AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನಾಯು ಸೆಳೆತದಿಂದ ಮುಕ್ತಿ ಹೊಂದಲು ಇಲ್ಲಿವೆ ಸರಳ ಮನೆಮದ್ದುಗಳು ಟ್ರೈ ಮಾಡಿ ನೋಡಿ!

ಒಂದೇ ಭಂಗಿಯಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳಲ್ಲಿ (muscle cramps) ಬಿಗಿತ ಉಂಟಾಗುತ್ತದೆ. ಇದರಿಂದಾಗಿ ಸ್ನಾಯು ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಸ್ನಾಯು ಸೆಳೆತದಿಂದ ಮುಕ್ತಿ ಹೊಂದಲು ಇಲ್ಲಿವೆ ಸರಳ ಮನೆಮದ್ದುಗಳು ಟ್ರೈ ಮಾಡಿ ನೋಡಿ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 21, 2022 | 8:12 PM

ಒಂದೇ ಭಂಗಿಯಲ್ಲಿ ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳಲ್ಲಿ (muscle cramps) ಬಿಗಿತ ಉಂಟಾಗುತ್ತದೆ. ಇದರಿಂದಾಗಿ ಸ್ನಾಯು ನೋವಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಲ್ಲದೆ, ಕೆಲವೊಮ್ಮೆ ಜಿಮ್, ಕ್ರೀಡೆ ಅಥವಾ ದೈಹಿಕ ಶ್ರಮ ಮುಂತಾದ ಹೆಚ್ಚಿನ ದೈಹಿಕ ಚಟುವಟಿಕೆಗಳನ್ನು ಮಾಡುವುದರಿಂದಲೂ ಸಹ ಸ್ನಾಯು ನೋವು ಮತ್ತು ಬಿಗಿತ ಉಂಟಾಗುತ್ತದೆ. ಈ ಸ್ನಾಯುವಿನ ಸೆಳೆತ ಎಲ್ಲಾ ವಯಸ್ಸಿನ ಜನರನ್ನು ಕಾಡುವ ಸಮಸ್ಯೆಯಾಗಿದೆ. ಸ್ನಾಯು ಅಂಗಾಂಶದ ಹಾನಿ ಮತ್ತು ಅವುಗಳಲ್ಲಿ ಉರಿಯೂತದಿಂದ ಈ ಸಮಸ್ಯೆ ಉಂಟಾಗುತ್ತದೆ. ವ್ಯಾಯಾಮ, ಜಾರಿಬೀಳುವುದು, ಮಲಗುವುದು ಮತ್ತು ಸರಿಯಾದ ರೀತಿಯಲ್ಲಿ ಕುಳಿತುಕೊಳ್ಳುದಿರುವುದು ಸ್ನಾಯುಗಳ ಬಿಗಿತಕ್ಕೆ ಕಾರಣವಾಗಬಹುದು. ಕಾಲಿನ ಸ್ನಾಯುಗಳು ದುರ್ಬಲಗೊಳ್ಳುವುದರಿಂದ ಸರಿಯಾಗಿ ನಿಲ್ಲಲು ಸಹ ಆಗುವುದಿಲ್ಲ. ಈ ಸೆಳೆತದಿಂದ ಮುಕ್ತಿ ಹೊಂದಲು ನೀವು ವಿವಿಧ ಮನೆಮದ್ದುಗಳನ್ನು ಅನುಸರಿಸಬಹುದಾಗಿದೆ.

ನೋವಿಗೆ ಕಾರಣ ಏನು?

ಸ್ನಾಯು ನೋವಿಗೆ ಹಲವು ಕಾರಣಗಳಿವೆ. ವಿಟಮಿನ್ ಡಿ, ಥೈರಾಯ್ಡ್ ಸಮಸ್ಯೆ, ದೇಹದಲ್ಲಿ ಉಪ್ಪು ಮತ್ತು ನೀರಿನ ಕೊರತೆ, ಸ್ಟೀರಾಯ್ಡ್ಗಳ ಅತಿಯಾದ ಸೇವನೆಯಿಂದ ಸ್ನಾಯು ನೋವು ಉಂಟಾಗುತ್ತದೆ. ತೋಳುಗಳು ಮತ್ತು ಕಾಲುಗಳಲ್ಲಿ ನೋವು ಮತ್ತು ದೌರ್ಬಲ್ಯಕ್ಕೂ ಇದು ಕಾರಣವಾಗುತ್ತದೆ.

ಪರಿಹಾರ ಏನು?

ನೀವು ಪಾದದ ಸ್ನಾಯುಗಳಲ್ಲಿ ನೋವಿನಿಂದ ಬಳಲುತ್ತಿದ್ದರೆ. ಐಸ್ ಕ್ಯೂಬ್​ನ್ನು ಅನ್ವಯಿಸಿ. ಇದು ಸ್ನಾಯುಗಳಲ್ಲಿ ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ. ಹೀಗೆ ಮಾಡುವುದರಿಂದ ನೀವು ತಕ್ಷಣ ಪರಿಹಾರವನ್ನು ಪಡೆಯುತ್ತೀರಿ. 15-20 ನಿಮಿಷಗಳ ಕಾಲ ಸ್ನಾಯುವಿನ ಮೇಲೆ ಐಸ್​ನಿಂದ ಮಸಾಜ್​ ಮಾಡುವುದರಿಂದ ಪರಿಹಾರ ಸಿಗುತ್ತದೆ.

ಆಹಾರ:

ಸ್ನಾಯು ನೋವಿನಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಶುಂಠಿಯನ್ನು ಸೇರಿಸಿ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಶುಂಠಿಯು ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಸ್ನಾಯು ಸೆಳೆತ, ನೋವು ಮತ್ತು ಬಿಗಿತವನ್ನು ಕಡಿಮೆ ಮಾಡಲು ಇದು ಪರಿಣಾಮಕಾರಿಯಾಗಿದೆ.

ಸಾಸಿವೆ ಎಣ್ಣೆ ಮಸಾಜ್:

ಪ್ರತಿದಿನ ಸಾಸಿವೆ ಎಣ್ಣೆಯಿಂದ ಕಾಲಿನ ಸ್ನಾಯುಗಳಿಗೆ ಮಸಾಜ್ ಮಾಡುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಸಿವೆ ಎಣ್ಣೆ ಕಾಲು ನೋವನ್ನು ನಿವಾರಿಸುತ್ತದೆ. ಮಸಾಜ್ ಮಾಡುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ಸ್ನಾಯುವಿನ ಒತ್ತಡ ಕಡಿಮೆಯಾಗುತ್ತದೆ.

ವ್ಯಾಯಾಮ:

ನೀವು ಸ್ನಾಯು ಸೆಳೆತ ಅಥವಾ ನೋವಿನಿಂದ ಮುಕ್ತಿ ಹೊಂದಲು ಬಯಸಿದರೆ ವ್ಯಾಯಾಮ ಮಾಡಿ. ವ್ಯಾಯಾಮವು ಸ್ನಾಯುಗಳ ಬಿಗಿತವನ್ನು ನಿವಾರಿಸುತ್ತದೆ. ವ್ಯಾಯಾಮ ಮಾಡುವುದರಿಂದ ಕಾಲುಗಳಲ್ಲಿ ಉಂಟಾಗುವ ನೋವು ನಿಧಾನವಾಗಿ ಕಡಿಮೆಯಾಗುತ್ತದೆ. ಅಷ್ಟೇ ಅಲ್ಲ, ಊತವೂ ನಿಧಾನವಾಗಿ ಕಡಿಮೆಯಾಗುತ್ತದೆ. ನೀವು ಸ್ನಾಯು ನೋವಿನಿಂದ ಮುಕ್ತಿ ಪಡೆಯುತ್ತೀರಿ.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಆರೋಗ್ಯ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ