AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ.

Headache: ಮಾತ್ರೆಗಳು ಬೇಡ, ಸಹಜವಾಗಿಯೇ ತಲೆನೋವನ್ನು ನಿವಾರಿಸುವುದು ಹೇಗೆ? ಇಲ್ಲಿದೆ ಮಾಹಿತಿ
Headache
TV9 Web
| Edited By: |

Updated on: Aug 20, 2022 | 2:32 PM

Share

ತಲೆನೋವು ಸಾಮಾನ್ಯವಾಗಿ ಎಲ್ಲರನ್ನು ಒಂದಲ್ಲಾ ಒಂದು ಬಾರಿ ಕಾಡಿಯೇ ಕಾಡುತ್ತದೆ. ಆಹಾರವನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದಿದ್ದಾಗ, ಗ್ಯಾಸ್ಟ್ರಿಕ್ ಸಮಸ್ಯೆಯುಂಟಾಗಿ ತಲೆನೋವು ಕಾಡುತ್ತದೆ. ತುಂಬಾ ಬಿಸಿಲಿನಲ್ಲಿ ನಡೆದಾಗ, ನಿದ್ರೆ ಸರಿಯಾಗಿ ಮಾಡದಿದ್ದರೆ, ತೀವ್ರ ಒತ್ತಡಕ್ಕೆ ನೀವು ಒಳಗಾಗಿದ್ದರೆ ತಲೆನೋವು ಕಾಣಿಸಿಕೊಳ್ಳುತ್ತದೆ.

ಅವೆಲ್ಲವನ್ನು ಹೊರತುಪಡಿಸಿ, ಮೈಗ್ರೇನ್ ಸಮಸ್ಯೆಯಿದ್ದರೆ ಅಥವಾ ಮೆದುಳಿಗೆ ಸಂಬಂಧಿಸಿದ ಏನೇ ಸಮಸ್ಯೆಯಿದ್ದರೂ ತಲೆ ನೋವು ಆಗಾಗ ಬರುತ್ತದೆ.

ಆದರೆ ಸಹಜವಾಗಿ ಕಾಣಿಸಿಕೊಳ್ಳುವ ತಲೆನೋವನ್ನು ಮಾತ್ರಯಿಲ್ಲದೆ ಕಡಿಮೆ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಐಸ್‌ ಪ್ಯಾಕ್‌ ಐಸ್ ಕ್ಯೂಬ್​ಗಳನ್ನು ಬಟ್ಟೆಯಲ್ಲಿ ಸುತ್ತಿ ಮತ್ತು ಹಣೆಯ ಮೇಲೆ ನಿಧಾನವಾಗಿ ಒತ್ತಿರಿ. ಇದು ನಿಮಗೆ ನೋವಿನಿಂದ ಪರಿಹಾರವನ್ನು ನೀಡುತ್ತದೆ. ಸ್ವಲ್ಪ ಸಮಯದ ನಂತರ ನೀವು ಐಸ್ ಪ್ಯಾಕ್ ಅನ್ನು ಹಣೆಯ ಮೇಲೆ ಇಟ್ಟುಕೊಂಡು ಮಸಾಜ್‌ ರೀತಿ ಮಾಡಬಹುದು. ತಲೆನೋವನ್ನು ಗುಣಪಡಿಸಲು ಇದು ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ.

ನೆತ್ತಿಗೆ ಮಸಾಜ್ ಮಾಡಿ ನಿಮಗೆ ತಲೆನೋವು ಇದ್ದರೆ, ನೀವು ಯಾವುದೇ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿಕೊಳ್ಳಬಹುದು. ಇದು ನಿಮ್ಮ ನರಗಳಿಗೆ ಸಾಕಷ್ಟು ವಿಶ್ರಾಂತಿಯನ್ನು ನೀಡುತ್ತದೆ ಮತ್ತು ತಲೆನೋವಿನಿಂದ ಪರಿಹಾರ ಒದಗಿಸುತ್ತದೆ.

ಬಿಸಿ ಅಕ್ಕಿಯ ಶಾಖವನ್ನು ನೀಡಬಹುದು ಅಕ್ಕಿಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಒಂದು ಬಟ್ಟೆಯ ಚೀಲ ಅಥವಾ ಕಾಟನ್ ಬಟ್ಟೆಗೆ ಹಾಕಿ ಗಂಟು ಕಟ್ಟಿ, ಬಳಿಕ ಹಣೆಯ ಮೇಲೆ ನಿಧಾನವಾಗಿ ಮಸಾಜ್ ಮಾಡಿ.

ಉಸಿರಾಟದ ವ್ಯಾಯಾಮಗಳು ನೀವು ನಿತ್ಯ 15 ನಿಮಿಷಗಳ ಕಾಲ ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮವನ್ನು ಮಾಡಿ. ಈ ವ್ಯಾಯಾಮ ಮಾಡುವುದರಿಂದ ಉಸಿರಾಟ ಸರಾಗವಾಗುತ್ತದೆ. ನರಗಳಿಗೆಬ ವಿಶ್ರಾಂತಿ ಸಿಗುತ್ತದೆ.

ಲ್ಯಾವೆಂಡರ್ ಎಣ್ಣೆ ಈ ಲ್ಯಾವೆಂಡರ್ ಎಣ್ಣೆಯನ್ನು ಬೆಚ್ಚಗೆ ಮಾಡಿ ನಿಮ್ಮ ಹಣೆಗೆ ಹಚ್ಚಿ ಕೆಲ ಸಮಯಗಳ ಕಾಲ ಮಸಾಜ್ ಮಾಡಿ.

ನೀರಿನ ಕೊರತೆ ದೇಹಕ್ಕೆ ನೀರಿನ ಕೊರತೆಯುಂಟಾದಾಗಲೂ ತಲೆ ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹೀಗಾಗಿ ತಲೆ ನೋವು ಬಂದಾಗ ಮೊದಲು ತಣ್ಣನೆಯ ನೀರು ಕುಡಿದು ನೋಡಿ.

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ