AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯವನ್ನು ಕಾಪಾಡಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ

ಈಗಿನ ಬದಲಾದ ಜೀವನಶೈಲಿ ಅಂದರೆ ಒತ್ತಡ ಹಾಗೂ ಕಳಪೆ ಆಹಾರ ಕ್ರಮದಿಂದಾಗಿ ದೇಹದಲ್ಲಿನ ರೋಗ ನಿರೋಧಕ ಶಕ್ತಿಯೂ ಕಡಿಮೆಯಾಗುತ್ತದೆ. ಪರಿಣಾಮ ಜನರು ವೇಗವಾಗಿ ಕಾಯಿಲೆಗೆ ತುತ್ತಾಗುತ್ತದೆ.

ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯವನ್ನು ಕಾಪಾಡಲು ತಜ್ಞರು ನೀಡಿರುವ ಸಲಹೆ ಇಲ್ಲಿದೆ
ಬೇಸಿಗೆಯಲ್ಲಿ ಕಿಡ್ನಿಯ ಆರೋಗ್ಯ
ಅಕ್ಷತಾ ವರ್ಕಾಡಿ
|

Updated on:Mar 09, 2023 | 4:14 PM

Share

ದೇಹದ ಪ್ರತಿಯೊಂದು ಅಂಗವು ಸರಾಗವಾಗಿ ಕಾರ್ಯನಿರ್ವಹಿಸಲು ಮೂತ್ರಪಿಂಡಗಳ ಅತ್ಯಂತ ಅಗತ್ಯ.ಮೂತ್ರಕೋಶ ಅಥವಾ ಮೂತ್ರಪಿಂಡಗಳು ದೇಹದ ಅವಿಭಾಜ್ಯ ಅಂಗವಾಗಿದೆ. ಇದು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನೀವು ಆರೋಗ್ಯವಾಗಿರಲು ಸಾಧ್ಯ. ಇದು ರಕ್ತದಿಂದ ತ್ಯಾಜ್ಯ ಮತ್ತು ಹೆಚ್ಚುವರಿ ದ್ರವವನ್ನು ತೆಗೆದುಹಾಕುವಲ್ಲಿ ಸಹಾಯಕವಾಗಿದೆ. ಕೆಂಪು ರಕ್ತ ಕಣಗಳ ಉತ್ಪಾದನೆಯನ್ನು ಉತ್ತೇಜಿಸುವ ಹಾರ್ಮೋನ್ಗಳನ್ನು ಉತ್ಪಾದಿಸುತ್ತದೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆದರೆ ಈಗಿನ ಬದಲಾದ ಜೀವನಶೈಲಿ ಅಂದರೆ ಒತ್ತಡ ಹಾಗೂ ಕಳಪೆ ಆಹಾರ ಕ್ರಮದಿಂದಾಗಿ ದೇಹದಲ್ಲಿನ ರೋಗ ನಿರೋಧಕ ಶಕ್ತಿಯೂ ಕಡಿಮೆಯಾಗುತ್ತದೆ. ಪರಿಣಾಮ ಜನರು ವೇಗವಾಗಿ ಕಾಯಿಲೆಗೆ ತುತ್ತಾಗುತ್ತದೆ.  ಹರಿಯಾಣದ ಸಿಕೆ ಬಿರ್ಲಾ ಆಸ್ಪತ್ರೆಯ ಡಾ ಮೋಹಿತ್ ಖಿರ್ಬತ್​​ ರವರು ಇಂಡಿಯಾ ಡಾಟ್​​ ಕಾಮ್​​​ನೊಂದಿಗೆ ಹಂಚಿಕೊಂಡಿರುವ ಮಾಹಿತಿ ಇಲ್ಲಿದೆ

ಮೂತ್ರಪಿಂಡದ ಸಮಸ್ಯೆಗಳು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚುವುದು ಅಷ್ಟೊಂದು ಸುಲಭವಲ್ಲ. ಪ್ರಪಂಚದಾದ್ಯಂತದ ಪ್ರತಿಯೊಬ್ಬರೂ ಮೂತ್ರಪಿಂಡದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಬೇಸಿಗೆಯಲ್ಲಿ ಆರೋಗ್ಯಕರ ಮೂತ್ರಪಿಂಡಗಳಿಗೆ ಕೆಲವು ತಜ್ಞರು ಶಿಫಾರಸು ಮಾಡಿದ ಸಲಹೆಗಳು ಇಲ್ಲಿವೆ. ಮೂತ್ರಪಿಂಡಗಳನ್ನು ಆರೋಗ್ಯವಾಗಿಡಲು ನೀವು ಮಾಡಬಹುದಾದ ಪ್ರಮುಖ ವಿಷಯವೆಂದರೆ ಸಾಕಷ್ಟು ನೀರು ಕುಡಿಯುವುದು.

ಇದನ್ನೂ ಓದಿ: ಈ ಸಮಸ್ಯೆಗಳು ನಿಮ್ಮಲ್ಲಿ ಕಂಡುಬಂದರೆ, ಇದು ಕಿಡ್ನಿ ಸ್ಟೋನ್​​ನ ಆರಂಭಿಕ ಲಕ್ಷಣಗಳಾಗಿರಬಹುದು

ಸಾಮಾನ್ಯವಾಗಿ, ಒಬ್ಬರು ದಿನಕ್ಕೆ 2 ರಿಂದ 3 ಲೀಟರ್ ನೀರನ್ನು ತೆಗೆದುಕೊಳ್ಳಬೇಕು. ಕಡಿಮೆ ನೀರು ಕುಡಿಯುವುದರಿಂದ, ದೇಹದಿಂದ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಮೂತ್ರಪಿಂಡಗಳಿಗೆ ತೊಂದರೆಯಾಗುತ್ತದೆ. ವಾಸ್ತವವಾಗಿ, ಕಡಿಮೆ ನೀರು ಕುಡಿಯುವುದರಿಂದ ನಿರ್ಜಲೀಕರಣದ ಅಪಾಯವಿದೆ.

ಬೇಸಿಗೆಯಲ್ಲಿ, ತೀವ್ರವಾದ ಅತಿಸಾರ ರೋಗಗಳ ಅಪಾಯವೂ ಹೆಚ್ಚು, ಆದ್ದರಿಂದ ಸೇವಿಸುವ ಆಹಾರ ಮತ್ತು ನೀರು ಶುದ್ಧ ಮತ್ತು ಆರೋಗ್ಯಕರ ಮೂಲದಿಂದ ಬಂದಿರುವುದು ಬಹಳ ಮುಖ್ಯ. ಆದ್ದರಿಂದ ಉತ್ತಮ ಮೂತ್ರಪಿಂಡದ ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಾಕಷ್ಟು ನೀರಿನ ಸೇವನೆಯು ಅತ್ಯಗತ್ಯ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:04 pm, Thu, 9 March 23

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!