಡೆದಾಗ, ನಿದ್ರೆ ಸರಿಯಾಗಿ ಮಾಡದಿದ್ದರೆ, ತೀವ್ರ ಒತ್ತಡಕ್ಕೆ ನೀವು ಒಳಗಾಗಿದ್ದರೆ ತಲೆನೋವು ಕಾಣಿಸಿಕೊಳ್ಳುತ್ತದೆ.

ಅವೆಲ್ಲವನ್ನು ಹೊರತುಪಡಿಸಿ, ಮೈಗ್ರೇನ್ ಸಮಸ್ಯೆಯಿದ್ದರೆ ಅಥವಾ ಮೆದುಳಿಗೆ ಸಂಬಂಧಿಸಿದ ಏನೇ ಸಮಸ್ಯೆಯಿದ್ದರೂ ತಲೆ ನೋವು ಆಗಾಗ ಬರುತ್ತದೆ.

ಆದರೆ ಸಹಜವಾಗಿ ಕಾಣಿಸಿಕೊಳ್ಳುವ ತಲೆನೋವನ್ನು ಮಾತ್ರಯಿಲ್ಲದೆ ಕಡಿಮೆ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಐಸ್‌ ಪ್ಯಾಕ್‌ ಐಸ್ ಕ್ಯೂಬ್​ಗಳನ್ನು ಬಟ್ಟೆಯಲ್ಲಿ ಸುತ್ತಿ ಮತ್ತು ಹಣೆಯ ಮೇಲೆ ನಿಧಾನವಾಗಿ ಒತ್ತಿರಿ. ಇದು ನಿಮಗೆ ನೋವಿನಿಂದ ಪರಿಹಾರವನ್ನು ನೀಡುತ್ತದೆ. ಸ್ವಲ್ಪ ಸಮಯದ ನಂತರ ನೀವು ಐಸ್ ಪ್ಯಾಕ್ ಅನ್ನು ಹಣೆಯ ಮೇಲೆ ಇಟ್ಟುಕೊಂಡು ಮಸಾಜ್‌ ರೀತಿ ಮಾಡಬಹುದು. ತಲೆನೋವನ್ನು ಗುಣಪಡಿಸಲು ಇದು ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ.

ನೆತ್ತಿಗೆ ಮಸಾಜ್ ಮಾಡಿ ನಿಮಗೆ ತಲೆನೋವು ಇದ್ದರೆ, ನೀವು ಯಾವುದೇ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿಕೊಳ್ಳಬಹುದು. ಇದು ನಿಮ್ಮ ನರಗಳಿಗೆ ಸಾಕಷ್ಟು ವಿಶ್ರಾಂತಿಯನ್ನು ನೀಡುತ್ತದೆ ಮತ್ತು ತಲೆನೋವಿನಿಂದ ಪರಿಹಾರ ಒದಗಿಸುತ್ತದೆ.

ಬಿಸಿ ಅಕ್ಕಿಯ ಶಾಖವನ್ನು ನೀಡಬಹುದು ಅಕ್ಕಿಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಒಂದು ಬಟ್ಟೆಯ ಚೀಲ ಅಥವಾ ಕಾಟನ್ ಬಟ್ಟೆಗೆ ಹಾಕಿ ಗಂಟು ಕಟ್ಟಿ, ಬಳಿಕ ಹಣೆಯ ಮೇಲೆ ನಿಧಾನವಾಗಿ ಮಸಾಜ್ ಮಾಡಿ.

ಉಸಿರಾಟದ ವ್ಯಾಯಾಮಗಳು ನೀವು ನಿತ್ಯ 15 ನಿಮಿಷಗಳ ಕಾಲ ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮವನ್ನು ಮಾಡಿ. ಈ ವ್ಯಾಯಾಮ ಮಾಡುವುದರಿಂದ ಉಸಿರಾಟ ಸರಾಗವಾಗುತ್ತದೆ. ನರಗಳಿಗೆಬ ವಿಶ್ರಾಂತಿ ಸಿಗುತ್ತದೆ.

ಲ್ಯಾವೆಂಡರ್ ಎಣ್ಣೆ ಈ ಲ್ಯಾವೆಂಡರ್ ಎಣ್ಣೆಯನ್ನು ಬೆಚ್ಚಗೆ ಮಾಡಿ ನಿಮ್ಮ ಹಣೆಗೆ ಹಚ್ಚಿ ಕೆಲ ಸಮಯಗಳ ಕಾಲ ಮಸಾಜ್ ಮಾಡಿ.

ನೀರಿನ ಕೊರತೆ ದೇಹಕ್ಕೆ ನೀರಿನ ಕೊರತೆಯುಂಟಾದಾಗಲೂ ತಲೆ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗಾಗಿ ತಲೆ ನೋವು ಬಂದಾಗ ಮೊದಲು ತಣ್ಣನೆಯ ನೀರು ಕುಡಿದು ನೋಡಿ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?